ಬ್ರೇಕಿಂಗ್ ನ್ಯೂಸ್
16-10-22 04:48 pm Mangalore Correspondent ಕರಾವಳಿ
ಮಂಗಳೂರು, ಅ.16 : ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಮುಖ್ಯ ದ್ವಾರದಲ್ಲಿ ನ್ಯಾಯಾಧೀಶರು ಮತ್ತು ನ್ಯಾಯಾಲಯ ಸಿಬಂದಿಗೆ ಮಾತ್ರ ಪ್ರವೇಶ ಎಂದು ಬೋರ್ಡ್ ಹಾಕಲಾಗಿದೆ. ಈ ಬಗ್ಗೆ ವಕೀಲರ ಸಂಘವು ಆಕ್ಷೇಪ ವ್ಯಕ್ತಪಡಿಸಿದೆ.
ನ್ಯಾಯಾಲಯ ಕಟ್ಟಡವು ಸಾರ್ವಜನಿಕರಿಗೆ ಮುಕ್ತ ಪ್ರವೇಶ ಹೊಂದಿರುವ ಕಟ್ಟಡವಾಗಿದ್ದರೂ ಜಿಲ್ಲಾ ನ್ಯಾಯಾಧೀಶರು ಜಿಲ್ಲಾ ನ್ಯಾಯಾಲಯದ ಸಂಕೀರ್ಣದ ಮುಖ್ಯ ದ್ವಾರವನ್ನು ಕೇವಲ ನ್ಯಾಯಾಧೀಶರಿಗೆ ಮಾತ್ರ ಪ್ರವೇಶ ಎನ್ನುವ ನಿರ್ಬಂಧ ಹಾಕಿರುವುದು ವಕೀಲ ಸಮುದಾಯದಲ್ಲಿ ಅಸಮಾಧಾನ ತರಿಸಿದೆ. ನ್ಯಾಯಾಂಗದ ಭಾಗವಾಗಿರುವ ನ್ಯಾಯವಾದಿಗಳಿಗೂ ಪ್ರವೇಶ ನಿರ್ಬಂಧಿಸಿದ್ದು ಆಕ್ಷೇಪಕ್ಕೆ ಕಾರಣವಾಗಿದೆ.
ಈ ಬಗ್ಗೆ ಶನಿವಾರ ಕಟ್ಟಡದ ಮುಂಭಾಗದ ಪ್ರಮುಖ ದ್ವಾರದಲ್ಲಿ ಈ ರೀತಿ ಬೋರ್ಡ್ ಹಾಕಿರುವುದು ತಿಳಿಯುತ್ತಿದ್ದಂತೆ ವಕೀಲರ ಸಂಘದ ಪ್ರತಿನಿಧಿಗಳು ಮುಖ್ಯ ನ್ಯಾಯಾಧೀಶರನ್ನು ಭೇಟಿಯಾಗಿದ್ದಾರೆ. ಭದ್ರತೆ ಸಲುವಾಗಿ ಈ ರೀತಿಯ ನಿರ್ಣಯ ಮಾಡಲಾಗಿದೆ. ಅದನ್ನು ನೀವು ಪ್ರಶ್ನೆ ಮಾಡುವಂತಿಲ್ಲ ಎಂದು ನ್ಯಾಯಾಧೀಶರು ಹೇಳಿದ್ದಾರೆಂದು ವಕೀಲರ ಸಂಘದ ಕಾರ್ಯದರ್ಶಿ ಶ್ರೀಧರ ಎಣ್ಮಕಜೆ ತಿಳಿಸಿದ್ದಾರೆ.
ಈ ಬಗ್ಗೆ ಅ.18ರಂದು ವಕೀಲರ ಸಂಘದ ಎಲ್ಲ ಸದಸ್ಯರ ಸಭೆಯನ್ನು ಕರೆಯಲಾಗಿದ್ದು ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ. ವಕೀಲರು ನ್ಯಾಯಾಂಗದ ಭಾಗ ಆಗಿರುವಾಗ 30 ಮಂದಿ ನ್ಯಾಯಾಧೀಶರ ಸಲುವಾಗಿ ಮುಖ್ಯ ಪ್ರವೇಶವನ್ನೇ ನಿರ್ಬಂಧಿಸಿದ್ದು ಸರಿಯಲ್ಲ. ಈ ರೀತಿ ನಿರ್ಣಯ ಯಾಕೆ ಕೈಗೊಂಡಿದ್ದಾರೆ ಎನ್ನುವುದೂ ಸ್ಪಷ್ಟವಾಗಿಲ್ಲ. ವಕೀಲರು, ಸಾರ್ವಜನಿಕರಿಗೂ ನ್ಯಾಯಾಲಯ ಪ್ರವೇಶಕ್ಕೆ ಬೇರೆ ಬಾಗಿಲು ಮಾಡುತ್ತಾರೆಯೇ ಎಂದವರು ಪ್ರಶ್ನಿಸಿದ್ದಾರೆ.
Mangalore Lawyers go angry after the court main door reserved only for Judicial officers only and not for any advocates.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
14-05-25 01:42 pm
Mangalore Correspondent
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm