ಬ್ರೇಕಿಂಗ್ ನ್ಯೂಸ್
24-11-22 12:48 pm Mangalore Correspondent ಕರಾವಳಿ
ಮಂಗಳೂರು, ನ.24: ಮಹತ್ವದ ಬೆಳವಣಿಗೆಯಲ್ಲಿ ಮಂಗಳೂರಿನ ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣವನ್ನು ನಾವೇ ಮಾಡಿದ್ದಾಗಿ ಯಾವುದೋ ಅನಾಮಧೇಯ ಇಸ್ಲಾಮಿಕ್ ಸಂಘಟನೆಯೊಂದು ಹೇಳಿಕೊಂಡಿದೆ. ಇಸ್ಲಾಮಿಕ್ ರೆಸಿಸ್ಟೆನ್ಸ್ ಕೌನ್ಸಿಲ್ ಹೆಸರಲ್ಲಿ ಇನ್ ಸ್ಟಾ ಗ್ರಾಮಿನಲ್ಲಿ ಈ ಬಗ್ಗೆ ಪೋಸ್ಟ್ ಮಾಡಲಾಗಿದ್ದು, ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.
ಆ ಪೋಸ್ಟ್ ನಲ್ಲಿ ನಮ್ಮ ಟಾರ್ಗೆಟ್ ಕದ್ರಿ ದೇವಸ್ಥಾನ ಆಗಿತ್ತು. ಆದರೆ ಬಾಂಬ್ ಅಲ್ಲಿಗೆ ತಲುಪುವ ಮೊದಲೇ ಬ್ಲಾಸ್ಟ್ ಆಗಿತ್ತು ಅಂತ ಉಲ್ಲೇಖ ಮಾಡಲಾಗಿದೆ. ಉರ್ದು ಭಾಷೆಯಲ್ಲಿ ಆರಂಭದಲ್ಲಿ ಬರೆಯಲಾಗಿದ್ದು, ಆನಂತರ ಇಂಗ್ಲಿಷ್ ನಲ್ಲಿ ಬರೆಯಲಾಗಿದೆ. ಇದಲ್ಲದೆ, ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಅವರನ್ನು ಕುರಿತಾಗಿ ನಿಮ್ಮ ಸಂಭ್ರಮ ಕ್ಷಣಿಕವಾದದ್ದು. ತಕ್ಕ ಪರಿಣಾಮ ಸದ್ಯದಲ್ಲೇ ಎದುರಿಸಲಿದ್ದೀರಿ ಎಂದು ಎಚ್ಚರಿಕೆ ನೀಡಲಾಗಿದೆ.

ಮುಸ್ಲಿಮರ ಮೇಲಿನ ಗುಂಪು ಹತ್ಯೆ, ಕಿರುಕುಳಕ್ಕೆ ಪ್ರತಿಯಾಗಿ ಈ ಕೆಲಸ ಮಾಡುತ್ತಿದ್ದೇವೆ. ಜನರು ಸೇರುವ ಜಾಗದಲ್ಲೇ ಬಾಂಬ್ ಬ್ಲಾಸ್ಟ್ ಆಗಲಿದೆ. ಅದನ್ನು ಎದುರಿಸಲು ತಯಾರಾಗಿ ಎಂದು ಪರೋಕ್ಷವಾಗಿ ರಾಜ್ಯ ಪೊಲೀಸರಿಗೆ ಸವಾಲು ಹಾಕಲಾಗಿದೆ. ಈ ರೀತಿಯ ಹೇಳಿಕೆಯನ್ನು ಪ್ರತಿ ಘಟನೆಯ ಬಳಿಕವೂ ನಾವು ನೀಡುತ್ತೇವೆ ಎಂದು ಕೊನೆಯಲ್ಲಿ ಬರೆಯಲಾಗಿದೆ. ಆದರೆ ಈ ಹೇಳಿಕೆ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳಲ್ಲಿ ಕೇಳಿದರೆ, ಅಂಥಹ ಸಂಘಟನೆಯ ಹೆಸರನ್ನೇ ಕೇಳಿಲ್ಲ. ಯಾರೋ ಪ್ರಚಾರಕ್ಕಾಗಿ ಹೀಗೆ ಮಾಡಿರಬಹುದು. ಏನಿದ್ದರೂ, ಈ ಬಗ್ಗೆ ವೆರಿಫೈ ಮಾಡುತ್ತೇವೆ ಎಂದು ಹೇಳಿದ್ದಾರೆ.



ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಮೊಹಮ್ಮದ್ ಶಾರೀಕ್ ಲಷ್ಕರ್ ಮತ್ತು ತಾಲಿಬಾನ್ ಸಂಘಟನೆಗಳ ನಂಟು ಹೊಂದಿದ್ದಾನೆಂದು ಹೇಳಲಾಗಿತ್ತು. ಆದರೆ ಅಂಥ ಜಾಗತಿಕ ಭಯೋತ್ಪಾದಕ ಸಂಘಟನೆಗಳು ಈ ಬಗ್ಗೆ ಯಾವುದೇ ಹೇಳಿಕೆ ನೀಡಿಲ್ಲ. ಯಾವುದೋ ಹೊಸ ಸಂಘಟನೆ ಇನ್ ಸ್ಟಾ ಗ್ರಾಮ್ ಪೇಜ್ ನಲ್ಲಿ ನಕಲಿ ಐಡಿಯಲ್ಲಿ ಪೋಸ್ಟ್ ಮಾಡಿದ್ದು ಸದ್ಯಕ್ಕೆ ಕುತೂಹಲ ಉಂಟು ಮಾಡಿದೆ.
In a major development in the Mangaluru blast case, an unknown Islamist group has claimed responsibility for the explosion that injured two people, including the main accused and the driver. A press statement of an unknown group - Islamic Resistance Council - has surfaced claiming responsibility for the Mangalore autorickshaw blast. In the statement shared by IRC, the group said that their target was a temple in Kadri, which is a bastion of "saffron terrorism" in Mangaluru, but the bomb exploded before reaching the target.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am