ಬ್ರೇಕಿಂಗ್ ನ್ಯೂಸ್
22-10-22 06:13 pm Udupi Correspondent ಕರಾವಳಿ
ಉಡುಪಿ, ಅ.22: ಸುರತ್ಕಲ್ ಟೋಲ್ ಗೇಟ್ ಜಟಾಪಟಿ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಕಡೆಗೂ ಮೌನ ಮುರಿದಿದ್ದಾರೆ. ಉಡುಪಿ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಟಿ ನಡೆಸಿದ ವೇಳೆ ಕೇಳಿದ ಪ್ರಶ್ನೆಗೆ, ಈಗಾಗಲೇ ಟೋಲ್ ಗೇಟ್ ತೆರವಿನ ಬಗ್ಗೆ ಚರ್ಚೆ ನಡೆದಿದೆ. ತೆರವು ಪ್ರಕ್ರಿಯೆ ಅಂತಿಮ ಹಂತದಲ್ಲಿದೆ. ಮಾಹಿತಿ ಪ್ರಕಾರ, ನವೆಂಬರ್ ಅಂತ್ಯದ ವೇಳೆಗೆ ತೆರವು ಆಗಲಿದೆ ಎಂದು ಸಚಿವ ಸುನಿಲ್ ಕುಮಾರ್ ಉತ್ತರಿಸಿದ್ದಾರೆ.
ಇದೇ ವೇಳೆ, ಟೋಲ್ ಗೇಟ್ ವಿರುದ್ಧ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ ಅವರನ್ನು ಟ್ರೋಲ್ ಮಾಡಿದ ವಿಚಾರದಲ್ಲಿ ಕೇಳಿದ ಪ್ರಶ್ನೆಗೆ ಸುನಿಲ್ ಕುಮಾರ್ ಉತ್ತರಿಸಲು ನಿರಾಕರಿಸಿದ್ದಾರೆ. ತುಳು ಭಾಷೆಯನ್ನು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರಿಸುವ ವಿಚಾರದಲ್ಲಿ ಕೇಳಿದ ಪ್ರಶ್ನೆಗೆ, ಈಗಾಗಲೇ ಕೇಂದ್ರ ಸರಕಾರದ ಗಮನಕ್ಕೆ ತರಲಾಗಿದೆ. ನಾವು ಸಂಸದರ ಮೂಲಕ ಕೇಂದ್ರಕ್ಕೆ ಒತ್ತಡ ಹಾಕಿದ್ದೇವೆ. ಸಂವಿಧಾನ ಸೇರ್ಪಡೆಯ ಪ್ರಕ್ರಿಯೆ ಬಗ್ಗೆ ನಮಗೆ ಸ್ಪಷ್ಟವಾದ ಮಾಹಿತಿ ಇಲ್ಲ. ತುಳು ಭಾಷೆಯನ್ನು ರಾಜ್ಯಭಾಷೆಯಾಗಿ ಮಾಡುವ ಪ್ರಕ್ರಿಯೆ ಇಲಾಖಾ ಹಂತದಲ್ಲಿದೆ. ನಮ್ಮ ಇಲಾಖೆಯಿಂದ ಕಾನೂನು ಇಲಾಖೆಗೆ ಫೈಲ್ ಹೋಗಿದ್ದು, ಶೀಘ್ರದಲ್ಲೇ ಅದು ಕಾರ್ಯಗತ ಆಗಲಿದೆ ಎಂದು ಹೇಳಿದರು.
ಶಾಲೆಗಳಲ್ಲಿ ತುಳು ಶಿಕ್ಷಕರಿಗೆ ವೇತನ ಪಾವತಿಯಾಗದ ವಿಚಾರದ ಬಗ್ಗೆ ಕೇಳಿದ್ದಕ್ಕೆ, ತುಳು ಭಾಷೆಯ ಶಿಕ್ಷಕಿಯರನ್ನು ತುಳು ಅಕಾಡೆಮಿಯಿಂದ ನೇಮಕ ಮಾಡಲಾಗಿತ್ತು. ಅವರಿಗೆ ಸಂಭಾವನೆ ನೀಡಲಾಗುತ್ತದೆ ವಿನಾ ವೇತನ ಅಲ್ಲ. ಕೋವಿಡ್ ಬಳಿಕ ಆ ಬಗ್ಗೆ ತೊಂದರೆಯಾಗಿದೆ. ವಿಷಯ ನನ್ನ ಗಮನಕ್ಕೆ ಬಂದಿದ್ದು, ಶಿಕ್ಷಣ ಇಲಾಖೆ ಜೊತೆ ಚರ್ಚಿಸಿ ಪರಿಹರಿಸುತ್ತೇನೆ ಎಂದು ಹೇಳಿದರು.
