ಬ್ರೇಕಿಂಗ್ ನ್ಯೂಸ್
29-10-22 10:02 pm Mangalore Correspondent ಕರಾವಳಿ
ಉಳ್ಳಾಲ, ಅ.29 : ನರಿಂಗಾನ ಗ್ರಾಮದ ಬೋಳದಪದವಿನ ವಿಶಾಲ ಪ್ರದೇಶದಲ್ಲಿ ಸರಕಾರಿ ಕಂಬಳ ಕರೆ ನಿರ್ಮಾಣವಾಗಲಿದ್ದು ವಿಧಾನಸಭೆಯ ಪ್ರತಿಪಕ್ಷ ಉಪನಾಯಕ ಶಾಸಕ ಯು.ಟಿ ಖಾದರ್ ಅವರು ನೂತನ ಕರೆ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ ಮಾಡಿದ್ದಾರೆ.
ಕಂಬಳ ಮತ್ತು ಯಕ್ಷಗಾನ ನಮ್ಮ ಜಿಲ್ಲೆಯ ಸಾಂಸ್ಕೃತಿಕ ರಂಗದ ಎರಡು ಕಣ್ಣುಗಳಾಗಿದ್ದು ಅದನ್ನು ಜೀವಂತವಾಗಿರಿಸುವ ನಿಟ್ಟಿನಲ್ಲಿ ವಿಧಾನಸಭೆಯಲ್ಲೂ ಧ್ವನಿ ಎತ್ತಿ ಯಶಸ್ಸು ಕಂಡಿದ್ದೇನೆ. ನರಿಂಗಾನ ಗ್ರಾಮದ ಕಂಬಳ ಪ್ರೇಮಿಗಳ ಮನವಿಯಂತೆ ಗ್ರಾಮದ ಬೋಳದಪದವಿನಲ್ಲಿ ನೂತನ ಕಂಬಳಗದ್ದೆ(ಕರೆ) ನಿರ್ಮಾಣವಾಗಲಿದ್ದು ಅದಕ್ಕೆ ಶಿಲಾನ್ಯಾಸಗೈದಿರುವುದು ಮನಸ್ಸಿಗೆ ತುಂಬ ಸಂತಸ ಕೊಟ್ಟಿದೆ. ಬೋಳದ ಪದವಿನ ಐದು ಎಕರೆ ಪ್ರದೇಶದಲ್ಲಿ ತುಳು ಗ್ರಾಮ ನಿರ್ಮಾಣವಾಗಲಿದ್ದು ಆ ನಿಟ್ಟಿನಲ್ಲಿ ಬೋಳ, ಮೋರ್ಲದ ಸರಕಾರಿ ಸ್ಥಳದ ಪ್ರತಿ ಯೋಜನೆಯನ್ನು ಒಟ್ಟು ಸೇರಿಸಿ ಎಕ್ಸಿಬಿಷನ್ ಸೆಂಟರ್ ಆಗಿ ಮಾಡಿ ತೋರಿಸಲಿದ್ದೇವೆ. ತುಳು ಗ್ರಾಮದ ಮೂಲಕ ಜಿಲ್ಲೆಯ ಎಲ್ಲ ಸಮಾಜದ ಸಂಸ್ಕೃತಿ, ಸಂಪ್ರದಾಯ, ಪರಂಪರೆಯನ್ನು ಮುಂದಿನ ಜನಾಂಗವೂ ತಿಳಿಯಲು ಪರಿಚಯ ಮಾಡಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಯುಟಿ ಖಾದರ್ ಹೇಳಿದರು.
ನೆತ್ತಿಲಪದವು, ಬೋಳದಪದವು ಕೇವಲ ಹೆಸರಾಗಿ ಉಳಿಯದೇ ಮುಂದಿನ ದಿನಗಳಲ್ಲಿ ಜನಾಕರ್ಷಣೆಯ ಕೇಂದ್ರವಾಗಲಿದೆ. ಭವಿಷ್ಯದಲ್ಲಿ ಸ್ಥಳೀಯ ಪ್ರತಿಭೆಗಳಿಗೆ ಕ್ರೀಡಾಂಗಣ ಕೂಡ ಸಕಲ ಸೌಲಭ್ಯಗಳೊಂದಿಗೆ ನಿರ್ಮಾಣವಾಗಲಿದೆ. ಈಗಾಗಲೇ ಸುಮಾರು ಮೂರು ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಸ್ವಿಮ್ಮಿಂಗ್ ಫೂಲ್ ಮತ್ತು ಕಮ್ಯುನಿಟಿ ಸೆಂಟರ್ ಗೆ ಸ್ಥಳ ಗುರುತಿಸಿದ್ದೇವೆ ಎಂದರು.




ಇದೇ ವೇಳೆ ಅವರು ಕಲ್ಲರಕೋಡಿ ಬಳಿ 2.5 ಕೋಟಿ ರೂ. ವೆಚ್ಚದಲ್ಲಿ ಜಲಜೀವನ್ ಅಡಿಯಲ್ಲಿ ಬೃಹತ್ ನೀರಿನ ಟ್ಯಾಂಕ್ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸಗೈದರು.
ಕಾರ್ಯಕ್ರಮದಲ್ಲಿ ನರಿಂಗಾನ ಗ್ರಾಮ ಪಂಚಾಯತ್ ಅಧ್ಯಕ್ಷೆ ಶೈಲಜಾ ಜೆ. ಶೆಟ್ಟಿ, ಉಪಾಧ್ಯಕ್ಷರಾದ ನವಾಝ್ ಕಲ್ಲರಕೋಡಿ, ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವ, ರವೀಂದ್ರ ಶೆಟ್ಟಿ ಉಳಿದೊಟ್ಟು ಮೊದಲಾದವರು ಉಪಸ್ಥಿತರಿದ್ದರು.
Mangalore UT Khader lays foundation stone to Government Lake for Kambala in Ullal.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am