ಬ್ರೇಕಿಂಗ್ ನ್ಯೂಸ್
15-11-22 09:51 pm Mangalore Correspondent ಕರಾವಳಿ
ಮಂಗಳೂರು, ನ.15 : ಸುರತ್ಕಲ್ ಟೋಲ್ ಗೇಟ್ ರದ್ದುಗೊಂಡ ಬಗ್ಗೆ ಅಧಿಸೂಚನೆ ಹೊರಡಿಸಲಾಗಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಪ್ರಕಟಿಸಿದರೂ ಸುರತ್ಕಲ್ ನಲ್ಲಿ ಅನಿರ್ಧಿಷ್ಟಾವಧಿ ಧರಣಿ ನಡೆಸುತ್ತಿರುವ ಹೋರಾಟಗಾರರು ಟೋಲ್ ಸಂಗ್ರಹ ಸ್ಥಗಿತಗೊಳಿಸುವಂತೆ ಪಟ್ಟು ಹಿಡಿದಿದ್ದು ಧರಣಿ ಮುಂದುವರಿಸಿದ್ದಾರೆ. ಮಂಗಳವಾರ 19ನೇ ದಿನವೂ ಧರಣಿ ನಡೆದಿದ್ದು ಹಗಲು ರಾತ್ರಿ ಧರಣಿಗೆ ಮತ್ತಷ್ಟು ಜನರು ಬೆಂಬಲ ನೀಡಿದ್ದಾರೆ.
ಸಭೆಯಲ್ಲಿ ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ ಮಾತನಾಡಿ "ಏಳು ವರ್ಷಗಳ ಕಾಲ ನಿಯಮ ಬಾಹಿರ ಟೋಲ್ ಕೇಂದ್ರದಲ್ಲಿ ನೂರಾರು ಕೋಟಿ ರೂಪಾಯಿ ಸಂಗ್ರಹಕ್ಕೆ ಅವಕಾಶ ಒದಗಿಸಿದ ಸಂಸದ ನಳಿನ್ ಕುಮಾರ್ ಕಟೀಲ್ ಈಗ ತರಾತುರಿಯಲ್ಲಿ ಪ್ರಧಾನಿ, ಹೆದ್ದಾರಿ ಸಚಿವರಿಗೆ ಧನ್ಯವಾದ ಅರ್ಪಿಸುತ್ತಿದ್ದಾರೆ. ಟೋಲ್ ಗೇಟ್ ಮುಚ್ಚಿದರ ಹಿರಿಮೆ ತನ್ನದಾಗಿಸಿಕೊಳ್ಳುವ ಆಸಕ್ತಿ ಅಕ್ರಮ ಟೋಲ್ ಗೇಟ್ ಮುಚ್ಚುವುದರಲ್ಲಿ ಬಿಜೆಪಿ ಸಂಸದ, ಶಾಸಕರುಗಳಿಗೆ ಇಲ್ಲ. ಅಧಿಸೂಚನೆ ಹೊರಟು ಮೂರು ದಿನ ಕಳೆದರೂ ಟೋಲ್ ಸಂಗ್ರಹ ಅಬಾಧಿತವಾಗಿ ನಡೆದಿದೆ. ಇದು ಬಿಜೆಪಿ ಮುಖಂಡತ್ವದ ನೈಜ ಮುಖ ಎಂದು ಎಂದು ಆರೋಪಿಸಿದರು. ಟೋಲ್ ಕೇಂದ್ರ ಮುಚ್ಚದೆ ಹಗಲು ರಾತ್ರಿ ಧರಣಿ ಕೊನೆಗೊಳಿಸುವ ಪ್ರಶ್ನೆಯೇ ಇಲ್ಲ. ಅಧಿಸೂಚನೆ ಆಧಾರದಲ್ಲಿ ಜಿಲ್ಲಾಡಳಿತ ತಕ್ಷಣ ಟೋಲ್ ಸಂಗ್ರಹ ಸ್ಥಗಿತಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.


ವಿಲೀನದ ಹೆಸರಿನಲ್ಲಿ ಹೆಜಮಾಡಿಯ ನವಯುಗ್ ಟೋಲ್ ಪ್ಲಾಜಾದಲ್ಲಿ ಟೋಲ್ ದರವನ್ನು ವಿಪರೀತ ಹೆಚ್ಚಿಸಿ ಸುಲಿಗೆಯನ್ನು ಅಲ್ಲಿಗೆ ಸ್ಥಳಾಂತರಿಸಿದರೆ ಅವಿಭಜಿತ ಜಿಲ್ಲೆಯಲ್ಲಿ ಜನ ಹೋರಾಟ ಭುಗಿಲೇಳಲಿದೆ. ಅದಕ್ಕೆ ಬಿಜೆಪಿ ಶಾಸಕರು ಅವಕಾಶ ಮಾಡಿಕೊಡುವುದು ಬೇಡ ಎಂದು ಎಚ್ಚರಿಸಿದರು. ಧರಣಿಯಲ್ಲಿ ಮಾಜಿ ಸಚಿವ ಅಭಯಚಂದ್ರ ಜೈನ್, ಫಾದರ್ ವಿಲಿಯಂ ಮಾರ್ಟಿಸ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಶಾಹುಲ್ ಹಮೀದ್, ರಾಲ್ಪಿ ಡಿಸೋಜ, ಮನಪಾ ಸದಸ್ಯ ಅಬ್ದುಲ್ ರವೂಫ್, ನ್ಯಾಯವಾದಿ ಯಶವಂತ ಮರೋಳಿ, ಕನಕದಾಸ ಕೂಳೂರು, ಹಮೀದ್ ಹರೇಕಳ, ರಫೀಕ್ ಹರೇಕಳ, ದಲಿತ ನಾಯಕರಾದ ರಘು ಎಕ್ಕಾರು, ಶೇಖರ ಹೆಜಮಾಡಿ, ಸಹಬಾಳ್ವೆ ಉಡುಪಿಯ ಜ್ಯೋತಿ ಮೆನನ್, ತಸ್ರೀನ್ ಅರ಼ಾ, ಶೇಖಬ್ಬ ಕೋಟೆ, ಪ್ರತಿಭಾ ಕುಳಾಯಿ, ಹೋರಾಟ ಸಮಿತಿಯ ಪ್ರಮುಖರಾದ ಬಿ ಕೆ ಇಮ್ತಿಯಾಜ್, ರಾಘವೇಂದ್ರ ರಾವ್, ರಮೇಶ್ ಟಿ ಎನ್, ಶ್ರೀನಾಥ್ ಕುಲಾಲ್, ಮುಹಮ್ಮದ್ ಕುಂಜತ್ತಬೈಲ್, ಮಂಜುಳಾ ನಾಯಕ್, ಸಂತೋಷ್ ಬಜಾಲ್ ಸೇರಿದಂತೆ ವಿವಿಧ ಸಂಘಟನೆಗಳ ಪ್ರಮುಖರು ಉಪಸ್ಥಿತರಿದ್ದರು.
Mangalore Protest against Hejamady toll to continue if toll of surathkal toll merged warns protesters.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm