ಬ್ರೇಕಿಂಗ್ ನ್ಯೂಸ್
19-11-22 12:32 pm Mangalore Correspondent ಕರಾವಳಿ
ಮಂಗಳೂರು, ನ.19 : ನಗರದ ಬಾವುಟಗುಡ್ಡೆಯಲ್ಲಿರುವ ಸ್ವಾತಂತ್ರ್ಯ ಹೋರಾಟಗಾರ, ಸಂಘಟನಾ ಚತುರ, ಸಮರವೀರ ಕೆದಂಬಾಡಿ ರಾಮಯ್ಯ ಗೌಡರ ಶೌರ್ಯದ ಕಂಚಿನ ಪ್ರತಿಮೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಲೋಕಾರ್ಪಣೆ ಮಾಡಿದರು.
ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ದಿವ್ಯ ಸಾನಿದ್ಯ ವಹಿಸಿದ್ದರು. ಸಚಿವರಾದ ಎಸ್. ಅಂಗಾರ, ಡಾ. ಅಶ್ವತ್ಥ್ ನಾರಾಯಣ, ಬೆಂಗಳೂರು ಉತ್ತರ ಕ್ಷೇತ್ರದ ಸಂಸದ ಡಿ.ವಿ. ಸದಾನಂದ ಗೌಡ, ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ಸಂಜೀವ ಮಠಂದೂರು, ಹರೀಶ ಪೂಂಜ, ಯು.ಟಿ. ಖಾದರ್, ಮಂಗಳೂರು ಮೇಯರ್ ಜಯಾನಂದ ಅಂಚನ್, ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕುಮಾರ್, ನಗರ ಪೊಲೀಸ್ ಆಯುಕ್ತ ಶಶಿಕುಮಾರ್, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಹಾಗೂ ಇತರೆ ಜನ ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಹಾಜರಿದ್ದರು.


ರಾಮಯ್ಯ ಗೌಡರು ಕ್ರಾಂತಿಕಾರಿ ಪುರುಷ ; ಮುಖ್ಯಮಂತ್ರಿ
ಪ್ರತಿಮೆ ಲೋಕಾರ್ಪಣೆ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ, ಮಂಗಳೂರಿಗೆ ಇವತ್ತು ಮಹತ್ವದ ದಿನ, ಇತಿಹಾಸಕ್ಕೆ ಮಹತ್ವ ಕೊಡುವ ದಿನ. ಬೆಳಕಿಗೆ ಬಾರದ ರಾಮಯ್ಯ ಗೌಡರ ಕಥೆ ಈಗ ಸುದ್ದಿಗೆ ಬಂದಿದೆ. ರಾಮಯ್ಯ ಗೌಡರಂಥವರ ನಿರಂತರ ಹೋರಾಟದಿಂದ ನಮಗೆ ಸ್ವಾತಂತ್ರ್ಯ ಸಿಕ್ಕಿದೆ. ಇತಿಹಾಸದಲ್ಲಿ ಇಂಥಹ ಮತ್ತಷ್ಟು ಸತ್ಯಗಳು ಹೊರಗೆ ಬರಬೇಕಿದೆ.

ರಾಮಯ್ಯ ಗೌಡ ಒಬ್ಬ ಶ್ರೇಷ್ಠ ಕ್ರಾಂತಿಕಾರಿ ಪುರುಷ. ಮೊದಲ ಬಾರಿಗೆ ಬ್ರಿಟಿಷರನ್ನು ಸೋಲಿನ ರುಚಿ ತೋರಿಸಿದ್ದರು. ಅವರನ್ನು ಸೋಲಿಸಲು ಬ್ರಿಟಿಷ್ ಸೈನ್ಯ ಒಟ್ಟಾಗಿ ಬಂದು ಕೊನೆಗೆ ಗಲ್ಲಿಗೇರಿಸಿತು. ಇಂಥಹ ಹೋರಾಟದ ಕಥೆ ಇಡೀ ದೇಶಕ್ಕೆ ಪರಿಚಯ ಆಗಬೇಕು. ಇದೀಗ ಅವರ ಮೂರ್ತಿ ಸ್ಥಾಪನೆ ಮೂಲಕ ಅವರ ಇತಿಹಾಸ ಜಗತ್ತಿಗೆ ಗೊತ್ತಾಗಿದೆ. ಇಂತಹ ಅನಾಮಧೇಯ ಹೋರಾಟಗಾರರು ನಮ್ಮಲ್ಲಿ ಬಹಳಷ್ಟು ಜನ ಇದ್ದಾರೆ. ಇಂಥ ಅನಾಮಧೇಯ ಹೋರಾಟಗಾರರ ಸ್ಮಾರಕ ಮಾಡಲು ನಮಗೆ ಸ್ಪೂರ್ತಿ ಬಂದಿದೆ. ಬೆಂಗಳೂರಿನಲ್ಲಿ ಸ್ಮಾರಕ ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಲಾಗುವುದು. ಇವತ್ತಿನ ಪೀಳಿಗೆಗೆ ಇದನ್ನ ತಿಳಿ ಹೇಳಿ ಸ್ಫೂರ್ತಿ ತುಂಬುವ ಕೆಲಸ ಆಗಬೇಕಿದೆ ಎಂದು ಹೇಳಿದರು.
Rs 40 Lakhs Statue of Freedom Fighter Kedambadi Ramaiah Gowda Unveiled at Tagore Park by Karnataka CM Bommai. Late Gowda had launched the freedom struggle way back in 1837 against the British. The Dakshina Kannada district administration, the Mangaluru City Corporation, and the Swatantrya Horatagara Sri Kedambadi Ramaiah Gowda Smaraka Ustuvari Samithi jointly conducted the programme.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm