ಬ್ರೇಕಿಂಗ್ ನ್ಯೂಸ್
15-11-22 09:51 pm Mangalore Correspondent ಕರಾವಳಿ
ಮಂಗಳೂರು, ನ.15 : ಸುರತ್ಕಲ್ ಟೋಲ್ ಗೇಟ್ ರದ್ದುಗೊಂಡ ಬಗ್ಗೆ ಅಧಿಸೂಚನೆ ಹೊರಡಿಸಲಾಗಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಪ್ರಕಟಿಸಿದರೂ ಸುರತ್ಕಲ್ ನಲ್ಲಿ ಅನಿರ್ಧಿಷ್ಟಾವಧಿ ಧರಣಿ ನಡೆಸುತ್ತಿರುವ ಹೋರಾಟಗಾರರು ಟೋಲ್ ಸಂಗ್ರಹ ಸ್ಥಗಿತಗೊಳಿಸುವಂತೆ ಪಟ್ಟು ಹಿಡಿದಿದ್ದು ಧರಣಿ ಮುಂದುವರಿಸಿದ್ದಾರೆ. ಮಂಗಳವಾರ 19ನೇ ದಿನವೂ ಧರಣಿ ನಡೆದಿದ್ದು ಹಗಲು ರಾತ್ರಿ ಧರಣಿಗೆ ಮತ್ತಷ್ಟು ಜನರು ಬೆಂಬಲ ನೀಡಿದ್ದಾರೆ.
ಸಭೆಯಲ್ಲಿ ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ ಮಾತನಾಡಿ "ಏಳು ವರ್ಷಗಳ ಕಾಲ ನಿಯಮ ಬಾಹಿರ ಟೋಲ್ ಕೇಂದ್ರದಲ್ಲಿ ನೂರಾರು ಕೋಟಿ ರೂಪಾಯಿ ಸಂಗ್ರಹಕ್ಕೆ ಅವಕಾಶ ಒದಗಿಸಿದ ಸಂಸದ ನಳಿನ್ ಕುಮಾರ್ ಕಟೀಲ್ ಈಗ ತರಾತುರಿಯಲ್ಲಿ ಪ್ರಧಾನಿ, ಹೆದ್ದಾರಿ ಸಚಿವರಿಗೆ ಧನ್ಯವಾದ ಅರ್ಪಿಸುತ್ತಿದ್ದಾರೆ. ಟೋಲ್ ಗೇಟ್ ಮುಚ್ಚಿದರ ಹಿರಿಮೆ ತನ್ನದಾಗಿಸಿಕೊಳ್ಳುವ ಆಸಕ್ತಿ ಅಕ್ರಮ ಟೋಲ್ ಗೇಟ್ ಮುಚ್ಚುವುದರಲ್ಲಿ ಬಿಜೆಪಿ ಸಂಸದ, ಶಾಸಕರುಗಳಿಗೆ ಇಲ್ಲ. ಅಧಿಸೂಚನೆ ಹೊರಟು ಮೂರು ದಿನ ಕಳೆದರೂ ಟೋಲ್ ಸಂಗ್ರಹ ಅಬಾಧಿತವಾಗಿ ನಡೆದಿದೆ. ಇದು ಬಿಜೆಪಿ ಮುಖಂಡತ್ವದ ನೈಜ ಮುಖ ಎಂದು ಎಂದು ಆರೋಪಿಸಿದರು. ಟೋಲ್ ಕೇಂದ್ರ ಮುಚ್ಚದೆ ಹಗಲು ರಾತ್ರಿ ಧರಣಿ ಕೊನೆಗೊಳಿಸುವ ಪ್ರಶ್ನೆಯೇ ಇಲ್ಲ. ಅಧಿಸೂಚನೆ ಆಧಾರದಲ್ಲಿ ಜಿಲ್ಲಾಡಳಿತ ತಕ್ಷಣ ಟೋಲ್ ಸಂಗ್ರಹ ಸ್ಥಗಿತಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.


ವಿಲೀನದ ಹೆಸರಿನಲ್ಲಿ ಹೆಜಮಾಡಿಯ ನವಯುಗ್ ಟೋಲ್ ಪ್ಲಾಜಾದಲ್ಲಿ ಟೋಲ್ ದರವನ್ನು ವಿಪರೀತ ಹೆಚ್ಚಿಸಿ ಸುಲಿಗೆಯನ್ನು ಅಲ್ಲಿಗೆ ಸ್ಥಳಾಂತರಿಸಿದರೆ ಅವಿಭಜಿತ ಜಿಲ್ಲೆಯಲ್ಲಿ ಜನ ಹೋರಾಟ ಭುಗಿಲೇಳಲಿದೆ. ಅದಕ್ಕೆ ಬಿಜೆಪಿ ಶಾಸಕರು ಅವಕಾಶ ಮಾಡಿಕೊಡುವುದು ಬೇಡ ಎಂದು ಎಚ್ಚರಿಸಿದರು. ಧರಣಿಯಲ್ಲಿ ಮಾಜಿ ಸಚಿವ ಅಭಯಚಂದ್ರ ಜೈನ್, ಫಾದರ್ ವಿಲಿಯಂ ಮಾರ್ಟಿಸ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಶಾಹುಲ್ ಹಮೀದ್, ರಾಲ್ಪಿ ಡಿಸೋಜ, ಮನಪಾ ಸದಸ್ಯ ಅಬ್ದುಲ್ ರವೂಫ್, ನ್ಯಾಯವಾದಿ ಯಶವಂತ ಮರೋಳಿ, ಕನಕದಾಸ ಕೂಳೂರು, ಹಮೀದ್ ಹರೇಕಳ, ರಫೀಕ್ ಹರೇಕಳ, ದಲಿತ ನಾಯಕರಾದ ರಘು ಎಕ್ಕಾರು, ಶೇಖರ ಹೆಜಮಾಡಿ, ಸಹಬಾಳ್ವೆ ಉಡುಪಿಯ ಜ್ಯೋತಿ ಮೆನನ್, ತಸ್ರೀನ್ ಅರ಼ಾ, ಶೇಖಬ್ಬ ಕೋಟೆ, ಪ್ರತಿಭಾ ಕುಳಾಯಿ, ಹೋರಾಟ ಸಮಿತಿಯ ಪ್ರಮುಖರಾದ ಬಿ ಕೆ ಇಮ್ತಿಯಾಜ್, ರಾಘವೇಂದ್ರ ರಾವ್, ರಮೇಶ್ ಟಿ ಎನ್, ಶ್ರೀನಾಥ್ ಕುಲಾಲ್, ಮುಹಮ್ಮದ್ ಕುಂಜತ್ತಬೈಲ್, ಮಂಜುಳಾ ನಾಯಕ್, ಸಂತೋಷ್ ಬಜಾಲ್ ಸೇರಿದಂತೆ ವಿವಿಧ ಸಂಘಟನೆಗಳ ಪ್ರಮುಖರು ಉಪಸ್ಥಿತರಿದ್ದರು.
Mangalore Protest against Hejamady toll to continue if toll of surathkal toll merged warns protesters.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
03-04-26 11:00 pm
HK News Staffer
ಜಿಮ್ ಸೆಂಟರ್ ನೆಪದಲ್ಲಿ ಲವ್ ಜಿಹಾದ್! ಜಿಮ್ ಟ್ರೈ...
03-04-26 10:53 pm
ಮೆಲ್ಕಾರ್ ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ;...
01-04-26 02:54 pm
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am