ಬ್ರೇಕಿಂಗ್ ನ್ಯೂಸ್
05-11-22 11:55 am HK News Desk ಕರಾವಳಿ
ಮಂಗಳೂರು, ನ.4:ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ಮತ್ತು ನಿಷೇಧಿತ ಪಿಎಫ್ಐ ಸಂಘಟನೆ ಜೊತೆಗೆ ನಂಟು ಹೊಂದಿದ್ದ ಆರೋಪದಲ್ಲಿ ಎನ್ಐಎ ಅಧಿಕಾರಿಗಳು ರಾಜ್ಯದ ಹಲವೆಡೆ ದಾಳಿ ನಡೆಸಿದ್ದಾರೆ. ಪುತ್ತೂರು, ಸುಳ್ಯ, ಮೈಸೂರು, ಹುಬ್ಬಳ್ಳಿಯಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದ್ದು ಹಲವರನ್ನು ವಶಕ್ಕೆ ಪಡೆದಿದ್ದಾರೆ.
ಎಸ್ಡಿಪಿಐ ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ, ಆತನ ಸಹೋದರ ಎಸ್ಡಿಪಿಐ ಜಿಲ್ಲಾ ಸಮಿತಿ ಮುಖಂಡ ಇಕ್ಬಾಲ್ ಬೆಳ್ಳಾರೆಯನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಇಬ್ರಾಹಿಂ ಷಾ ಎಂಬ ಇನ್ನೊಬ್ಬನನ್ನು ಕೂಡ ಸುಳ್ಯದಲ್ಲಿ ಬಂಧಿಸಲಾಗಿದೆ. ಮೈಸೂರಿನಲ್ಲಿ ಪಿಎಫ್ಐ ಮಾಜಿ ಕಾರ್ಯದರ್ಶಿಯಾಗಿದ್ದ ಸುಲೇಮಾನ್ ಎಂಬಾತನನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಮೈಸೂರಿನ ಮಂಡಿ ಮೊಹಲ್ಲಾದಲ್ಲಿರುವ ಮನೆಯಿಂದ ಸುಲೇಮಾನನ್ನು ವಶಕ್ಕೆ ಪಡೆದಿದ್ದಾರೆ.

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಬಳಿಕ ನಾಪತ್ತೆಯಾಗಿದ್ದ ಶಾಫಿ ಬೆಳ್ಳಾರೆ ಅವರನ್ನು ಪೊಲೀಸರು ವಿಚಾರಣೆಗಾಗಿ ಹುಡುಕಾಟ ನಡೆಸುತ್ತಿದ್ದರು. ಆನಂತರ, ಪಿಎಫ್ಐ ಸಂಘಟನೆ ನಿಷೇಧ ಮಾಡಲಾಗಿತ್ತು. ಶಾಫಿ ಮತ್ತು ಇಕ್ಬಾಲ್ ಇಬ್ಬರು ಕೂಡ ಈ ಹಿಂದೆ ಪಿಎಫ್ಐ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದರು. ಪಿಎಫ್ಐ ನಿಷೇಧ ಹಿನ್ನೆಲೆಯಲ್ಲಿ ಬೆಳ್ಳಾರೆ ಸೋದರರ ಪಾತ್ರದ ಬಗ್ಗೆ ಖಚಿತ ಮಾಹಿತಿ ಪಡೆದು ಪೊಲೀಸರು ಮತ್ತು ಎನ್ಐಎ ಜಂಟಿಯಾಗಿ ನಡೆಸಿದ ದಾಳಿಯಲ್ಲಿ ಇಬ್ಬರನ್ನು ಬಂಧಿಸಲಾಗಿದೆ.
ಈ ಪೈಕಿ ಶಾಫಿ ಬೆಳ್ಳಾರೆ ಕೆಲವು ದಿನಗಳ ಹಿಂದೆಯೇ ಬೆಂಗಳೂರಿನಲ್ಲಿ ಎನ್ಐಎ ಕೈಗೆ ಸಿಕ್ಕಿಬಿದ್ದಿದ್ದ ಎನ್ನಲಾಗುತ್ತಿದ್ದು ಇದೀಗ ಆತನ ಸೋದರ ಇಕ್ಬಾಲ್ ಮತ್ತು ಇಬ್ರಾಹಿಂ ಷಾ ಎಂಬವರನ್ನು ಬಂಧಿಸಲಾಗಿದೆ. ಇಕ್ಬಾಲ್ ಬೆಳ್ಳಾರೆ ಗ್ರಾಮ ಪಂಚಾಯತಿ ಸದಸ್ಯನೂ ಆಗಿದ್ದ. ಈ ಮೂವರನ್ನು ಪ್ರವೀಣ್ ಕೊಲೆ ಪ್ರಕರಣದಲ್ಲಿ ಬಂಧಿಸಲಾಗಿದೆಯೇ, ಪಿಎಫ್ಐ ನಂಟಿನ ಆರೋಪದಲ್ಲಿ ಬಂಧನ ಮಾಡಲಾಗಿದೆಯೇ ಎನ್ನುವುದು ದೃಢಪಟ್ಟಿಲ್ಲ.\
In connection to the BJP party worker Praveen Nettaru murder case, National Investigation Agency (NIA) officials raided the residences of the now banned Popular Front of India (PFI) and SDPI leaders across the state. It is learnt that NIA officials have detained three persons.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
09-02-26 10:25 pm
HK News Desk
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
10-02-26 10:59 am
Mangalore Correspondent
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm