ಬ್ರೇಕಿಂಗ್ ನ್ಯೂಸ್
12-11-22 09:06 pm Mangalore Correspondent ಕರಾವಳಿ
ಮಂಗಳೂರು, ನ.12: ಬದಿಯಡ್ಕದ ದಂತವೈದ್ಯ ಕೃಷ್ಣಮೂರ್ತಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಮಂಗಳೂರಿನ ಬಿಜೆಪಿ ಶಾಸಕರು ಮತ್ತು ಹಿಂದು ಸಂಘಟನೆಗಳ ನಾಯಕರು ರಾಜ್ಯದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಮಂಗಳೂರಿಗೆ ಖಾಸಗಿ ಕಾರ್ಯಕ್ರಮ ನಿಮಿತ್ತ ಆಗಮಿಸಿದ್ದ ಸಚಿವರನ್ನು ಭೇಟಿಯಾದ ವಿಶ್ವ ಹಿಂದು ಪರಿಷತ್ ಮುಖಂಡ ಶರಣ್ ಪಂಪ್ವೆಲ್, ಮಂಗಳೂರಿನ ಶಾಸಕರಾದ ವೇದವ್ಯಾಸ ಕಾಮತ್ ಮತ್ತು ಭರತ್ ಶೆಟ್ಟಿ, ವೈದ್ಯರ ಸಾವಿನ ಘಟನೆ ಬಗ್ಗೆ ವಿವರಣೆ ನೀಡಿದ್ದಾರೆ. ಬದಿಯಡ್ಕ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದರೂ, ಕೇರಳ ಸರಕಾರದ ತನಿಖೆಯ ಮೇಲೆ ವಿಶ್ವಾಸವಿಲ್ಲ. ಹಾಗಾಗಿ ಕುಂದಾಪುರದಲ್ಲಿ ಶವ ಪತ್ತೆಯಾದ ಹಿನ್ನೆಲೆಯಲ್ಲಿ ಅಲ್ಲಿಯೇ ಪ್ರಕರಣ ದಾಖಲಿಸಿ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಆಗ್ರಹ ಮಾಡಿದ್ದಾರೆ.

ವೈದ್ಯರ ಸಾವಿನ ಹಿಂದೆ ಲ್ಯಾಂಡ್ ಜಿಹಾದ್ ಇದೆ, ಪ್ರಬಲ ಮಾಫಿಯಾ ಕೈವಾಡವೂ ಇದೆಯೆಂದು ಗೃಹ ಸಚಿವರ ಗಮನಕ್ಕೆ ಹಿಂದು ಸಂಘಟನೆ ಮುಖಂಡರು ತಂದಿದ್ದಾರೆ. ಬದಿಯಡ್ಕದಲ್ಲಿ ಕ್ಲಿನಿಕ್ ಹೊಂದಿದ್ದ ಡಾ.ಕೃಷ್ಣಮೂರ್ತಿಯವರು ನ.8ರಂದು ನಾಪತ್ತೆಯಾಗಿದ್ದು, ಮರುದಿನ ನ.9ರಂದು ಕುಂದಾಪುರದ ಹಟ್ಟಿಯಂಗಡಿ ಬಳಿ ರೈಲು ಹಳಿಯಲ್ಲಿ ಶವವಾಗಿ ಪತ್ತೆಯಾಗಿದ್ದರು. ಆದರೆ ವೈದ್ಯರದ್ದು ಸಹಜ ಸಾವಲ್ಲ. ಕೊಲೆಯಾಗಿರುವ ಶಂಕೆಯನ್ನು ಕುಟುಂಬಸ್ಥರು ವ್ಯಕ್ತಪಡಿಸಿದ್ದಾರೆ. ಕೊಲೆಗೆ ಶಂಕೆಗೀಡು ಮಾಡುವ ಬಹಷ್ಟು ವಿಚಾರಗಳಿದ್ದು ಪೊಲೀಸರು ಸಮಗ್ರ ತನಿಖೆ ನಡೆಸಬೇಕು. ಶವ ಪತ್ತೆಯಾದ ನೆಪದಲ್ಲಿ ಕುಂದಾಪುರದಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಿದರೆ ಸತ್ಯಾಂಶ ಹೊರಬಂದೀತು ಎಂದು ಶರಣ್ ಪಂಪ್ವೆಲ್, ಗೃಹ ಸಚಿವರ ಗಮನಕ್ಕೆ ತಂದಿದ್ದಾರೆ.
Badiyadka Dr Krishnamurthy death, land Jihad exposed, Hindu organization seek probe, meet HM Karnataka
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am