ಬ್ರೇಕಿಂಗ್ ನ್ಯೂಸ್
21-11-22 10:10 pm Mangalore Correspondent ಕರಾವಳಿ
ಉಳ್ಳಾಲ, ನ.21 : ಮಲೆನಾಡು ಗಿಡ್ಡ ದೇಸಿ ತಳಿ ಹಸುವಿನ ಸಂವರ್ಧನೆಯೇ ಮುಖ್ಯ ಉದ್ದೇಶವಾಗಿದ್ದರೂ ಪ್ರಸ್ತುತ ದಿನಗಳಲ್ಲಿ ಗೋಶಾಲೆಯನ್ನು ನಡೆಸೋದು ಬಹಳ ಕಷ್ಟಕರವಾಗಿದ್ದು, ಗೋಶಾಲೆಯ ಬಗ್ಗೆ ಸಮಾಜಕ್ಕೆ ಮಾಹಿತಿ ಬಿತ್ತರಿಸುವ ಉದ್ದೇಶದಿಂದ ಜ.14ರಿಂದ ಫೆ.13ರ ವರೆಗೆ ತಿಂಗಳ ಕಾಲ "ಗೋ ಸೇವಾ ಮಾಸಾಚರಣೆ" ಹಮ್ಮಿ ಕೊಳ್ಳಲಾಗಿದೆ ಎಂದು ಕೈರಂಗಳ ಪುಣ್ಯಕೋಟಿ ನಗರದ ಅಮೃತಧಾರಾ ಗೋಶಾಲೆಯ ಸಂಚಾಲಕ ಟಿ.ಜಿ. ರಾಜಾರಾಮ ಭಟ್ ಹೇಳಿದರು.
ಕೈರಂಗಳ ಪುಣ್ಯಕೋಟಿ ನಗರದ
ಅಮೃತಧಾರಾ ಗೋಶಾಲೆಯಲ್ಲಿ ಜ. 14ರಿಂದ ಫೆ.13ರ ತನಕ ನಡೆಯಲಿರುವ "ಗೋ ಸೇವಾ ಮಾಸಾಚರಣೆ" ಪ್ರಯುಕ್ತ ಭಾನುವಾರ ನಡೆದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು ಗುರುಗಳಾದ ಶ್ರೀ ರಾಘವೇಶ್ವರ ಭಾರತಿ ಮಹಾಸ್ವಾಮಿಗಳ ಮಾರ್ಗದರ್ಶನದಲ್ಲಿ ಅಮೃತಧಾರಾ ಗೋಶಾಲೆ ನಡೆಯುತ್ತಿದೆ. ಕಟುಕರ ಕೈಯಿಂದ ಬಿಡಿಸಿದ, ಅನಾಥವಾಗಿರುವ ಹಸುಗಳನ್ನು ಸಾಕಿದರೂ ಸರಕಾರ ಮಾತ್ರ ಕಿಂಚಿತ್ತೂ ಅನುದಾನ ನೀಡುತ್ತಿಲ್ಲ. ದೂರದ ಊರಿನಿಂದ ಸುಶಿಕ್ಷಿತ ಟೆಕ್ಕಿಗಳು ಗೋಶಾಲೆಗೆ ಬಂದು ಗೋವಿನ ಜತೆ ಬೆರೆತು ಮನಸ್ಸು ಹಗುರಗೊಳಿಸಿ ತೆರಳುತ್ತಾರೆ. ಯಾರೇ ಆದರೂ ಗೋಸೇವೆ ಮಾಡಿದರೆ ಗೋಸೇವಾ ಚಟುವಟಿಕೆಯಿಂದ ಮನಸ್ಸಿಗೆ ಶಾಂತಿ ಸಿಗುತ್ತದೆ ಎಂಬುದರಲ್ಲಿ ಸಂಶಯವೇ ಇಲ್ಲ. ಮಾತ್ರವಲ್ಲದೆ ನಮ್ಮ ಪಾಪ ಕ್ಲೇಶ ಕಳೆದು ಅನಾರೋಗ್ಯ ಕೂಡ ದೂರವಾಗ್ತದೆ ಎಂದರು.


