ಬ್ರೇಕಿಂಗ್ ನ್ಯೂಸ್
25-11-22 07:00 pm Mangalore Correspondent ಕರಾವಳಿ
ಮಂಗಳೂರು, ನ.25 : ದಕ್ಷಿಣ ಕನ್ನಡ ಜಿಲ್ಲಾ ಪ್ರಾದೇಶಿಕ ಸಾರಿಗೆ ಪ್ರಾಧಿಕಾರವು ಆಟೋ ರಿಕ್ಷಾ ಪ್ರಯಾಣ ದರವನ್ನು ಹೆಚ್ಚಳ ಮಾಡಿ ಆದೇಶ ಮಾಡಿದೆ. ಈ ಹಿಂದೆ ಇದ್ದ 25 ರೂ. ಕನಿಷ್ಠ ದರವನ್ನು 35 ರೂ.ಗೆ ಹೆಚ್ಚಿಸಲಾಗಿದೆ.
ಆಟೋ ರಿಕ್ಷಾ ಚಾಲಕರ ಬೇಡಿಕೆ ಪರಿಗಣಿಸಿ, ಈ ಹಿಂದೆ 2020ರ ಫೆಬ್ರವರಿ 27ರಂದು ನಿಗದಿ ಪಡಿಸಿದ ಆಟೋರಿಕ್ಷಾ ದರಗಳನ್ನು ಪುನರ್ ಪರಿಷ್ಕರಿಸಲಾಗಿದೆ. 2022ರ ಡಿಸೆಂಬರ್ 01ರಿಂದ ಜಾರಿಗೆ ಬರುವಂತೆ ಹೊಸ ದರವನ್ನು ನಿಗದಿ ಪಡಿಸಿದೆ.
ಮೊದಲ 1.5 ಕಿ.ಮೀ. ಕನಿಷ್ಠ ದರ 35 ರೂ. (ಗರಿಷ್ಠ 3 ಜನ ಪ್ರಯಾಣಿಕರು), ನಂತರದ ಪ್ರತಿ ಕಿ.ಮೀ. ದರ 20 ರೂ. (ಗರಿಷ್ಠ 3 ಜನ ಪ್ರಯಾಣಿಕರು), ಕಾಯುವಿಕೆ ದರ ಮೊದಲ 15 ನಿಮಿಷ ಉಚಿತ, ನಂತರದ 15 ನಿಮಿಷದ ವರೆಗೆ 5 ರೂ., ಪ್ರಯಾಣಿಕರ ಸರಕಿಗೆ (ಲಗೇಜ್) ಒಬ್ಬ ಪ್ರಯಾಣಿಕ ಕಡ್ಡಾಯವಾಗಿ ಜೊತೆ ಇರಬೇಕು. ಮೊದಲ 20 ಕಿ.ಗ್ರಾಂ. ಗಳಿಗೆ ಉಚಿತ ಹಾಗೂ ನಂತರದ ಪ್ರತಿ 10 ಕಿ.ಗ್ರಾಂ. ಅಥವಾ ಅದರ ಭಾಗಕ್ಕೆ 5 ರೂ. ನಿಗದಿ ಮಾಡಲಾಗಿದೆ. ರಾತ್ರಿ ವೇಳೆ 10 ಗಂಟೆಯಿಂದ ಬೆಳಗಿನ ಜಾವ 5ರ ವರೆಗೆ ಮಾತ್ರ ಈ ಮೇಲಿನ ದರದ ಒಂದೂವರೆ ಪಟ್ಟು ದರವನ್ನು ಪ್ರಯಾಣಿಕರಿಂದ ಪಡೆಯಲು ಅವಕಾಶವಿದೆ.
2022ರ ಡಿಸೆಂಬರ್ 01ರಿಂದ ಒಂದು ತಿಂಗಳೊಳಗೆ ಎಲ್ಲಾ ಆಟೋ ರಿಕ್ಷಾ ಫೇರ್ ಮೀಟರ್ನಲ್ಲಿ ಹೊಸ ದರ ಅಳವಡಿಸಿಕೊಂಡು ತೂಕ ಮತ್ತು ಮಾಪನ ಶಾಸ್ತ್ರ ಇಲಾಖೆಯಿಂದ ದೃಢೀಕರಿಸಿಕೊಳ್ಳಬೇಕು. ಅಲ್ಲದೆ, ಪ್ರಾದೇಶಿಕ ಸಾರಿಗೆ ಪ್ರಾಧಿಕಾರದಿಂದ ಅನುಮೋದಿಸಿದ ದರ ಪಟ್ಟಿಯನ್ನು ಪ್ರತಿ ಆಟೋ ರಿಕ್ಷಾಗಳಲ್ಲಿಯೂ ಪ್ರದರ್ಶಿಸಬೇಕು. ಪ್ರಯಾಣಿಕರು ಪ್ರಯಾಣಿಸುವ ಸ್ಥಳಗಳಿಗೆ ಹೋಗಲು ನಿರಾಕರಿಸಿದಲ್ಲಿ ಹಾಗೂ ಸಾರ್ವಜನಿಕ ಪ್ರಯಾಣಿಕರೊಂದಿಗೆ ಅಸಭ್ಯವಾಗಿ ವರ್ತಿಸಿದಲ್ಲಿ ಅಂತಹ ಆಟೋ ಚಾಲಕರ ವಿರುದ್ಧ ಕಾನೂನಿನಂತೆ ದಂಡ ವಿಧಿಸುವುದು, ಪರವಾನಿಗೆ ಅಮಾನತ್ತು, ರದ್ದತಿ ಕುರಿತು ಕ್ರಮ ಕೈಗೊಳ್ಳುವುದು ಹಾಗೂ ಇತರೆ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಪೊಲೀಸ್ ಇಲಾಖಾ ಅಧಿಕಾರಿಗಳಿಗೆ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ನಿರ್ದೇಶಿಸಲಾಗಿದೆ.
ಅಧಿಕ ದರ ವಸೂಲು ಮಾಡಿದಲ್ಲಿ ಮಂಗಳೂರು ಕಚೇರಿ ದೂ. ಸಂಖ್ಯೆ: 0824-2220577, ಪುತ್ತೂರು ದೂ.ಸಂ: 08251-230729, ಹಾಗೂ ಬಂಟ್ವಾಳ ದೂ.ಸಂ: 08255-280504 ಅವರಿಗೆ ಸಾರ್ವಜನಿಕರು ದೂರುಗಳನ್ನು ನೀಡುವಂತೆ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
District regional transport authority revised the fare of auto rickshaws in the district. The new rates will be effective from December 1. Minimum fare for 1.5 km is fixed at Rs 35 (maximum three passengers). After 1.5 km, Rs 20 is fixed for every additional kilometre. Waiting charges will be free for the first 15 minutes. The next 15 minutes will be charged at Rs five.
01-07-25 10:52 pm
Bangalore Correspondent
ಹಾಸನ ಬಳಿಕ ಶಿವಮೊಗ್ಗ ಸರದಿ ; ಎರಡು ದಿನದಲ್ಲಿ ವಿದ್ಯ...
01-07-25 09:57 pm
Stampede, IPS Officer Vikas Kumar Suspension:...
01-07-25 04:19 pm
Sri Rama Sene, Belagavi, SP: ಶ್ರೀರಾಮಸೇನೆ ಸೇನೆ...
30-06-25 10:30 pm
CM Siddaramaiah, Dk Shivakumar, CM Post: ಹೇಯ್...
30-06-25 02:55 pm
01-07-25 08:57 pm
HK News Desk
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
30-06-25 10:59 pm
Mangalore Correspondent
Mangalore KDP Meeting: ಕೆಡಿಪಿ ಸಭೆಯಲ್ಲಿ ಮರಳು,...
30-06-25 08:19 pm
Mangalore, Rain, School News: ತರಗತಿ ನಡೆಯುತ್ತಿ...
30-06-25 03:20 pm
Mangalore Bomb Threat, Airport: ಮಂಗಳೂರು ಸೇರಿ...
30-06-25 01:07 pm
Red Stone Quarry, Dakshina Kannada, Protest:...
27-06-25 10:17 pm
01-07-25 04:36 pm
Mangalore Correspondent
Bangalore crime, TALAQ, Politicians: ರಾಜಕಾರಣಿ...
01-07-25 02:22 pm
Mysuru Murder, Police suspended: ಪತ್ನಿ ಕೊಲೆಗೈ...
01-07-25 01:55 pm
Sirsi Job Fraud: ನೌಕರಿ ಕೊಡಿಸುವುದಾಗಿ 200 ರೂ. ಪ...
01-07-25 12:07 pm
Gold Loan Scam at Paduva Society, ShaktiNagar...
30-06-25 06:12 pm