ಬ್ರೇಕಿಂಗ್ ನ್ಯೂಸ್
24-11-22 12:48 pm Mangalore Correspondent ಕರಾವಳಿ
ಮಂಗಳೂರು, ನ.24: ಮಹತ್ವದ ಬೆಳವಣಿಗೆಯಲ್ಲಿ ಮಂಗಳೂರಿನ ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣವನ್ನು ನಾವೇ ಮಾಡಿದ್ದಾಗಿ ಯಾವುದೋ ಅನಾಮಧೇಯ ಇಸ್ಲಾಮಿಕ್ ಸಂಘಟನೆಯೊಂದು ಹೇಳಿಕೊಂಡಿದೆ. ಇಸ್ಲಾಮಿಕ್ ರೆಸಿಸ್ಟೆನ್ಸ್ ಕೌನ್ಸಿಲ್ ಹೆಸರಲ್ಲಿ ಇನ್ ಸ್ಟಾ ಗ್ರಾಮಿನಲ್ಲಿ ಈ ಬಗ್ಗೆ ಪೋಸ್ಟ್ ಮಾಡಲಾಗಿದ್ದು, ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.
ಆ ಪೋಸ್ಟ್ ನಲ್ಲಿ ನಮ್ಮ ಟಾರ್ಗೆಟ್ ಕದ್ರಿ ದೇವಸ್ಥಾನ ಆಗಿತ್ತು. ಆದರೆ ಬಾಂಬ್ ಅಲ್ಲಿಗೆ ತಲುಪುವ ಮೊದಲೇ ಬ್ಲಾಸ್ಟ್ ಆಗಿತ್ತು ಅಂತ ಉಲ್ಲೇಖ ಮಾಡಲಾಗಿದೆ. ಉರ್ದು ಭಾಷೆಯಲ್ಲಿ ಆರಂಭದಲ್ಲಿ ಬರೆಯಲಾಗಿದ್ದು, ಆನಂತರ ಇಂಗ್ಲಿಷ್ ನಲ್ಲಿ ಬರೆಯಲಾಗಿದೆ. ಇದಲ್ಲದೆ, ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಅವರನ್ನು ಕುರಿತಾಗಿ ನಿಮ್ಮ ಸಂಭ್ರಮ ಕ್ಷಣಿಕವಾದದ್ದು. ತಕ್ಕ ಪರಿಣಾಮ ಸದ್ಯದಲ್ಲೇ ಎದುರಿಸಲಿದ್ದೀರಿ ಎಂದು ಎಚ್ಚರಿಕೆ ನೀಡಲಾಗಿದೆ.
ಮುಸ್ಲಿಮರ ಮೇಲಿನ ಗುಂಪು ಹತ್ಯೆ, ಕಿರುಕುಳಕ್ಕೆ ಪ್ರತಿಯಾಗಿ ಈ ಕೆಲಸ ಮಾಡುತ್ತಿದ್ದೇವೆ. ಜನರು ಸೇರುವ ಜಾಗದಲ್ಲೇ ಬಾಂಬ್ ಬ್ಲಾಸ್ಟ್ ಆಗಲಿದೆ. ಅದನ್ನು ಎದುರಿಸಲು ತಯಾರಾಗಿ ಎಂದು ಪರೋಕ್ಷವಾಗಿ ರಾಜ್ಯ ಪೊಲೀಸರಿಗೆ ಸವಾಲು ಹಾಕಲಾಗಿದೆ. ಈ ರೀತಿಯ ಹೇಳಿಕೆಯನ್ನು ಪ್ರತಿ ಘಟನೆಯ ಬಳಿಕವೂ ನಾವು ನೀಡುತ್ತೇವೆ ಎಂದು ಕೊನೆಯಲ್ಲಿ ಬರೆಯಲಾಗಿದೆ. ಆದರೆ ಈ ಹೇಳಿಕೆ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳಲ್ಲಿ ಕೇಳಿದರೆ, ಅಂಥಹ ಸಂಘಟನೆಯ ಹೆಸರನ್ನೇ ಕೇಳಿಲ್ಲ. ಯಾರೋ ಪ್ರಚಾರಕ್ಕಾಗಿ ಹೀಗೆ ಮಾಡಿರಬಹುದು. ಏನಿದ್ದರೂ, ಈ ಬಗ್ಗೆ ವೆರಿಫೈ ಮಾಡುತ್ತೇವೆ ಎಂದು ಹೇಳಿದ್ದಾರೆ.
ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಮೊಹಮ್ಮದ್ ಶಾರೀಕ್ ಲಷ್ಕರ್ ಮತ್ತು ತಾಲಿಬಾನ್ ಸಂಘಟನೆಗಳ ನಂಟು ಹೊಂದಿದ್ದಾನೆಂದು ಹೇಳಲಾಗಿತ್ತು. ಆದರೆ ಅಂಥ ಜಾಗತಿಕ ಭಯೋತ್ಪಾದಕ ಸಂಘಟನೆಗಳು ಈ ಬಗ್ಗೆ ಯಾವುದೇ ಹೇಳಿಕೆ ನೀಡಿಲ್ಲ. ಯಾವುದೋ ಹೊಸ ಸಂಘಟನೆ ಇನ್ ಸ್ಟಾ ಗ್ರಾಮ್ ಪೇಜ್ ನಲ್ಲಿ ನಕಲಿ ಐಡಿಯಲ್ಲಿ ಪೋಸ್ಟ್ ಮಾಡಿದ್ದು ಸದ್ಯಕ್ಕೆ ಕುತೂಹಲ ಉಂಟು ಮಾಡಿದೆ.
In a major development in the Mangaluru blast case, an unknown Islamist group has claimed responsibility for the explosion that injured two people, including the main accused and the driver. A press statement of an unknown group - Islamic Resistance Council - has surfaced claiming responsibility for the Mangalore autorickshaw blast. In the statement shared by IRC, the group said that their target was a temple in Kadri, which is a bastion of "saffron terrorism" in Mangaluru, but the bomb exploded before reaching the target.
15-05-25 10:16 pm
HK News Desk
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm