ಬ್ರೇಕಿಂಗ್ ನ್ಯೂಸ್
17-10-22 03:33 pm Mangalore Correspondent ಕರಾವಳಿ
ಮಂಗಳೂರು, ಅ.17 : ಖಾಸಗಿ ಬಸ್ ಚಾಲಕನ ಅತಿ ವೇಗ ಮತ್ತು ಧಾವಂತದ ಚಾಲನೆಗೆ ಎಂಟನೇ ತರಗತಿಯ ವಿದ್ಯಾರ್ಥಿ ನಡು ರಸ್ತೆಯಲ್ಲಿ ದುರಂತವಾಗಿ ಮೃತಪಟ್ಟ ಘಟನೆ ನಗರದ ಲಾಲ್ ಭಾಗ್ ವೃತ್ತದ ಬಳಿ ನಡೆದಿದೆ.
ಮೃತ ಬಾಲಕನನ್ನು ಪಡೀಲ್ ಕಣ್ಣೂರಿನ ನಿವಾಸಿ ಕರುಣಾಕರ ಬೆಳ್ಚಡ ಅವರ ಪುತ್ರ ರಕ್ಷಣ್(13) ಎಂದು ಗುರುತಿಸಲಾಗಿದೆ. ಪಡೀಲಿನ ಕಪಿತಾನಿಯೋ ಸ್ಕೂಲಿನಲ್ಲಿ ಎಂಟನೇ ತರಗತಿ ಓದುತ್ತಿದ್ದ ರಕ್ಷಣ್ ಇವತ್ತು ಮನೆಯಲ್ಲಿ ಪೂಜೆ ಇದೆಯೆಂದು ಶಾಲೆಗೆ ರಜೆ ಹಾಕಿದ್ದ. ಬೆಳಗ್ಗೆ ಚಿಕ್ಕಪ್ಪ ಪಡು ಬೊಂಡಂತಿಲ ನಿವಾಸಿ ನಾರಾಯಣ ಎಂಬವರ ಜೊತೆಗೆ ಪೂಜೆಯ ಸಾಮಾನು ತರಲೆಂದು ಬೈಕಿನಲ್ಲಿ ಮಂಗಳೂರಿಗೆ ಬಂದಿದ್ದ.

ಇವರು ಸಾಮಾನು ಖರೀದಿಸಿ ಉರ್ವಾ- ಲೇಡಿಹಿಲ್ ಕಡೆಯಿಂದ ಲಾಲ್ ಬಾಗಿನತ್ತ ಬರುತ್ತಿದ್ದಾಗ, ಹಿಂದಿನಿಂದ ಯಮದೂತನಂತೆ ಧಾವಿಸಿ ಬಂದ ಖಾಸಗಿ ಬಸ್ ಪಬ್ಬಾಸ್ ಎದುರಿನ ಅಶ್ವತ್ಧ ಕಟ್ಟೆಯ ಬಳಿ ಬೈಕಿಗೆ ಡಿಕ್ಕಿಯಾಗಿದೆ. ಬೈಕಿಗೆ ಡಿಕ್ಕಿಯಾದ ರಭಸಕ್ಕೆ ಹಿಂದೆ ಕುಳಿತಿದ್ದ ರಕ್ಷಣ್ ರಸ್ತೆಗೆ ಎಸೆಯಲ್ಪಟ್ಟಿದ್ದು ಆತನ ಮೇಲಿಂದಲೇ ಬಸ್ ಹರಿದಿದೆ. ಬೈಕ್ ಸವಾರ ನಾರಾಯಣ ಎಡದ ಭಾಗಕ್ಕೆ ವಾಲಿ ಬಿದ್ದಿದ್ದರಿಂದ ಅಪಾಯದಿಂದ ಪಾರಾಗಿದ್ದಾರೆ. ರಕ್ಷಣ್ ಸ್ಥಳದಲ್ಲೇ ದುರಂತ ಸಾವು ಕಂಡಿದ್ದಾನೆ.
ಮಂಗಳೂರು – ಕಿನ್ನಿಗೋಳಿ – ಕಟೀಲು ನಡುವೆ ಸಂಚರಿಸುವ ಖಾಸಗಿ ಬಸ್, ಇನ್ನೊಂದು ಬಸ್ಸನ್ನು ಓವರ್ ಟೇಕ್ ಮಾಡುವ ಭರದಲ್ಲಿ ಎಡ ಭಾಗದಿಂದ ಸಂಚರಿಸಿದ್ದರಿಂದ ಅಪಘಾತ ಆಗಿದೆ ಎನ್ನಲಾಗಿದೆ. ಸಂಚಾರಿ ವಿಭಾಗದ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
An accident between a bus and a two-wheeler claimed the life of a 12-year-old boy on Monday October 17 at Lalbagh in Mangalore. The deceased is identified as Dhanu from Neermarga.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
15-11-25 07:09 pm
HK News Desk
ಶ್ರೀನಗರ ಪೊಲೀಸ್ ಠಾಣೆಯಲ್ಲಿ ಭೀಕರ ಸ್ಫೋಟ ; 6 ಮಂದಿ...
15-11-25 12:06 pm
ಬಿಹಾರ ಫಲಿತಾಂಶ ; ‘ಛೋಟೇ ಸರ್ಕಾರ್’ ಖ್ಯಾತಿಯ ಅನಂತ್...
14-11-25 09:10 pm
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
15-11-25 07:42 pm
Mangalore Correspondent
Panambur Accident, Mangalore, Three dead: ಪಣಂ...
15-11-25 02:47 pm
ಬಿಹಾರದಲ್ಲಿ ಚುನಾವಣೆ ಮುನ್ನ ಹತ್ತು ಸಾವಿರ ಕೊಟ್ಟು ಮ...
15-11-25 01:51 pm
ಬಿ.ಸಿ. ರೋಡ್ ಬಳಿ ಭೀಕರ ಅಪಘಾತ ; ಉಡುಪಿ ಕೃಷ್ಣ ಮಠಕ್...
15-11-25 12:12 pm
Kumapal Dog Attack, Ullal, Mangalore: ಕುಂಪಲ ಬ...
14-11-25 11:01 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm