ಬ್ರೇಕಿಂಗ್ ನ್ಯೂಸ್
19-11-22 08:11 pm Mangalore Correspondent ಕರಾವಳಿ
ಮಂಗಳೂರು, ನ.19: ನಗರದ ಕಂಕನಾಡಿ ನಾಗುರಿ ಪೊಲೀಸ್ ಠಾಣೆ ಬಳಿಯಲ್ಲೇ ನಿಗೂಢ ಸ್ಫೋಟ ಆಗಿದೆ. ಆಟೋ ಚಲಿಸುತ್ತಿದ್ದಾಗಲೇ ಒಳಗಿನಿಂದ ಸ್ಫೋಟ ಆಗಿದ್ದು, ಆಟೋ ಚಾಲಕ ಮತ್ತು ಪ್ರಯಾಣಿಕ ಗಾಯಗೊಂಡಿದ್ದಾರೆ. ಬ್ಲಾಸ್ಟ್ ಯಾವ ರೀತಿಯದ್ದು, ಹೇಗೆ ಸಂಭವಿಸಿದೆ ಎನ್ನುವುದು ದೃಢಪಟ್ಟಿಲ್ಲ.
ಆಟೋ ನಾಗುರಿಯಿಂದ ಹೆದ್ದಾರಿಯಲ್ಲಿ ಪಂಪ್ವೆಲ್ ಕಡೆಗೆ ಚಲಿಸುತ್ತಿತ್ತು. ಸಂಜೆ 5.30ರ ವೇಳೆಗೆ ಘಟನೆ ಸಂಭವಿಸಿದ್ದು, ಆಟೋ ಚಲಿಸುತ್ತಿದ್ದಾಗಲೇ ಹಿಂದೆ ಕುಳಿತಿದ್ದ ವ್ಯಕ್ತಿಯ ಜೊತೆಗಿದ್ದ ಬಾಕ್ಸ್ ನಲ್ಲಿ ಬೆಂಕಿ ಹತ್ತಿಕೊಂಡು ಸ್ಫೋಟಗೊಂಡಿದೆ. ಆತನ ಜೊತೆಗೆ ಕುಕ್ಕರ್ ಇದ್ದಿರುವುದು ಶಂಕೆಗೆ ಕಾರಣವಾಗಿದೆ. ಇಬ್ಬರು ಗಾಯಾಳುಗಳನ್ನು ಕಂಕನಾಡಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.




ಸ್ಥಳಕ್ಕೆ ಪೊಲೀಸ್ ಕಮಿಷನರ್ ಶಶಿಕುಮಾರ್ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ನಾಗುರಿಯಿಂದ ಆಟೋ ಹತ್ತಿದ್ದ ಪ್ರಯಾಣಿಕನ ಕೈಯಲ್ಲಿದ್ದ ಬಾಕ್ಸ್ ನಲ್ಲಿ ಬೆಂಕಿ ಹತ್ತಿಕೊಂಡು ಸ್ಫೋಟಗೊಂಡಿದೆ. ಬ್ಯಾಗ್ ಹಿಡಿದುಕೊಂಡಿದ್ದ ವ್ಯಕ್ತಿಗೂ ಬೆಂಕಿ ತಗಲಿದೆ. ಆಟೋ ಒಳಗಡೆ ಸುಟ್ಟು ಹೋಗಿದೆ. ಹಿಂದಿನಿಂದ ಬೆಂಕಿ ಕಾಣಿಸಿದ್ದಾಗಿ ಆಟೋ ಚಾಲಕ ಹೇಳಿದ್ದಾನೆ. ಬೆಂಕಿ ಹೇಗೆ ಹತ್ತಿಕೊಂಡಿದೆ ಎಂದು ತಿಳಿದುಬಂದಿಲ್ಲ. ಸ್ಥಳಕ್ಕೆ ವಿಧಿ ವಿಜ್ಞಾನ ತಂಡದ ತಜ್ಞರು ಬಂದು ಪರಿಶೀಲನೆ ನಡೆಸಲಿದ್ದಾರೆ ಎಂದು ಹೇಳಿದ್ದಾರೆ.






ಬ್ಲಾಸ್ಟ್ ಘಟನೆ ಸ್ಥಳದಲ್ಲಿದ್ದ ಕಟ್ಟಡದ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಭಾರೀ ಹೊಗೆ ಕಾಣಿಸಿಕೊಂಡಿದೆ, ಜನರು ಗಾಬರಿಗೊಂಡು ಸ್ಥಳದತ್ತ ಓಡಿದ್ದಾರೆ. ಬೆಂಕಿ ಹತ್ತಿಕೊಂಡು ಏನೋ ಸ್ಫೋಟ ಆದ ರೀತಿ ಕಂಡುಬಂದಿದೆ. ಆಟೋ ರಿಕ್ಷಾ ಒಳಗಡೆ ಹಳೆಯ ಕುಕ್ಕರ್ ಪತ್ತೆಯಾಗಿದೆ. ಹೇಗೆ ಸ್ಫೋಟ ಸಂಭವಿಸಿದೆ ಅನ್ನುವುದು ಇನ್ನೂ ದೃಢಪಟ್ಟಿಲ್ಲ. ಯಾವುದಾದ್ರೂ ಸ್ಫೋಟಕ ವಸ್ತುಗಳನ್ನು ಸಾಗಿಸುತ್ತಿದ್ದನೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮುಖ್ಯಮಂತ್ರಿ ಮಂಗಳೂರಿಗೆ ಬಂದಿದ್ದ ಸಂದರ್ಭದಲ್ಲಿಯೇ ಘಟನೆ ನಡೆದಿದ್ದರಿಂದ ಆತಂಕ ವ್ಯಕ್ತವಾಗಿದೆ. ಮಂಗಳೂರಿನಲ್ಲಿ ಪೊಲೀಸರನ್ನು ಅಲರ್ಟ್ ಇರುವಂತೆ ಸೂಚನೆ ನೀಡಲಾಗಿದೆ.
Autorickshaw minor explosion at Naguri in Mangalore, catches fire passenger suffers injury, driver escapes unhurt, police are now investigating the case.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am