ಬ್ರೇಕಿಂಗ್ ನ್ಯೂಸ್
03-11-22 06:25 pm HK News Desk ಕರಾವಳಿ
ಮಂಗಳೂರು, ನ.3:ಕಾರು ಚಾಲಕನ ಎಡವಟ್ಟಿನಿಂದಾಗಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರಿಗೆ ಕಾರು ಡಿಕ್ಕಿಯಾದ ಘಟನೆ ಮುಲ್ಕಿ ಬಳಿಯ ಕಿನ್ನಿಗೋಳಿ ಪೇಟೆಯಲ್ಲಿ ನಡೆದಿದೆ.
ಕೆಮ್ರಾಲ್ ಮನೋಲಿ ಬಲ್ಲೆ ನಿವಾಸಿ ಜಯಂತಿ ಶೆಟ್ಟಿ(52) ಎಂಬ ಮಹಿಳೆ ತರಕಾರಿ ಹಿಡಿದುಕೊಂಡು ರಸ್ತೆ ಬದಿಯಿಂದ ನಡೆದು ಬರುತ್ತಿದ್ದಾಗ ಕಿನ್ನಿಗೋಳಿ ಕಡೆಯಿಂದ ಮೂಡುಬಿದ್ರೆಯತ್ತ ತೆರಳುತ್ತಿದ್ದ ಬ್ರೀಜಾ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ಮಹಿಳೆ ಅನತಿ ದೂರಕ್ಕೆ ಎಸೆಯಲ್ಪಟ್ಟಿದ್ದು ಗಂಭೀರ ಗಾಯಗೊಂಡಿದ್ದಾರೆ. ಡಿಕ್ಕಿಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಮಹಿಳೆ ದೂರಕ್ಕೆ ಬಿದ್ದಿರುವುದು, ಕಾರು ಮನೆ ಪಕ್ಕದ ಕಂಪೌಂಡಿಗೆ ಡಿಕ್ಕಿ ಹೊಡೆದಿದ್ದು ಕಂಡುಬಂದಿದೆ.



ತೋಡಾರು ನಿವಾಸಿ ಅಬ್ದುಲ್ ಖಾದರ್ ಎಂಬವರು ತನ್ನ ಕಾರಿನಲ್ಲಿ ಏರ್ಪೋರ್ಟ್ ಹೋಗಿ ಕಿನ್ನಿಗೋಳಿ ಮೂಲಕ ಮೂಡುಬಿದ್ರೆ ರಸ್ತೆಯಲ್ಲಿ ತನ್ನ ಮನೆಯತ್ತ ತೆರಳುತ್ತಿದ್ದರು. ಕಾರಿನಲ್ಲಿ ಅಬ್ದುಲ್ ಖಾದರ್ ಕುಟುಂಬದ ನಾಲ್ಕು ಮಂದಿ ಇದ್ದು ಘಟನೆಯಲ್ಲಿ ಸಣ್ಣಪುಟ್ಟದಾಗಿ ಗಾಯಗೊಂಡಿದ್ದಾರೆ. ಕಿನ್ನಿಗೋಳಿಯ ಜನನಿಬಿಡ ಪ್ರದೇಶದಲ್ಲಿ ಘಟನೆ ನಡೆದಿದ್ದು, ಕಾರು ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದು ಮಹಿಳೆಗೆ ಡಿಕ್ಕಿಯಾಗಿದ್ದು ಕಂಡುಬಂದಿದೆ.
ಗಾಯಾಳುಗಳನ್ನು ಸ್ಥಳೀಯರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಹಿಳೆ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದು ಅಪಾಯದಿಂದ ಪಾರಾಗಿದ್ದಾರೆ ಎಂದು ಮೂಲ್ಕಿ ಸಂಚಾರ ವಿಭಾಗದ ಪೊಲೀಸರು ತಿಳಿಸಿದ್ದಾರೆ.
Mangalore Shocking car accident at Kinnigoli Muki, woman thrown into air, injured seriously, video viral
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 02:16 pm
HK News Staffer
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm