ಬ್ರೇಕಿಂಗ್ ನ್ಯೂಸ್
06-11-22 06:10 pm Mangalore Correspondent ಕರಾವಳಿ
ಉಳ್ಳಾಲ, ನ.6 : ಕಳೆದ ನ.1 ರ ಮಂಗಳವಾರ ರಾತ್ರಿ ಕೊಣಾಜೆ ಠಾಣೆ ವ್ಯಾಪ್ತಿಯ ಪಜೀರು ಗ್ರಾಮದ ಅರ್ಕಾಣ ಬದ್ರಿಯಾ ಜುಮಾ ಮಸೀದಿಗೆ ನುಗ್ಗಿ ಆರು ಕಾಣಿಕೆ ಹುಂಡಿಯಿಂದ ನಗದು ಕಳವುಗೈದಿದ್ದ ಐನಾತಿ ಖದೀಮನನ್ನ ಕೊಣಾಜೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
ಬಂಟ್ವಾಳ ತಾಲೂಕಿನ ಮೊಡಂಕಾಪು,ಪಲ್ಲಮಜಲು ನಿವಾಸಿ ಮಹಮ್ಮದ್ ಇಕ್ಬಾಲ್ ಅಲಿಯಾಸ್ ಇಕ್ಕು(54) ಬಂಧಿತ ಆರೋಪಿ. ಈತನ ವಿರುದ್ಧ ಕಾರ್ಕಳ ಠಾಣೆಯಲ್ಲಿ ಮೂರು, ಮೂಡುಬಿದ್ರೆ, ಬಂಟ್ವಾಳ ನಗರ ಠಾಣೆಗಳಲ್ಲಿ ತಲಾ ಒಂದು, ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ 2 ಪ್ರಕರಣಗಳು ದಾಖಲಾಗಿದೆ. ಇತ್ತೀಚೆಗೆ ಬಂಟ್ವಾಳದ ಅಜ್ಜಿಬೆಟ್ಟು ದೇವಸ್ಥಾನ ಒಂದರಲ್ಲೂ ಈತ ಕಳ್ಳತನ ಮಾಡಿರುವುದಾಗಿ ತಿಳಿದುಬಂದಿದೆ.




ಮಂಗಳವಾರ ಮಧ್ಯರಾತ್ರಿ ವೇಳೆ ಅರ್ಕಾಣ ಜುಮಾ ಮಸೀದಿಯ ಪಕ್ಕದ ಕೋಣೆಯೊಂದರಲ್ಲಿದ್ದ ಪಿಕ್ಕಾಸು, ಹಾರೆಯನ್ನ ಬಳಸಿ ಮಸೀದಿಯ ಆವರಣ ಗೋಡೆಯಲ್ಲಿದ್ದ ಒಟ್ಟು ಆರು ಕಾಣಿಕೆ ಹುಂಡಿಗಳನ್ನ ಒಡೆದು ನಗದು ಕಳವುಗೈಯಲಾಗಿತ್ತು. ಮಸೀದಿಯ ಸಿಸಿಟಿವಿ ಕ್ಯಾಮೆರಾದಲ್ಲಿ ಓರ್ವ ವ್ಯಕ್ತಿಯೇ ಕೈಚಳಕ ತೋರಿದ್ದ ದೃಶ್ಯ ಸೆರೆಯಾಗಿತ್ತು.
ಮೊದಲು ಹೊರಗಿನ ಕಾಣಿಕೆ ಡಬ್ಬಿಯನ್ನು ಮುರಿದ ಕಳ್ಳ ಬಳಿಕ ಹಾರೆಯ ಸಹಾಯದಿಂದ ಮಸೀದಿಯ ಬಾಗಿಲಿನ ಚಿಲಕವನ್ನು ಒಡೆದು ಒಳಗೆ ನುಗ್ಗಿ ಅಲ್ಲಿದ್ದ ಕಾಣಿಕೆ ಡಬ್ಬಿಗಳನ್ನು ಒಡೆದು ನಗದು ದೋಚಿದ್ದ. ಅಲ್ಲದೆ ಮಸೀದಿ ಕಚೇರಿಯ ಬಾಗಿಲನ್ನೂ ಮುರಿದು ಕಳ್ಳತನಕ್ಕೆ ಯತ್ನಿಸಿದ್ದ. ಘಟನಾ ಸ್ಥಳಕ್ಕೆ ಸ್ಥಳೀಯ ಶಾಸಕ ಯು.ಟಿ ಖಾದರ್ ಅವರು ಭೇಟಿ ನೀಡಿ ಕಳ್ಳತನ ಆರೋಪಿಯನ್ನ ಶೀಘ್ರ ಬಂಧಿಸುವಂತೆ ಕೊಣಾಜೆ ಪೊಲೀಸರಿಗೆ ಆಗ್ರಹಿಸಿದ್ದರು. ಸಿಸಿಟಿವಿ ದಾಖಲೆ ಆಧಾರದಲ್ಲಿ ಕೊಣಾಜೆ ಪೊಲೀಸರು ತನಿಖೆ ನಡೆಸಿ ಖದೀಮ ಇಕ್ಬಾಲನನ್ನ ಬಂಧಿಸಿ ಜೈಲಿಗಟ್ಟಿದ್ದಾರೆ.
ಪಜೀರು ಮಸೀದಿಗೆ ಕನ್ನ ಹಾಕಿದ ಕಳ್ಳರು ; ಮಸೀದಿಗೆ ನುಗ್ಗಿ ಆರು ಕಾಣಿಕೆ ಡಬ್ಬಿಗಳನ್ನು ಒಡೆದು ನಗದು ಕಳವು
Mangalore Phajeer mosque robbery accused thief arrested by Konaje police. Six offering boxes of the mosque were broken and stolen but the Konaje police have nabbed the accused as soon as possible.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 02:16 pm
HK News Staffer
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm