ಬ್ರೇಕಿಂಗ್ ನ್ಯೂಸ್
29-10-22 10:02 pm Mangalore Correspondent ಕರಾವಳಿ
ಉಳ್ಳಾಲ, ಅ.29 : ನರಿಂಗಾನ ಗ್ರಾಮದ ಬೋಳದಪದವಿನ ವಿಶಾಲ ಪ್ರದೇಶದಲ್ಲಿ ಸರಕಾರಿ ಕಂಬಳ ಕರೆ ನಿರ್ಮಾಣವಾಗಲಿದ್ದು ವಿಧಾನಸಭೆಯ ಪ್ರತಿಪಕ್ಷ ಉಪನಾಯಕ ಶಾಸಕ ಯು.ಟಿ ಖಾದರ್ ಅವರು ನೂತನ ಕರೆ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ ಮಾಡಿದ್ದಾರೆ.
ಕಂಬಳ ಮತ್ತು ಯಕ್ಷಗಾನ ನಮ್ಮ ಜಿಲ್ಲೆಯ ಸಾಂಸ್ಕೃತಿಕ ರಂಗದ ಎರಡು ಕಣ್ಣುಗಳಾಗಿದ್ದು ಅದನ್ನು ಜೀವಂತವಾಗಿರಿಸುವ ನಿಟ್ಟಿನಲ್ಲಿ ವಿಧಾನಸಭೆಯಲ್ಲೂ ಧ್ವನಿ ಎತ್ತಿ ಯಶಸ್ಸು ಕಂಡಿದ್ದೇನೆ. ನರಿಂಗಾನ ಗ್ರಾಮದ ಕಂಬಳ ಪ್ರೇಮಿಗಳ ಮನವಿಯಂತೆ ಗ್ರಾಮದ ಬೋಳದಪದವಿನಲ್ಲಿ ನೂತನ ಕಂಬಳಗದ್ದೆ(ಕರೆ) ನಿರ್ಮಾಣವಾಗಲಿದ್ದು ಅದಕ್ಕೆ ಶಿಲಾನ್ಯಾಸಗೈದಿರುವುದು ಮನಸ್ಸಿಗೆ ತುಂಬ ಸಂತಸ ಕೊಟ್ಟಿದೆ. ಬೋಳದ ಪದವಿನ ಐದು ಎಕರೆ ಪ್ರದೇಶದಲ್ಲಿ ತುಳು ಗ್ರಾಮ ನಿರ್ಮಾಣವಾಗಲಿದ್ದು ಆ ನಿಟ್ಟಿನಲ್ಲಿ ಬೋಳ, ಮೋರ್ಲದ ಸರಕಾರಿ ಸ್ಥಳದ ಪ್ರತಿ ಯೋಜನೆಯನ್ನು ಒಟ್ಟು ಸೇರಿಸಿ ಎಕ್ಸಿಬಿಷನ್ ಸೆಂಟರ್ ಆಗಿ ಮಾಡಿ ತೋರಿಸಲಿದ್ದೇವೆ. ತುಳು ಗ್ರಾಮದ ಮೂಲಕ ಜಿಲ್ಲೆಯ ಎಲ್ಲ ಸಮಾಜದ ಸಂಸ್ಕೃತಿ, ಸಂಪ್ರದಾಯ, ಪರಂಪರೆಯನ್ನು ಮುಂದಿನ ಜನಾಂಗವೂ ತಿಳಿಯಲು ಪರಿಚಯ ಮಾಡಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಯುಟಿ ಖಾದರ್ ಹೇಳಿದರು.
ನೆತ್ತಿಲಪದವು, ಬೋಳದಪದವು ಕೇವಲ ಹೆಸರಾಗಿ ಉಳಿಯದೇ ಮುಂದಿನ ದಿನಗಳಲ್ಲಿ ಜನಾಕರ್ಷಣೆಯ ಕೇಂದ್ರವಾಗಲಿದೆ. ಭವಿಷ್ಯದಲ್ಲಿ ಸ್ಥಳೀಯ ಪ್ರತಿಭೆಗಳಿಗೆ ಕ್ರೀಡಾಂಗಣ ಕೂಡ ಸಕಲ ಸೌಲಭ್ಯಗಳೊಂದಿಗೆ ನಿರ್ಮಾಣವಾಗಲಿದೆ. ಈಗಾಗಲೇ ಸುಮಾರು ಮೂರು ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಸ್ವಿಮ್ಮಿಂಗ್ ಫೂಲ್ ಮತ್ತು ಕಮ್ಯುನಿಟಿ ಸೆಂಟರ್ ಗೆ ಸ್ಥಳ ಗುರುತಿಸಿದ್ದೇವೆ ಎಂದರು.




ಇದೇ ವೇಳೆ ಅವರು ಕಲ್ಲರಕೋಡಿ ಬಳಿ 2.5 ಕೋಟಿ ರೂ. ವೆಚ್ಚದಲ್ಲಿ ಜಲಜೀವನ್ ಅಡಿಯಲ್ಲಿ ಬೃಹತ್ ನೀರಿನ ಟ್ಯಾಂಕ್ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸಗೈದರು.
ಕಾರ್ಯಕ್ರಮದಲ್ಲಿ ನರಿಂಗಾನ ಗ್ರಾಮ ಪಂಚಾಯತ್ ಅಧ್ಯಕ್ಷೆ ಶೈಲಜಾ ಜೆ. ಶೆಟ್ಟಿ, ಉಪಾಧ್ಯಕ್ಷರಾದ ನವಾಝ್ ಕಲ್ಲರಕೋಡಿ, ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವ, ರವೀಂದ್ರ ಶೆಟ್ಟಿ ಉಳಿದೊಟ್ಟು ಮೊದಲಾದವರು ಉಪಸ್ಥಿತರಿದ್ದರು.
Mangalore UT Khader lays foundation stone to Government Lake for Kambala in Ullal.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
15-11-25 11:12 pm
HK News Desk
ದೆಹಲಿ ಕಾರು ಸ್ಫೋಟ ಪ್ರಕರಣ ; ಪಶ್ಚಿಮ ಬಂಗಾಳದಲ್ಲಿ ಮ...
15-11-25 07:09 pm
ಶ್ರೀನಗರ ಪೊಲೀಸ್ ಠಾಣೆಯಲ್ಲಿ ಭೀಕರ ಸ್ಫೋಟ ; 6 ಮಂದಿ...
15-11-25 12:06 pm
ಬಿಹಾರ ಫಲಿತಾಂಶ ; ‘ಛೋಟೇ ಸರ್ಕಾರ್’ ಖ್ಯಾತಿಯ ಅನಂತ್...
14-11-25 09:10 pm
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
15-11-25 10:47 pm
Mangalore Correspondent
ಬೀದಿ ನಾಯಿಗಳಿಗೆ ವ್ಯಕ್ತಿ ಬಲಿ ; ಕಡೆಗೂ ಎಚ್ಚತ್ತುಕೊ...
15-11-25 07:42 pm
Panambur Accident, Mangalore, Three dead: ಪಣಂ...
15-11-25 02:47 pm
ಬಿಹಾರದಲ್ಲಿ ಚುನಾವಣೆ ಮುನ್ನ ಹತ್ತು ಸಾವಿರ ಕೊಟ್ಟು ಮ...
15-11-25 01:51 pm
ಬಿ.ಸಿ. ರೋಡ್ ಬಳಿ ಭೀಕರ ಅಪಘಾತ ; ಉಡುಪಿ ಕೃಷ್ಣ ಮಠಕ್...
15-11-25 12:12 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm