ಬ್ರೇಕಿಂಗ್ ನ್ಯೂಸ್
29-10-22 10:02 pm Mangalore Correspondent ಕರಾವಳಿ
ಉಳ್ಳಾಲ, ಅ.29 : ನರಿಂಗಾನ ಗ್ರಾಮದ ಬೋಳದಪದವಿನ ವಿಶಾಲ ಪ್ರದೇಶದಲ್ಲಿ ಸರಕಾರಿ ಕಂಬಳ ಕರೆ ನಿರ್ಮಾಣವಾಗಲಿದ್ದು ವಿಧಾನಸಭೆಯ ಪ್ರತಿಪಕ್ಷ ಉಪನಾಯಕ ಶಾಸಕ ಯು.ಟಿ ಖಾದರ್ ಅವರು ನೂತನ ಕರೆ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ ಮಾಡಿದ್ದಾರೆ.
ಕಂಬಳ ಮತ್ತು ಯಕ್ಷಗಾನ ನಮ್ಮ ಜಿಲ್ಲೆಯ ಸಾಂಸ್ಕೃತಿಕ ರಂಗದ ಎರಡು ಕಣ್ಣುಗಳಾಗಿದ್ದು ಅದನ್ನು ಜೀವಂತವಾಗಿರಿಸುವ ನಿಟ್ಟಿನಲ್ಲಿ ವಿಧಾನಸಭೆಯಲ್ಲೂ ಧ್ವನಿ ಎತ್ತಿ ಯಶಸ್ಸು ಕಂಡಿದ್ದೇನೆ. ನರಿಂಗಾನ ಗ್ರಾಮದ ಕಂಬಳ ಪ್ರೇಮಿಗಳ ಮನವಿಯಂತೆ ಗ್ರಾಮದ ಬೋಳದಪದವಿನಲ್ಲಿ ನೂತನ ಕಂಬಳಗದ್ದೆ(ಕರೆ) ನಿರ್ಮಾಣವಾಗಲಿದ್ದು ಅದಕ್ಕೆ ಶಿಲಾನ್ಯಾಸಗೈದಿರುವುದು ಮನಸ್ಸಿಗೆ ತುಂಬ ಸಂತಸ ಕೊಟ್ಟಿದೆ. ಬೋಳದ ಪದವಿನ ಐದು ಎಕರೆ ಪ್ರದೇಶದಲ್ಲಿ ತುಳು ಗ್ರಾಮ ನಿರ್ಮಾಣವಾಗಲಿದ್ದು ಆ ನಿಟ್ಟಿನಲ್ಲಿ ಬೋಳ, ಮೋರ್ಲದ ಸರಕಾರಿ ಸ್ಥಳದ ಪ್ರತಿ ಯೋಜನೆಯನ್ನು ಒಟ್ಟು ಸೇರಿಸಿ ಎಕ್ಸಿಬಿಷನ್ ಸೆಂಟರ್ ಆಗಿ ಮಾಡಿ ತೋರಿಸಲಿದ್ದೇವೆ. ತುಳು ಗ್ರಾಮದ ಮೂಲಕ ಜಿಲ್ಲೆಯ ಎಲ್ಲ ಸಮಾಜದ ಸಂಸ್ಕೃತಿ, ಸಂಪ್ರದಾಯ, ಪರಂಪರೆಯನ್ನು ಮುಂದಿನ ಜನಾಂಗವೂ ತಿಳಿಯಲು ಪರಿಚಯ ಮಾಡಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಯುಟಿ ಖಾದರ್ ಹೇಳಿದರು.
ನೆತ್ತಿಲಪದವು, ಬೋಳದಪದವು ಕೇವಲ ಹೆಸರಾಗಿ ಉಳಿಯದೇ ಮುಂದಿನ ದಿನಗಳಲ್ಲಿ ಜನಾಕರ್ಷಣೆಯ ಕೇಂದ್ರವಾಗಲಿದೆ. ಭವಿಷ್ಯದಲ್ಲಿ ಸ್ಥಳೀಯ ಪ್ರತಿಭೆಗಳಿಗೆ ಕ್ರೀಡಾಂಗಣ ಕೂಡ ಸಕಲ ಸೌಲಭ್ಯಗಳೊಂದಿಗೆ ನಿರ್ಮಾಣವಾಗಲಿದೆ. ಈಗಾಗಲೇ ಸುಮಾರು ಮೂರು ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಸ್ವಿಮ್ಮಿಂಗ್ ಫೂಲ್ ಮತ್ತು ಕಮ್ಯುನಿಟಿ ಸೆಂಟರ್ ಗೆ ಸ್ಥಳ ಗುರುತಿಸಿದ್ದೇವೆ ಎಂದರು.




ಇದೇ ವೇಳೆ ಅವರು ಕಲ್ಲರಕೋಡಿ ಬಳಿ 2.5 ಕೋಟಿ ರೂ. ವೆಚ್ಚದಲ್ಲಿ ಜಲಜೀವನ್ ಅಡಿಯಲ್ಲಿ ಬೃಹತ್ ನೀರಿನ ಟ್ಯಾಂಕ್ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸಗೈದರು.
ಕಾರ್ಯಕ್ರಮದಲ್ಲಿ ನರಿಂಗಾನ ಗ್ರಾಮ ಪಂಚಾಯತ್ ಅಧ್ಯಕ್ಷೆ ಶೈಲಜಾ ಜೆ. ಶೆಟ್ಟಿ, ಉಪಾಧ್ಯಕ್ಷರಾದ ನವಾಝ್ ಕಲ್ಲರಕೋಡಿ, ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವ, ರವೀಂದ್ರ ಶೆಟ್ಟಿ ಉಳಿದೊಟ್ಟು ಮೊದಲಾದವರು ಉಪಸ್ಥಿತರಿದ್ದರು.
Mangalore UT Khader lays foundation stone to Government Lake for Kambala in Ullal.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
09-02-26 10:25 pm
HK News Desk
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm