ಬ್ರೇಕಿಂಗ್ ನ್ಯೂಸ್
11-10-20 03:13 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 11: ಅಕ್ರಮ ಗೋಸಾಗಾಟ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಶಾಸಕರ ಸೂಚನೆಯಂತೆ ಮಂಗಳೂರು ಪೊಲೀಸ್ ಕಮಿಷನರ್ ವಿಕಾಸ್ ಕುಮಾರ್ ಪೊಲೀಸ್ ಗಸ್ತು ಬಿಗಿಗೊಳಿಸಿದ್ದಾರೆ.
ಎರಡು ದಿನಗಳ ಹಿಂದೆ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಪೊಲೀಸ್ ಠಾಣೆಗಳಿಗೆ ಈ ಸೂಚನೆ ನೀಡಲಾಗಿದ್ದು, ಎಲ್ಲ ಆಯಕಟ್ಟಿನ ಪ್ರದೇಶಗಳಲ್ಲಿ ರಾತ್ರಿಯಿಂದ ಬೆಳಗ್ಗೆ ಏಳು ಗಂಟೆ ವರೆಗೆ ಪೋಸ್ಟಿಂಗ್ ಮಾಡುವಂತೆ ಸೂಚನೆ ನೀಡಿದ್ದಾರೆ. ಅಕ್ರಮವಾಗಿ ಗೋವುಗಳನ್ನು ಕಾರು, ಟೆಂಪೋಗಳಲ್ಲಿ ತರುತ್ತಿರುವ ಬಗ್ಗೆ ಬಜರಂಗದಳ ನಾಯಕರು ಕೂಡ ಆಕ್ಷೇಪ ಎತ್ತಿದ್ದು, ಇದರ ಬಗ್ಗೆ ಕಠಿಣ ಕ್ರಮ ಕೈಗೊಳ್ಳದಿದ್ದರೆ ಮುಂದಿನ ಅನಾಹುತಕ್ಕೆ ಜಿಲ್ಲಾಡಳಿವೇ ಹೊಣೆ ಎಂದು ಎಚ್ಚರಿಕೆ ನೀಡಿದ್ದರು. ಒಂದೆಡೆ ಹಿಂದು ಸಂಘಟನೆಗಳ ಆಗ್ರಹ ಮತ್ತೊಂದೆಡೆ ಆಡಳಿತ ಪಕ್ಷದ ಮಂಗಳೂರಿನ ಶಾಸಕರಾದ ವೇದವ್ಯಾಸ ಕಾಮತ್ ಮತ್ತು ಭರತ್ ಶೆಟ್ಟಿ ನೀಡಿದ ಸೂಚನೆಯಂತೆ ಪೊಲೀಸ್ ಕಮಿಷನರ್ ಬಿಗು ಪೋಸ್ಟಿಂಗ್ ಮಾಡಿದ್ದಾರೆ.


ಅದರಂತೆ, ಆಯಾ ಪೊಲೀಸ್ ಠಾಣೆ ವ್ಯಾಪ್ತಿಯ ಆಯಕಟ್ಟಿನ ಜಾಗಗಳಲ್ಲಿ ಎಂಟು ಕಡೆಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗುತ್ತದೆ. ಮೂಡುಬಿದ್ರೆ, ಕಾವೂರು, ಕಂಕನಾಡಿ ಗ್ರಾಮಾಂತರ, ಕಂಕನಾಡಿ ನಗರ, ಪಣಂಬೂರು, ಬಜ್ಪೆ, ಮಂಗಳೂರು ನಗರದ ಕದ್ರಿ, ಪಾಂಡೇಶ್ವರ, ಉಳ್ಳಾಲ ಹೀಗೆ ಉತ್ತರ ಮತ್ತು ದಕ್ಷಿಣ ಎಸಿಪಿ ಉಪವಿಭಾಗದಲ್ಲಿ ಪೋಸ್ಟಿಂಗ್ ಹೆಚ್ಚಿಸಿದ್ದು, ಕಟ್ಟುನಿಟ್ಟಿನ ತಪಾಸಣೆ ಬಳಿಕವೇ ವಾಹನಗಳನ್ನು ಬಿಡುವಂತೆ ಸೂಚನೆ ನೀಡಲಾಗಿದೆ. ಅಲ್ಲದೆ, ಠಾಣಾಧಿಕಾರಿಯವರು ಈ ಪೋಸ್ಟಿಂಗ್ ಮಾಡುವುದಕ್ಕೆ ಸಿಬಂದಿ ಕೊರತೆಯ ನೆಪ ಹೇಳಬಾರದು. ಆಯಾ ಭಾಗದಲ್ಲಿ ಸೂಕ್ತ ನಿಯೋಜನೆ ಮಾಡತಕ್ಕದ್ದು ಎಂದು ಪೊಲೀಸ್ ಕಮಿಷನರ್ ಆಯಾ ಠಾಣಾಧಿಕಾರಿಗಳಿಗೆ ಸುತ್ತೋಲೆ ಕಳುಹಿಸಿದ್ದಾರೆ.
In order to control cattle trafficking in Mangaluru, Police Commissioner Vikas Kumar orders to strengthen checkposts with much police personnel
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
08-05-26 06:45 pm
HK News Staffer
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
08-05-26 10:33 pm
HK News Staffer
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
ಸವಣೂರು ಬಳಿ ಭೀಕರ ಅಪಘಾತ ; ಟ್ಯಾಂಕರ್ ಡಿಕ್ಕಿಯಾಗಿ ಬ...
05-05-26 11:01 pm
ಕೋರ್ಟ್ ಜಟಾಪಟಿ ಬಳಿಕ ಉಳ್ಳಾಲ ದರ್ಗಾ ಆಡಳಿತ ಸಮಿತಿಗೆ...
02-05-26 11:05 pm
08-05-26 07:02 pm
HK News Staffer
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm
ಪೋಕ್ಸೋ ಕೇಸ್ ಭಯಕ್ಕೆ ಠಾಣೆಯಲ್ಲೇ ಕೀ ನುಂಗಿದ ಆರೋಪಿ...
08-05-26 06:12 pm
ಬೆಂಗಳೂರಿನ ಆಸ್ಪತ್ರೆಯ ಒಳಗೇ ಆಭರಣ ದರೋಡೆ ! ರೋಗಿಯ 9...
07-05-26 08:00 pm
ಬಂಗಾಳದಲ್ಲಿ ಬಿಜೆಪಿ ಭರ್ಜರಿ ಗೆಲುವಿನ ಬೆನ್ನಲ್ಲೇ ಸು...
07-05-26 12:17 pm