ಬ್ರೇಕಿಂಗ್ ನ್ಯೂಸ್
07-11-22 09:58 pm Mangalore Correspondent ಕರಾವಳಿ
ಮಂಗಳೂರು, ನ.7: ಮಂಗಳೂರು ನಗರದ ಬಲ್ಮಠದ ಕಲೆಕ್ಟರ್ಸ್ ಗೇಟ್ ವೃತ್ತದಿಂದ ಅಂಬೇಡ್ಕರ್ ವೃತ್ತದ ವರೆಗಿನ ರಸ್ತೆಗೆ ಹೊಟೇಲ್ ಉದ್ಯಮಿ, ಶ್ರೀದೇವಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಎ.ಸದಾನಂದ ಶೆಟ್ಟಿ ಅವರ ಹೆಸರಿಡುವ ಬಗ್ಗೆ ಮಂಗಳೂರು ಮಹಾನಗರ ಪಾಲಿಕೆಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಪಾಲಿಕೆಯಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಲು ಪರಿಷತ್ತಿನಲ್ಲಿ ಇರಿಸಲಾಗಿದೆ.
ಈ ಬಗ್ಗೆ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಮತ್ತು ಅತ್ತೂರು ಸದಾನಂದ ಶೆಟ್ಟಿ ಅಭಿಮಾನ ಬಳಗದ ವತಿಯಿಂದ ಮಹಾನಗರ ಪಾಲಿಕೆಗೆ ಮನವಿ ನೀಡಲಾಗಿದೆ. ಮಹಾನಗರ ಪಾಲಿಕೆಯ ಕೌನ್ಸಿಲ್ ಸಭೆಗೆ ಈ ವಿಷಯ ಬಂದಿಲ್ಲ. ಪ್ರಸ್ತಾವನೆಯ ಬಗ್ಗೆ ಚರ್ಚಿಸಲು ಪರಿಷತ್ತಿನ ಕಾರ್ಯಸೂಚಿಯಲ್ಲಿ ಇಡಲು ನಿರ್ಣಯಿಸಲಾಗಿದೆ. ಯಾವುದೇ ಸಾರ್ವಜನಿಕ ರಸ್ತೆಗೆ ನಾಮಕರಣ ಮಾಡುವುದಿದ್ದರೂ ಪಾಲಿಕೆಯ ನಗರ ಯೋಜನಾ ಸ್ಥಾಯಿ ಸಮಿತಿಯ ಸದಸ್ಯರು ಪರಿಶೀಲನೆ ನಡೆಸಬೇಕಾಗುತ್ತದೆ. ಆನಂತರ, ನಗರ ಪಾಲಿಕೆಯಲ್ಲಿ ಗೊತ್ತುವಳಿ ಅಂಗೀಕಾರ ಆದಲ್ಲಿ ಅದನ್ನು ಸ್ಥಳೀಯ ಎರಡು ಕನ್ನಡ ದಿನ ಪತ್ರಿಕೆಗಳಲ್ಲಿ ಪ್ರಕಟಿಸಿ, ಆಕ್ಷೇಪಗಳಿದ್ದಲ್ಲಿ ಸ್ವೀಕಾರ ಮಾಡಬೇಕು. ಒಂದು ತಿಂಗಳಲ್ಲಿ ಬರುವ ಸಲಹೆ, ಆಕ್ಷೇಪಗಳ ಬಗ್ಗೆ ಪಾಲಿಕೆಯ ಮುಂದಿನ ಸಭೆಯಲ್ಲಿ ಮಂಡಿಸಬೇಕು. ಚರ್ಚಿಸಿ, ನಿರ್ಣಯ ಕೈಗೊಂಡ ನಂತರ ರಾಜ್ಯ ಸರಕಾರದ ಅನುಮತಿ ಕೋರಿ, ಪ್ರಸ್ತಾವನೆ ಕಳುಹಿಸಿ ಕೊಡಬೇಕಾಗುತ್ತದೆ.


ಸದ್ಯಕ್ಕೆ ಪ್ರಸ್ತಾವನೆ ಮಾತ್ರ ಮಂಡನೆಯಾಗಿದ್ದು, ಮಹಾನಗರ ಪಾಲಿಕೆಯಲ್ಲಿ ಯಾವುದೇ ಚರ್ಚೆ ಆಗಿಲ್ಲ. ಈ ಹಿಂದೆ ಹಂಪನಕಟ್ಟೆಯ ಲೈಟ್ ಹೌಸ್ ಹಿಲ್ ಹೋಗುವ ರಸ್ತೆಗೆ ಸುಂದರರಾಮ ಶೆಟ್ಟಿ ಹೆಸರಿಡುವ ವಿಚಾರ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಕಳೆದ ಚುನಾವಣೆ ಸಂದರ್ಭದಲ್ಲಿ ಬಂಟ ಸಮುದಾಯವನ್ನು ಎತ್ತಿಕಟ್ಟುವ ಪ್ರಯತ್ನಕ್ಕೂ ಈ ವಿವಾದ ನಾಂದಿ ಹಾಡಿತ್ತು. ಈ ಬಾರಿ ಚುನಾವಣೆ ವರ್ಷದಲ್ಲಿಯೇ ಸದಾನಂದ ಶೆಟ್ಟಿ ಹೆಸರಿಡುವ ವಿಚಾರ ಮುನ್ನೆಲೆಗೆ ಬಂದಿದೆ. ಒಂದು ಕಾಲದಲ್ಲಿ ಸದಾನಂದ ಶೆಟ್ಟರು ಕ್ವಾಲಿಟಿ ಹೊಟೇಲ್ ಮೂಲಕ ಶೈನ್ ಆಗುತ್ತಿದ್ದ ರಸ್ತೆಗೆ ಅವರದ್ದೇ ಹೆಸರಿಡಲು ಒಂದು ವರ್ಗ ಮುಂದಾಗಿದೆ. ಸದಾನಂದ ಶೆಟ್ಟಿ ಅವರಿಗೆ ಈ ಬಗ್ಗೆ ಗೊತ್ತಿದೆಯೋ ಇಲ್ಲವೋ. ಅವರು ಬದುಕಿರುವ ಕಾಲದಲ್ಲಿಯೇ ರಸ್ತೆಗೆ ಹೆಸರಿಡುವ ತರಾತುರಿ ಯಾತಕ್ಕೋ ಗೊತ್ತಿಲ್ಲ.
Mangalore Rename Balmatta road after the owner of Quality Hotel and Sridevi college owner K Sadananda Shetty road, MCC to discuss the matter.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
15-11-25 11:12 pm
HK News Desk
ದೆಹಲಿ ಕಾರು ಸ್ಫೋಟ ಪ್ರಕರಣ ; ಪಶ್ಚಿಮ ಬಂಗಾಳದಲ್ಲಿ ಮ...
15-11-25 07:09 pm
ಶ್ರೀನಗರ ಪೊಲೀಸ್ ಠಾಣೆಯಲ್ಲಿ ಭೀಕರ ಸ್ಫೋಟ ; 6 ಮಂದಿ...
15-11-25 12:06 pm
ಬಿಹಾರ ಫಲಿತಾಂಶ ; ‘ಛೋಟೇ ಸರ್ಕಾರ್’ ಖ್ಯಾತಿಯ ಅನಂತ್...
14-11-25 09:10 pm
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
15-11-25 10:47 pm
Mangalore Correspondent
ಬೀದಿ ನಾಯಿಗಳಿಗೆ ವ್ಯಕ್ತಿ ಬಲಿ ; ಕಡೆಗೂ ಎಚ್ಚತ್ತುಕೊ...
15-11-25 07:42 pm
Panambur Accident, Mangalore, Three dead: ಪಣಂ...
15-11-25 02:47 pm
ಬಿಹಾರದಲ್ಲಿ ಚುನಾವಣೆ ಮುನ್ನ ಹತ್ತು ಸಾವಿರ ಕೊಟ್ಟು ಮ...
15-11-25 01:51 pm
ಬಿ.ಸಿ. ರೋಡ್ ಬಳಿ ಭೀಕರ ಅಪಘಾತ ; ಉಡುಪಿ ಕೃಷ್ಣ ಮಠಕ್...
15-11-25 12:12 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm