ಬ್ರೇಕಿಂಗ್ ನ್ಯೂಸ್
13-10-20 07:35 pm Mangaluru Correspondent ಕರಾವಳಿ
ಮಂಗಳೂರು, ಅಕ್ಟೋಬರ್ 13: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರ ಬಗ್ಗೆ ಅವಹೇಳನಕಾರಿ ಮಾತನಾಡಿದ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ದಕ್ಷಿಣ ಜಿಲ್ಲಾ ಮಹಿಳಾ ಕಾಂಗ್ರೆಸ್ ಕಿಡಿಕಾರಿದ್ದಾರೆ.
ಮಂಗಳೂರಿನ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಶಾಲೆಟ್ ಪಿಂಟೋ ಮತ್ತು ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಕಾಂಗ್ರೆಸ್ ಅಭ್ಯರ್ಥಿಯಾದ ಕುಸುಮಾ ತನ್ನ ದಿವಂಗತ ಪತಿಯ ಹೆಸರಿನಲ್ಲಿ ಮತ ಯಾಚಿಸಬಾರದು ಎಂದು ಶೋಭಾ ಹೇಳಿರುವುದು ಅಕ್ಷಮ್ಯ. ಶೋಭಾ ಹೇಳಿಕೆ ಭಾರತೀಯ ಸಂಸ್ಕೃತಿಗೆ ತದ್ವಿರುದ್ಧವಾಗಿದೆ. ಸಪ್ತಪದಿ ತುಳಿದವರಿಗೆ ಮಾತ್ರ ಪತಿಯ ಮಹತ್ವ ಗೊತ್ತಿರುತ್ತದೆ ಎಂದು ಶೋಭಾ ವಿರುದ್ಧ ಪರೋಕ್ಷವಾಗಿ ವ್ಯಂಗ್ಯವಾಡಿದರು.

ತನ್ನ ಕ್ಷೇತ್ರದ, ಜಿಲ್ಲೆಯ, ರಾಜ್ಯದ ಸಮಸ್ಯೆ ಬಗ್ಗೆ ಸಂಸತ್ತಿನಲ್ಲಿ ಮಾತನಾಡದ ಶೋಭಾ ಕರಂದ್ಲಾಜೆ ಕೇವಲ ಭಾವನಾತ್ಮಕ ವಿಚಾರಗಳಿಗೆ ಮಾತ್ರ ಪ್ರತಿಕ್ರಿಯೆ ನೀಡುವ ಮೂಲಕ ರಾಜಕಾರಣ ಮಾಡುತ್ತಾರೆ. ಜಾತಿ ಧರ್ಮದ ಹೆಸರಲ್ಲಿ ರಾಜಕೀಯ ಮಾಡೋದು ಯಾರಿಗೂ ಶೋಭೆಯಾಗದು ಎಂದು ಹೇಳಿದರು.
ಉತ್ತರ ಪ್ರದೇಶದ ಮುಖ್ಯಮಂತ್ರಿಯ ಕಾರ್ಯವೈಖರಿ ಬಗ್ಗೆ ಮಿಥುನ್ ರೈ ನೀಡಿದ ಹೇಳಿಕೆಯನ್ನು ಬಿಜೆಪಿಗರು ತಪ್ಪಾಗಿ ಅರ್ಥೈಸಿದ್ದಾರೆ. ಮಿಥುನ್ ಯಾವತ್ತೂ ಜೋಗಿ ಸಮುದಾಯಕ್ಕೆ ಅವಮಾನ ಆಗುವಂಥ ಹೇಳಿಕೆಯನ್ನು ನೀಡಿಲ್ಲ. ಅವರು ನೀಡಿದ ಹೇಳಿಕೆಯನ್ನು ಮುಂದಿಟ್ಟು ಬಿಜೆಪಿಯವರು ರಾಜಕೀಯ ಮಾಡುತ್ತಿರುವುದು ಖಂಡನೀಯ ಎಂದು ಶಕುಂತಲಾ ಶೆಟ್ಟಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಪ್ರತಿಭಾ ಕುಳಾಯಿ, ನಮಿತಾ ಡಿ ರಾವ್, ಶಶಿಕಲಾ ಪದ್ಮನಾಭ, ಮಂಜುಳಾ ನಾಯಕ್, ಶೋಭಾ ಕೇಶವ್, ಸುರೇಖಾ ಚಂದ್ರ ಇತರರು ಉಪಸ್ಥಿತರಿದ್ದರು.
Puttur former MLA Shakuntala Shetty taunts MP Shobha Karandlaje slamming what will women know the value of a husband when she's not married at a press meet held at congress office in Mangalore.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am