ವಿದ್ಯುತ್ ದರ ಹೆಚ್ಚಿಸುವ ಪದ್ಧತಿ ಬದಲಾವಣೆ ಕುರಿತು ಮಾಹಿತಿ ನೀಡಿದ ಸಚಿವ ಸುನಿಲ್, ಇಂಧನ ಉತ್ಪಾದನೆಗೆ ಬಳಸುವ ಕಲ್ಲಿದ್ದಲು ಮತ್ತು ಇನ್ನಿತರ ಕಚ್ಛಾ ವಸ್ತುಗಳನ್ನು ಆಧರಿಸಿ ವಿದ್ಯುತ್ ದರ ಏರಿಕೆ ಮಾಡಲಾಗುವುದು. 2014ರಿಂದ ಇದೇ ಪದ್ಧತಿ ಅನುಸರಿಸಲಾಗುತ್ತಿದೆ. ಈ ನೀತಿಯನ್ನು ಬದಲಿಸುವ ಬಗ್ಗೆ ಮುಖ್ಯಮಂತ್ರಿ ಜೊತೆ ಚರ್ಚಿಸಿದ್ದೇನೆ. ವರ್ಷದಲ್ಲಿ ಒಮ್ಮೆ ವಿದ್ಯುತ್ ದರ ಬದಲಿಸುವ ಹೊಸ ಪದ್ಧತಿ ಜಾರಿಗೆ ತರಬೇಕಾಗಿದೆ. ಪ್ರೀ ಪೈಡ್ ವಿದ್ಯುತ್ ಮೀಟರ್ ಗಳನ್ನು ಸರಕಾರಿ ಇಲಾಖೆಗಳಲ್ಲಿ ಮೊದಲಿಗೆ ಜಾರಿಗೆ ತರಲಾಗುವುದು. ಸರಕಾರದ ವಿವಿಧ ಇಲಾಖೆಗಳಿಂದ ಇಂಧನ ಇಲಾಖೆಗೆ ಆರು ಸಾವಿರ ಕೋಟಿ ರೂಪಾಯಿ ಬರಲು ಬಾಕಿಯಿದೆ ಎಂದು ಹೇಳಿದರು.
"A detailed discussion has already taken place in view of removing the Surathkal toll gate. The toll gate is in the final stage of removal. As per my information, the toll gate will be removed by November end this year," said Dakshina Kannada in-charge minister Sunil Kumar.He was speaking at the Udupi press club. Sunil denied to answer the question on trolls against Karnataka Pradesh Congress Committee co-coordinator and former corporator Prathiba Kulai Prathiba Kulai by saying ‘No comments’.
03-07-25 05:24 pm
Bangalore Correspondent
Rain kadaba, Sullia, Mangalore: ಕಡಬ, ಸುಳ್ಯದಲ್...
03-07-25 10:54 am
Tumakuru, Fathers Jail, Traffic, Bike: ತುಮಕೂರ...
03-07-25 10:52 am
Dk Shivakumar, CM Siddaramaiah: ನನ್ನ ಹೆಸ್ರು ಹ...
02-07-25 11:02 pm
Vikas Kumar IPS, CAT: ವಿಕಾಸ್ ಕುಮಾರ್ ಅಮಾನತು ರದ...
02-07-25 10:47 pm
02-07-25 11:05 pm
HK News Desk
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
ಹೈದ್ರಾಬಾದಿನಲ್ಲಿ ಸಿಗಾಚಿ ಇಂಡಸ್ಟ್ರೀಸ್ ಫಾರ್ಮಾ ಫ್ಯ...
01-07-25 08:57 pm
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
03-07-25 10:50 pm
Mangalore Correspondent
ರಹಿಮಾನ್ ಕೊಲೆ ಪ್ರಕರಣ ; ಅನುಮತಿ ನಿರಾಕರಿಸಿದ್ದರೂ ಬ...
03-07-25 10:39 pm
Mangalore Police, New Rules, Festival; ಮೊಸರು...
03-07-25 03:43 pm
Mangalore, Heart Attack Spike: ದಕ್ಷಿಣ ಕನ್ನಡ ಜ...
03-07-25 02:33 pm
Mangalore Police, Task Force: ಕೋಮು ಗಲಭೆ ನಿಗ್ರ...
03-07-25 10:50 am
03-07-25 11:03 pm
Mangalore Correspondent
ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ; ಸಿಸಿಬಿ ಪೊಲೀಸರ...
03-07-25 08:38 pm
ಮಹಾದೇವ್ ಬೆಟ್ಟಿಂಗ್ ಹಗರಣ ; ಮೋಸ್ಟ್ ವಾಂಟೆಡ್ ಆರೋಪಿ...
03-07-25 07:09 pm
Infosys Employee, Video Recording, Crime: ಇನ್...
02-07-25 10:15 pm
Massive Scam, Mangalore City Corporation, Fak...
02-07-25 12:24 pm