ಬ್ರೇಕಿಂಗ್ ನ್ಯೂಸ್
04-11-22 09:26 pm Mangalore Correspondent ಕರಾವಳಿ
ಮಂಗಳೂರು, ನ.4 : ನಗರ ಹೊರವಲಯದ ನೀರುಮಾರ್ಗ ಗ್ರಾಮದ ಕೆಲರಾಯಿ ಪ್ರದೇಶದ ಹಂದಿ ಸಾಕಾಣಿಕೆ ಕೇಂದ್ರದಲ್ಲಿ ಹಂದಿಗಳಿಗೆ ಆಫ್ರಿಕನ್ ಹಂದಿ ಜ್ವರ ಇರುವುದು ದೃಢಪಟ್ಟಿರುತ್ತದೆ. ಹೀಗಾಗಿ ರೋಗ ಹರಡುವುದನ್ನು ತಡೆಗಟ್ಟಲು ರಾಷ್ಟ್ರೀಯ ರೋಗ ನಿಯಂತ್ರಣ ಮಾರ್ಗಸೂಚಿಯಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ.
ಕೆಲರಾಯಿ ಹಂದಿ ಸಾಕಣಿಕೆ ಕೇಂದ್ರದಿಂದ ಒಂದು ಕಿಮೀ ವ್ಯಾಪ್ತಿಯನ್ನು ರೋಗಪೀಡಿತ ವಲಯ ಮತ್ತು 10 ಕಿಮೀ ವ್ಯಾಪ್ತಿಯನ್ನು ಜಾಗೃತ ವಲಯವೆಂದು ಘೋಷಿಸಲಾಗಿದೆ. ರೋಗಪೀಡಿತ ಹಂದಿಗಳನ್ನು ವಧೆ ಮಾಡಿ, ವೈಜ್ಞಾನಿಕವಾಗಿ ವಿಲೇವಾರಿ ಮಾಡಿ ಆ ಸ್ಥಳದಲ್ಲಿ ಕ್ರಿಮಿನಾಶಕ ಸಿಂಪಡಿಸಲು ಹಾಗೂ ಅಲ್ಲಿಗೆ ಸಾರ್ವಜನಿಕರು ಭೇಟಿ ನೀಡದಂತೆ ನಾಮಫಲಕ ಅಳವಡಿಸುವಂತೆ ಸೂಚಿಸಲಾಗಿದೆ.
ಆಫ್ರಿಕನ್ ಹಂದಿ ಜ್ವರವು ಮನುಷ್ಯರಿಗೆ ಯಾವುದೇ ರೀತಿಯ ರೋಗವುಂಟು ಮಾಡುವುದಿಲ್ಲ. ಹಂದಿ ಮಾಂಸವನ್ನು ಚೆನ್ನಾಗಿ ಬೇಯಿಸಿ ತಿನ್ನಲು ಸಲಹೆ ನೀಡಲಾಗಿದೆ. ಜಾಗೃತ ವಲಯದಲ್ಲಿರುವ ಹಂದಿ ಸಾಕಣೆದಾರರು ಮತ್ತು ಇತರರು ಸದ್ಯಕ್ಕೆ ರೋಗ ಪೀಡಿತವಲಯಕ್ಕೆ ಭೇಟಿ ನೀಡಬಾರದು ಮತ್ತು ಅಪರಿಚಿತರಿಂದ ಹಂದಿ ಮರಿಗಳನ್ನು ಮತ್ತು ಮಾಂಸವನ್ನು ಖರೀದಿಸಬಾರದು. ತಮ್ಮ ಹಂದಿ ಸಾಕಾಣಿಕೆ ಕೇಂದ್ರಗಳನ್ನು ಬಿಸಿ ನೀರಿನಿಂದ ತೊಳೆದು, ಕ್ರಿಮಿ ನಾಶಕಗಳನ್ನು ಸಿಂಪಡಿಸುತ್ತಿರಬೇಕು. ಹಂದಿಗಳಿಗೆ ನೀಡಲಾಗುವ ಹೋಟೆಲ್ ತ್ಯಾಜ್ಯಗಳನ್ನು ನೀಡದಿರುವುದು ಒಳಿತು, ಅನಿವಾರ್ಯ ಸಂದರ್ಭದಲ್ಲಿ ಚೆನ್ನಾಗಿ ಬೇಯಿಸಿ ನೀಡುವುದು. ಆಫ್ರಿಕನ್ ಹಂದಿ ಜ್ವರವು ಹಂದಿಗಳಿಂದ ಅಥವಾ ಮಾಂಸ ಸೇವಿಸುವುದರಿಂದ ಮನುಷ್ಯರಿಗೆ ಹರಡುವುದಿಲ್ಲ. ಆದ್ದರಿಂದ ಸಾರ್ವಜನಿಕರು ಮತ್ತು ಹಂದಿ ಪಾಲಕರು ಭಯಕ್ಕೊಳಗಾಗುವ ಅವಶ್ಯಕತೆ ಇಲ್ಲ. ಹಂದಿ ಪಾಲಕರು ಸೂಕ್ತ ಮುಂಜಾಗೃತಾ ಕ್ರಮವನ್ನು ಕೈಗೊಳ್ಳುವಂತೆ ಜಿಲ್ಲಾ ಜಾನುವಾರು ರೋಗಗಳ ನಿರ್ವಹಣಾ ಸಮಿತಿಯ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
African Swine Fever case detected in Neermarga Mangalore confirms DC. It is not a spreadable disease also he added.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 02:16 pm
HK News Staffer
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm