ಬ್ರೇಕಿಂಗ್ ನ್ಯೂಸ್
20-10-22 10:02 pm Mangalore Correspondent ಕರಾವಳಿ
ಮಂಗಳೂರು, ಅ.20 : ಸುರತ್ಕಲ್ ಟೋಲ್ಗೇಟ್ ವಿರುದ್ಧ ಪ್ರತಿಭಟನೆ ನಡೆಸಿದ ಕಾರಣಕ್ಕಾಗಿ ಹೋರಾಟ ಸಮಿತಿಯ ಮುಖಂಡರ ವಿರುದ್ಧ ಪ್ರಕರಣ ದಾಖಲಾಗಿದೆ. ಟೋಲ್ಗೇಟ್ ವ್ಯವಸ್ಥಾಪಕ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರು ನೀಡಿದ ಪ್ರತ್ಯೇಕ ದೂರನ್ನು ಆಧರಿಸಿ, ಸುರತ್ಕಲ್ ಠಾಣೆಯಲ್ಲಿ ಎರಡು ಎಫ್ಐಆರ್ ದಾಖಲಾಗಿದೆ.
ಅ.18ರಂದು ಹೋರಾಟ ಸಮಿತಿಯ 25- 30ಕ್ಕು ಹೆಚ್ಚು ಸದಸ್ಯರು ಅಕ್ರಮ ಕೂಟ ಸೇರಿ ಸುರತ್ಕಲ್ ಟೋಲ್ ಪ್ಲಾಜಾ ಎದುರು ರಸ್ತೆಯಲ್ಲಿ ಕುಳಿತು ಘೋಷಣೆ ಕೂಗುತ್ತ, ವಾಹನ ಸಂಚಾರ ತಡೆದು ನಿಲ್ಲಿಸಿದ್ದಾರೆ. ಸುಗಮ ಸಂಚಾರಕ್ಕೆ ಅಡ್ಡಿ ಪಡಿಸಿದ್ದಾರೆ. ಇವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಎಂದು ದೂರಿನಲ್ಲಿ ತಿಳಿಸಿದ್ದಾರೆ.


ಟೋಲ್ಗೇಟ್ ವಿರೋಧಿ ಹೋರಾಟ ಸಮಿತಿಯವರು ಎಸಿಪಿ ಕಚೇರಿಯಲ್ಲಿ ಅ.14ರಂದು ನಡೆದ ಸಭೆಯಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುವುದಾಗಿ ಹೇಳಿದ್ದರೂ, ಅ.18ರಂದು ನಡೆಸಿದ ಪ್ರತಿಭಟನೆಯ ವೇಳೆ ವಾಹನ ಸಂಚಾರಕ್ಕೆ ಅಡ್ಡಿ ಮಾಡಿದ್ದಾರೆ' ಎಂದು ದೂರಲಾಗಿದೆ.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಲಿಂಗೇಗೌಡ ಹಾಗೂ ಸುರತ್ಕಲ್ ಎನ್ಐಟಿಕೆ ಟೋಲ್ನ ಶುಲ್ಕ ವಸೂಲಿ ಏಜೆನ್ಸಿ ನೂರ್ ಮೊಹಮ್ಮದ್ ಸಂಸ್ಥೆಯ ಸುರತ್ಕಲ್ ವಿಭಾಗದ ವ್ಯವಸ್ಥಾಪಕ ಶಿಶುಪಾಲ್ ಸಿಂಗ್ ಅವರು ಅ.18ರಂದೇ ದೂರು ನೀಡಿದ್ದು, ಪೊಲೀಸರು ಅದೇ ದಿನ ಎಫ್ಐಆರ್ ದಾಖಲಿಸಿದ್ದಾರೆ.

ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 143, 147, 341, 283, 149 (ಅಕ್ರಮ ಕೂಟ ಸೇರಿ, ಸಾರ್ವಜನಿಕರ ಸುರಕ್ಷತೆಗೆ ಅಡ್ಡಿಪಡಿಸಿದ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಎಫ್ಐಆರ್ನಲ್ಲಿ ಯಾವುದೇ ವ್ಯಕ್ತಿಯ ಹೆಸರನ್ನು ಉಲ್ಲೇಖಿಸಿಲ್ಲ.
Mangalore Trouble of traffic moments during protest of surathkal toll, separate FIR has been registered with activists who were involved during the protest.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 02:16 pm
HK News Staffer
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm