ಬ್ರೇಕಿಂಗ್ ನ್ಯೂಸ್
22-11-22 08:11 pm Mangalore Correspondent ಕರಾವಳಿ
ಮಂಗಳೂರು, ನ.22 : ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಇತ್ತೀಚೆಗೆ ಬಿಡುಗಡೆ ಮಾಡಿರುವ ಮತದಾರರ ಪಟ್ಟಿಯಲ್ಲಿ ಸಾವಿರಾರು ಮಂದಿಯ ಹೆಸರು ಕಣ್ಮರೆ ಪ್ರಕರಣದಲ್ಲಿ ಬಿಎಲ್ಒ ಮತ್ತು ಅಂಚೆ ಇಲಾಖೆಯ ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂದು ಆಮ್ ಆದ್ಮಿ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಆರೋಪಿಸಿದೆ.
ನಗರದ ಜ್ಯೋತಿ ಬಳಿಯ ಪಕ್ಷದ ಜಿಲ್ಲಾ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾಧ್ಯಕ್ಷ ಸಂತೋಷ್ ಕಾಮತ್, ಜಿಲ್ಲೆಯ ಮತದಾರರ ಪಟ್ಟಿಯಿಂದ ಅನೇಕ ಮಂದಿಯ ಹೆಸರು ಡಿಲೀಟ್ ಆಗಿದೆ. ಉದ್ದೇಶಪೂರ್ವಕ ಈ ಕೆಲಸ ಮಾಡಲಾಗಿದ್ದು ಕೃತ್ಯದಲ್ಲಿ ಬಿಎಲ್ಒ ಮತ್ತು ಅಂಚೆ ಇಲಾಖೆಯವರು ಕೂಡ ಶಾಮೀಲಾಗಿದ್ದಾರೆ. ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರಗಿಸಬೇಕು ಎಂದು ಆಗ್ರಹಿಸಿದ್ದಾರೆ.


ಸಾಮಾಜಿಕ ಕಾರ್ಯಕರ್ತ ಈಶ್ವರ್ರಾಜ್ ಮಾತನಾಡಿ ನಗರ ಹೊರವಲಯದ ಅರ್ಕುಳ ಗ್ರಾಮದ ಮೇರ್ಲಪದವಿನಲ್ಲಿ ಅಂಚೆ ಇಲಾಖೆಯವರು ಶಾಮೀಲಾಗಿ ನಿರ್ದಿಷ್ಟ ಮತದಾರರ ಪಟ್ಟಿಯನ್ನು ಅಕ್ರಮವಾಗಿ ತಿದ್ದುಪಡಿ ಮಾಡಿದ್ದಾರೆ. ನಗರದ ಮಂಗಳಾದೇವಿ ವಾರ್ಡ್ ಸಮಿತಿಯಲ್ಲಿ ತಾನು ಸದಸ್ಯನಾಗಿರಬಾರದು ಎಂಬ ಏಕೈಕ ಕಾರಣಕ್ಕೆ ತನ್ನ ಹೆಸರನ್ನೇ ಪಟ್ಟಿಯಿಂದ ಕಿತ್ತು ಹಾಕಲಾಗಿದೆ ಎಂದು ಆರೋಪಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಆಮ್ ಆದ್ಮಿ ಪಾರ್ಟಿಯ ಮಾಧ್ಯಮ ಸಂಚಾಲಕ ವೆಂಕಟೇಶ್ ಬಾಳಿಗ, ಮಹಿಳಾ ಘಟಕದ ಅಧ್ಯಕ್ಷೆ ಬೆನೆಟ್ ನವಿತಾ ಮೊರಾಸ್, ಮುಖಂಡ ಸ್ಟೀಫನ್ ಪಿಂಟೋ, ಆಮ್ ಆದ್ಮಿ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಅಝ್ಫರ್ ರಜಾಕ್ ಮತ್ತಿತರರು ಉಪಸ್ಥಿತರಿದ್ದರು.
Thousands of voters names go missing from voters list slams Aam Admi party makes serious allegations in Mangalore.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am