ಡಿಸೆಂಬರ್ ನಲ್ಲಿ ಪುಣ್ಯಕೋಟಿ ಶಾರದಾ ಗಣಪತಿ ಶಾಲಾ ಕ್ರೀಡಾಂಗಣದಲ್ಲಿ ಮೂರು ದಿನಗಳ ಕೃಷಿ ಉತ್ಸವ, ಜ.7ಕ್ಕೆ ಶಾಲಾ ವಾರ್ಷಿಕ ಉತ್ಸವ, "ಶಾರದೋತ್ಸವ" ಹಾಗೂ ಜ.14ರಿಂದ ಫೆ.13ರ ತನಕ ಗೋಸೇವಾ ಮಾಸಾಚರಣೆ ನಡೆಯಲಿದ್ದು ವಿವಿಧ ಮಠಗಳ ಸ್ವಾಮೀಜಿಗಳನ್ನು ಕರೆಸಿ ಯತಿ ಸಮಾವೇಶ, ಯತಿಗಳು ಮತ್ತು ಗೋವು ಎಂಬ ವಿಚಾರದಲ್ಲಿ ಮಂಥನ ಕಾರ್ಯಕ್ರಮ ನಡೆಯಲಿರುವುದು. ಫೆ.3 ರಂದು ಅಮೃತಧಾರಾ ಗೋಶಾಲೆಯ ವಾರ್ಷಿಕೋತ್ಸವವೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದರು.


ಕಣಂತೂರು ದೈವಸ್ಥಾನದ ಆಡಳಿತ ಮೊಕ್ತೇಸರ ತಿಮ್ಮಪ್ಪ ಕೊಂಡೆ ಯಾನೆ ಮಂಜು ಭಂಡಾರಿ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರು, ಮುಖಂಡರಾದ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು, ಬಿಜೆಪಿ ಮಂಡಲ ಅಧ್ಯಕ್ಷ ಚಂದ್ರಹಾಸ್ ಪಂಡಿತ್ ಹೌಸ್ ಮೊದಲಾದವರು ಉಪಸ್ಥಿತರಿದ್ದರು.
Event organised at Amruthadhara Goshala to give awareness about desi cows at Ullal in Mangalore.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
15-11-25 11:12 pm
HK News Desk
ದೆಹಲಿ ಕಾರು ಸ್ಫೋಟ ಪ್ರಕರಣ ; ಪಶ್ಚಿಮ ಬಂಗಾಳದಲ್ಲಿ ಮ...
15-11-25 07:09 pm
ಶ್ರೀನಗರ ಪೊಲೀಸ್ ಠಾಣೆಯಲ್ಲಿ ಭೀಕರ ಸ್ಫೋಟ ; 6 ಮಂದಿ...
15-11-25 12:06 pm
ಬಿಹಾರ ಫಲಿತಾಂಶ ; ‘ಛೋಟೇ ಸರ್ಕಾರ್’ ಖ್ಯಾತಿಯ ಅನಂತ್...
14-11-25 09:10 pm
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
15-11-25 10:47 pm
Mangalore Correspondent
ಬೀದಿ ನಾಯಿಗಳಿಗೆ ವ್ಯಕ್ತಿ ಬಲಿ ; ಕಡೆಗೂ ಎಚ್ಚತ್ತುಕೊ...
15-11-25 07:42 pm
Panambur Accident, Mangalore, Three dead: ಪಣಂ...
15-11-25 02:47 pm
ಬಿಹಾರದಲ್ಲಿ ಚುನಾವಣೆ ಮುನ್ನ ಹತ್ತು ಸಾವಿರ ಕೊಟ್ಟು ಮ...
15-11-25 01:51 pm
ಬಿ.ಸಿ. ರೋಡ್ ಬಳಿ ಭೀಕರ ಅಪಘಾತ ; ಉಡುಪಿ ಕೃಷ್ಣ ಮಠಕ್...
15-11-25 12:12 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm