ಬ್ರೇಕಿಂಗ್ ನ್ಯೂಸ್
11-10-20 01:59 pm Mangaluru Correspondent ಕರಾವಳಿ
ಮಂಗಳೂರು, ಅಕ್ಟೋಬರ್ 11: ಮುಡಿಪು ಮಣ್ಣು ಮಾರಾಟ ದಂಧೆಯ ಬಗ್ಗೆ ‘ಹೆಡ್ ಲೈನ್ ಕರ್ನಾಟಕ’ ಮಾಡಿದ ವಿಸ್ತೃತ ವರದಿಯಿಂದ ಅಧಿಕಾರಿಗಳು ಎಚ್ಚತ್ತುಕೊಂಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ., ಗಣಿಗಾರಿಕೆ ಬಗ್ಗೆ ಪರಿಶೀಲನೆ ನಡೆಸಿ ವರದಿ ನೀಡುವುದಕ್ಕಾಗಿ ಏಳು ಮಂದಿ ಅಧಿಕಾರಿಗಳನ್ನು ನಿಯೋಜಿಸಿದ್ದಾಗಿ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಸೂಚನೆಯಂತೆ ಮಂಗಳೂರಿನ ಸಹಾಯಕ ಕಮಿಷನರ್ ಮದನ್ ಮೋಹನ್, ಪೊಲೀಸರ ಜೊತೆಗೆ ಅಕ್ರಮ ದಂಧೆ ನಡೆಯುವ ಮುಡಿಪು ಪ್ರದೇಶಕ್ಕೆ ದಾಳಿ ನಡೆಸಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದ ಒಬ್ಬನನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೆ, ಗಣಿಗಾರಿಕೆ ಸ್ಥಳದಲ್ಲಿದ್ದ 30ಕ್ಕೂ ಹೆಚ್ಚು ಟಿಪ್ಪರ್ ಮತ್ತು ಕಂಟೇನರ್ ಲಾರಿ, 5 ಜೆಸಿಬಿ ಹಾಗೂ ಮೂರು ಹಿಟಾಚಿ ಯಂತ್ರಗಳನ್ನು ವಶಕ್ಕೆ ಪಡೆದಿದ್ದಾರೆ.



ಮಣ್ಣು ಮಾರಾಟ ದಂಧೆಯ ಬಗ್ಗೆ ಗಮನಕ್ಕೆ ಬಂದಿದೆ. ಪ್ರಕರಣದ ಬಗ್ಗೆ ತನಿಖೆ ನಡೆಸಲು ಏಳು ಮಂದಿ ಅಧಿಕಾರಿಗಳನ್ನು ನಿಯೋಜಿಸಿದ್ದೇನೆ. ಪರಿಸರಕ್ಕೆ ಹಾನಿಯಾಗುವ ವಿಚಾರದಲ್ಲಿ ದೂರುಗಳು ಬಂದಿದ್ದವು. ಸ್ಥಳದಲ್ಲಿ ಗಣಿಗಾರಿಕೆ ನಡೆಸಲು ಲೈಸನ್ಸ್ ಇದೆಯೇ ಅಥವಾ ಮಣ್ಣು ಮಾರಾಟಕ್ಕೆ ಲೈಸನ್ಸ್ ಇದೆಯೇ ಅನ್ನುವ ವಿಚಾರದಲ್ಲಿ ಒಂದು ವಾರದೊಳಗೆ ರಿಪೋರ್ಟ್ ನೀಡಲು ಆದೇಶ ಮಾಡಿರುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಮಂಗಳೂರು ಹೊರವಲಯದ ಮುಡಿಪು, ಪಜೀರು, ಕೈರಂಗಳ, ಬಾಳೆಪುಣಿ, ಕೋಣಾಜೆ ಗ್ರಾಮಗಳಲ್ಲಿ ದೊಡ್ಡ ಮಟ್ಟದ ಅಕ್ರಮ ಬಾಕ್ಸೈಟ್ ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ವರದಿ ಮಾಡಲಾಗಿತ್ತು. ಮಣ್ಣನ್ನು ಕಂಟೇನರ್ ಲಾರಿಗಳಲ್ಲಿ ತುಂಬಿಸಿ ತಮಿಳ್ನಾಡು ಮತ್ತು ಆಂಧ್ರ ಪ್ರದೇಶ ರಾಜ್ಯಗಳಿಗೆ ಅಕ್ರಮವಾಗಿ ಸಾಗಿಸಲಾಗುತ್ತಿದೆ. ದಂಧೆಯಲ್ಲಿ ಪ್ರಭಾವಿ ಶಾಸಕರು ಮತ್ತು ರಾಜಕಾರಣಿಗಳು ಭಾಗಿಯಾಗಿದ್ದು, ಕಳೆದ ಐದಾರು ವರ್ಷಗಳಿಂದ ದಂಧೆ ನಡೆಯುತ್ತಿದೆ.
ಇದನ್ನೂ ಓದಿ: ಮುಡಿಪು ಗುಡ್ಡಕ್ಕೇ ಕನ್ನ ; ಮಣ್ಣಿನ ದಂಧೆ ಬಲುಜೋರು, ಪ್ರಭಾವಿಗಳ ಕಾರುಬಾರು !
Mangaluru DC Rajendra orders to draft seven member committee in probing illegal sand mining in Mudipu, Mangalore after a detailed News report by "Headline Karnataka". Concerning the scandal, one has been arrested.
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
08-05-26 06:45 pm
HK News Staffer
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
08-05-26 10:33 pm
HK News Staffer
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
ಸವಣೂರು ಬಳಿ ಭೀಕರ ಅಪಘಾತ ; ಟ್ಯಾಂಕರ್ ಡಿಕ್ಕಿಯಾಗಿ ಬ...
05-05-26 11:01 pm
ಕೋರ್ಟ್ ಜಟಾಪಟಿ ಬಳಿಕ ಉಳ್ಳಾಲ ದರ್ಗಾ ಆಡಳಿತ ಸಮಿತಿಗೆ...
02-05-26 11:05 pm
08-05-26 07:02 pm
HK News Staffer
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm
ಪೋಕ್ಸೋ ಕೇಸ್ ಭಯಕ್ಕೆ ಠಾಣೆಯಲ್ಲೇ ಕೀ ನುಂಗಿದ ಆರೋಪಿ...
08-05-26 06:12 pm
ಬೆಂಗಳೂರಿನ ಆಸ್ಪತ್ರೆಯ ಒಳಗೇ ಆಭರಣ ದರೋಡೆ ! ರೋಗಿಯ 9...
07-05-26 08:00 pm
ಬಂಗಾಳದಲ್ಲಿ ಬಿಜೆಪಿ ಭರ್ಜರಿ ಗೆಲುವಿನ ಬೆನ್ನಲ್ಲೇ ಸು...
07-05-26 12:17 pm