ಬ್ರೇಕಿಂಗ್ ನ್ಯೂಸ್
21-11-22 10:10 pm Mangalore Correspondent ಕರಾವಳಿ
ಉಳ್ಳಾಲ, ನ.21 : ಮಲೆನಾಡು ಗಿಡ್ಡ ದೇಸಿ ತಳಿ ಹಸುವಿನ ಸಂವರ್ಧನೆಯೇ ಮುಖ್ಯ ಉದ್ದೇಶವಾಗಿದ್ದರೂ ಪ್ರಸ್ತುತ ದಿನಗಳಲ್ಲಿ ಗೋಶಾಲೆಯನ್ನು ನಡೆಸೋದು ಬಹಳ ಕಷ್ಟಕರವಾಗಿದ್ದು, ಗೋಶಾಲೆಯ ಬಗ್ಗೆ ಸಮಾಜಕ್ಕೆ ಮಾಹಿತಿ ಬಿತ್ತರಿಸುವ ಉದ್ದೇಶದಿಂದ ಜ.14ರಿಂದ ಫೆ.13ರ ವರೆಗೆ ತಿಂಗಳ ಕಾಲ "ಗೋ ಸೇವಾ ಮಾಸಾಚರಣೆ" ಹಮ್ಮಿ ಕೊಳ್ಳಲಾಗಿದೆ ಎಂದು ಕೈರಂಗಳ ಪುಣ್ಯಕೋಟಿ ನಗರದ ಅಮೃತಧಾರಾ ಗೋಶಾಲೆಯ ಸಂಚಾಲಕ ಟಿ.ಜಿ. ರಾಜಾರಾಮ ಭಟ್ ಹೇಳಿದರು.
ಕೈರಂಗಳ ಪುಣ್ಯಕೋಟಿ ನಗರದ
ಅಮೃತಧಾರಾ ಗೋಶಾಲೆಯಲ್ಲಿ ಜ. 14ರಿಂದ ಫೆ.13ರ ತನಕ ನಡೆಯಲಿರುವ "ಗೋ ಸೇವಾ ಮಾಸಾಚರಣೆ" ಪ್ರಯುಕ್ತ ಭಾನುವಾರ ನಡೆದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು ಗುರುಗಳಾದ ಶ್ರೀ ರಾಘವೇಶ್ವರ ಭಾರತಿ ಮಹಾಸ್ವಾಮಿಗಳ ಮಾರ್ಗದರ್ಶನದಲ್ಲಿ ಅಮೃತಧಾರಾ ಗೋಶಾಲೆ ನಡೆಯುತ್ತಿದೆ. ಕಟುಕರ ಕೈಯಿಂದ ಬಿಡಿಸಿದ, ಅನಾಥವಾಗಿರುವ ಹಸುಗಳನ್ನು ಸಾಕಿದರೂ ಸರಕಾರ ಮಾತ್ರ ಕಿಂಚಿತ್ತೂ ಅನುದಾನ ನೀಡುತ್ತಿಲ್ಲ. ದೂರದ ಊರಿನಿಂದ ಸುಶಿಕ್ಷಿತ ಟೆಕ್ಕಿಗಳು ಗೋಶಾಲೆಗೆ ಬಂದು ಗೋವಿನ ಜತೆ ಬೆರೆತು ಮನಸ್ಸು ಹಗುರಗೊಳಿಸಿ ತೆರಳುತ್ತಾರೆ. ಯಾರೇ ಆದರೂ ಗೋಸೇವೆ ಮಾಡಿದರೆ ಗೋಸೇವಾ ಚಟುವಟಿಕೆಯಿಂದ ಮನಸ್ಸಿಗೆ ಶಾಂತಿ ಸಿಗುತ್ತದೆ ಎಂಬುದರಲ್ಲಿ ಸಂಶಯವೇ ಇಲ್ಲ. ಮಾತ್ರವಲ್ಲದೆ ನಮ್ಮ ಪಾಪ ಕ್ಲೇಶ ಕಳೆದು ಅನಾರೋಗ್ಯ ಕೂಡ ದೂರವಾಗ್ತದೆ ಎಂದರು.


ಡಿಸೆಂಬರ್ ನಲ್ಲಿ ಪುಣ್ಯಕೋಟಿ ಶಾರದಾ ಗಣಪತಿ ಶಾಲಾ ಕ್ರೀಡಾಂಗಣದಲ್ಲಿ ಮೂರು ದಿನಗಳ ಕೃಷಿ ಉತ್ಸವ, ಜ.7ಕ್ಕೆ ಶಾಲಾ ವಾರ್ಷಿಕ ಉತ್ಸವ, "ಶಾರದೋತ್ಸವ" ಹಾಗೂ ಜ.14ರಿಂದ ಫೆ.13ರ ತನಕ ಗೋಸೇವಾ ಮಾಸಾಚರಣೆ ನಡೆಯಲಿದ್ದು ವಿವಿಧ ಮಠಗಳ ಸ್ವಾಮೀಜಿಗಳನ್ನು ಕರೆಸಿ ಯತಿ ಸಮಾವೇಶ, ಯತಿಗಳು ಮತ್ತು ಗೋವು ಎಂಬ ವಿಚಾರದಲ್ಲಿ ಮಂಥನ ಕಾರ್ಯಕ್ರಮ ನಡೆಯಲಿರುವುದು. ಫೆ.3 ರಂದು ಅಮೃತಧಾರಾ ಗೋಶಾಲೆಯ ವಾರ್ಷಿಕೋತ್ಸವವೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದರು.


ಕಣಂತೂರು ದೈವಸ್ಥಾನದ ಆಡಳಿತ ಮೊಕ್ತೇಸರ ತಿಮ್ಮಪ್ಪ ಕೊಂಡೆ ಯಾನೆ ಮಂಜು ಭಂಡಾರಿ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರು, ಮುಖಂಡರಾದ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು, ಬಿಜೆಪಿ ಮಂಡಲ ಅಧ್ಯಕ್ಷ ಚಂದ್ರಹಾಸ್ ಪಂಡಿತ್ ಹೌಸ್ ಮೊದಲಾದವರು ಉಪಸ್ಥಿತರಿದ್ದರು.
Event organised at Amruthadhara Goshala to give awareness about desi cows at Ullal in Mangalore.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm