ಬ್ರೇಕಿಂಗ್ ನ್ಯೂಸ್
13-10-20 10:04 am Headline Karnataka News Network ಕರಾವಳಿ
ಮಂಗಳೂರು, ಅಕ್ಟೋಬರ್ 13: ಹಾಲಿನ ಟೆಂಪೋದಲ್ಲಿ ಗೋಮಾಂಸ ಸಾಗಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಬಜರಂಗದಳ ಕಾರ್ಯಕರ್ತರು ವಾಹನವನ್ನು ಬೆನ್ನಟ್ಟಿ ಹಿಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಬೆಳ್ಳಂಬೆಳಗ್ಗೆ ಬಿ.ಸಿ.ರೋಡ್ ಕಡೆಯಿಂದ ಬರುತ್ತಿದ್ದ ಹಾಲಿನ ವಾಹನವನ್ನು ಪಂಪ್ವೆಲ್ ಸರ್ಕಲ್ ಬಳಿ ನಿಲ್ಲಿಸಲು ಪ್ರಯತ್ನಿಸಿದ್ದಾರೆ. ಆದರೆ ಟೆಂಪೋ ನಿಲ್ಲಿಸದೆ ಕಂಕನಾಡಿ ಕಡೆಗೆ ನುಗ್ಗಿದ್ದು ಕಾರ್ಯಕರ್ತರು ತಮ್ಮ ವಾಹನಗಳಲ್ಲಿ ಬೆನ್ನಟ್ಟಿದ್ದಾರೆ. ಪೊಲೀಸರಿಗೂ ಮಾಹಿತಿ ನೀಡಿದ್ದಾರೆ. ಹಂಪನಕಟ್ಟೆಯ ವೃತ್ತದ ಬಳಿ ಪೊಲೀಸರು ಮತ್ತು ಬಜರಂಗದಳ ಕಾರ್ಯಕರ್ತರು ವಾಹನವನ್ನು ಅಡ್ಡಹಾಕಿದ್ದು ಟೆಂಪೋದಲ್ಲಿದ್ದ ಇಬ್ಬರು ಹೊರಗೆ ಓಡಿ ಪರಾರಿಯಾಗಿದ್ದಾರೆ. ಒಬ್ಬನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಹಾಲು ಸಾಗಿಸುವ ಟೆಂಪೋದಲ್ಲಿ ಪರಿಶೀಲನೆ ನಡೆಸಿದಾಗ, ಒಳಭಾಗದಲ್ಲಿ ಗೋಣಿ ಚೀಲದಲ್ಲಿ ಅಡಗಿಸಿಟ್ಟ ಗೋವುಗಳ ಮಾಂಸ ಪತ್ತೆಯಾಗಿದೆ.


ಮೂರ್ನಾಲ್ಕು ಗೋಣಿಗಳಲ್ಲಿ ಮಾಂಸವನ್ನು ತುಂಬಿಸಿಟ್ಟು ಎದುರಿಗೆ ಕಾಣುವಂತೆ ಹಾಲಿನ ಟ್ರೇಗಳನ್ನು ಇಡಲಾಗಿತ್ತು. ಬಜರಂಗದಳ ಕಾರ್ಯಕರ್ತರ ಮಾಹಿತಿ ಪ್ರಕಾರ, ಐನೂರು ಕೆಜಿ ಮಾಂಸ ಇರಬಹುದು ಎನ್ನಲಾಗುತ್ತಿದೆ. ಪೊಲೀಸರು ಮಾಂಸದ ಮೌಲ್ಯ, ಪ್ರಮಾಣದ ಬಗ್ಗೆ ತಪಾಸಣೆ ಆಗ್ತಾ ಇದೆ ಎಂದು ತಿಳಿಸಿದ್ದಾರೆ.
'ಆರೋಕ್ಯಾ' ಹೆಸರಿನ ಚಿಕ್ಕಮಗಳೂರು ಮೂಲದ ಹಾಲು ಆಗಿದ್ದು ಆರೋಕ್ಯಾ ನೇಮ್ ಪ್ಲೇಟ್ ಇರುವ ಟೆಂಪೋದಲ್ಲಿ ಗೋಮಾಂಸ ಪತ್ತೆಯಾಗಿದ್ದು ಇದೇ ಮೊದಲು. ಪೊಲೀಸರು ಮತ್ತು ಬಜರಂಗದಳ ಎಲರ್ಟ್ ಆದಬಳಿಕ ಹಾಲಿನ ವಾಹನದಲ್ಲಿ ಗೋಮಾಂಸ ಸಾಗಣೆ ಆಗುತ್ತಿರುವ ಗುಮಾನಿ ಕೇಳಿಬಂದಿತ್ತು. ಹಾಲಿನ ವಾಹನವಾದ್ರೆ ಪೊಲೀಸರು ಕೂಡ ಚೆಕ್ ಮಾಡಲ್ಲ. ಸಂಶಯವೂ ಬರಲ್ಲ ಎಂಬ ನೆಲೆಯಲ್ಲಿ ಅಕ್ರಮ ಸಾಗಾಟಕ್ಕೆ ಹೊಸ ತಂತ್ರ ಹೂಡಿದ್ದರು.
In the early morning hours on Tuesday, October 13, Bajrang Dal activists conducted an action After coming to know that beef was being illegally transported in a milk van.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 08:53 pm
HK News Staffer
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm
Suhas Shetty, Mangalore, NIA: ಸುಹಾಸ್ ಶೆಟ್ಟಿ ಹ...
23-06-26 02:15 pm