ಬ್ರೇಕಿಂಗ್ ನ್ಯೂಸ್
25-11-22 07:00 pm Mangalore Correspondent ಕರಾವಳಿ
ಮಂಗಳೂರು, ನ.25 : ದಕ್ಷಿಣ ಕನ್ನಡ ಜಿಲ್ಲಾ ಪ್ರಾದೇಶಿಕ ಸಾರಿಗೆ ಪ್ರಾಧಿಕಾರವು ಆಟೋ ರಿಕ್ಷಾ ಪ್ರಯಾಣ ದರವನ್ನು ಹೆಚ್ಚಳ ಮಾಡಿ ಆದೇಶ ಮಾಡಿದೆ. ಈ ಹಿಂದೆ ಇದ್ದ 25 ರೂ. ಕನಿಷ್ಠ ದರವನ್ನು 35 ರೂ.ಗೆ ಹೆಚ್ಚಿಸಲಾಗಿದೆ.
ಆಟೋ ರಿಕ್ಷಾ ಚಾಲಕರ ಬೇಡಿಕೆ ಪರಿಗಣಿಸಿ, ಈ ಹಿಂದೆ 2020ರ ಫೆಬ್ರವರಿ 27ರಂದು ನಿಗದಿ ಪಡಿಸಿದ ಆಟೋರಿಕ್ಷಾ ದರಗಳನ್ನು ಪುನರ್ ಪರಿಷ್ಕರಿಸಲಾಗಿದೆ. 2022ರ ಡಿಸೆಂಬರ್ 01ರಿಂದ ಜಾರಿಗೆ ಬರುವಂತೆ ಹೊಸ ದರವನ್ನು ನಿಗದಿ ಪಡಿಸಿದೆ.
ಮೊದಲ 1.5 ಕಿ.ಮೀ. ಕನಿಷ್ಠ ದರ 35 ರೂ. (ಗರಿಷ್ಠ 3 ಜನ ಪ್ರಯಾಣಿಕರು), ನಂತರದ ಪ್ರತಿ ಕಿ.ಮೀ. ದರ 20 ರೂ. (ಗರಿಷ್ಠ 3 ಜನ ಪ್ರಯಾಣಿಕರು), ಕಾಯುವಿಕೆ ದರ ಮೊದಲ 15 ನಿಮಿಷ ಉಚಿತ, ನಂತರದ 15 ನಿಮಿಷದ ವರೆಗೆ 5 ರೂ., ಪ್ರಯಾಣಿಕರ ಸರಕಿಗೆ (ಲಗೇಜ್) ಒಬ್ಬ ಪ್ರಯಾಣಿಕ ಕಡ್ಡಾಯವಾಗಿ ಜೊತೆ ಇರಬೇಕು. ಮೊದಲ 20 ಕಿ.ಗ್ರಾಂ. ಗಳಿಗೆ ಉಚಿತ ಹಾಗೂ ನಂತರದ ಪ್ರತಿ 10 ಕಿ.ಗ್ರಾಂ. ಅಥವಾ ಅದರ ಭಾಗಕ್ಕೆ 5 ರೂ. ನಿಗದಿ ಮಾಡಲಾಗಿದೆ. ರಾತ್ರಿ ವೇಳೆ 10 ಗಂಟೆಯಿಂದ ಬೆಳಗಿನ ಜಾವ 5ರ ವರೆಗೆ ಮಾತ್ರ ಈ ಮೇಲಿನ ದರದ ಒಂದೂವರೆ ಪಟ್ಟು ದರವನ್ನು ಪ್ರಯಾಣಿಕರಿಂದ ಪಡೆಯಲು ಅವಕಾಶವಿದೆ.
2022ರ ಡಿಸೆಂಬರ್ 01ರಿಂದ ಒಂದು ತಿಂಗಳೊಳಗೆ ಎಲ್ಲಾ ಆಟೋ ರಿಕ್ಷಾ ಫೇರ್ ಮೀಟರ್ನಲ್ಲಿ ಹೊಸ ದರ ಅಳವಡಿಸಿಕೊಂಡು ತೂಕ ಮತ್ತು ಮಾಪನ ಶಾಸ್ತ್ರ ಇಲಾಖೆಯಿಂದ ದೃಢೀಕರಿಸಿಕೊಳ್ಳಬೇಕು. ಅಲ್ಲದೆ, ಪ್ರಾದೇಶಿಕ ಸಾರಿಗೆ ಪ್ರಾಧಿಕಾರದಿಂದ ಅನುಮೋದಿಸಿದ ದರ ಪಟ್ಟಿಯನ್ನು ಪ್ರತಿ ಆಟೋ ರಿಕ್ಷಾಗಳಲ್ಲಿಯೂ ಪ್ರದರ್ಶಿಸಬೇಕು. ಪ್ರಯಾಣಿಕರು ಪ್ರಯಾಣಿಸುವ ಸ್ಥಳಗಳಿಗೆ ಹೋಗಲು ನಿರಾಕರಿಸಿದಲ್ಲಿ ಹಾಗೂ ಸಾರ್ವಜನಿಕ ಪ್ರಯಾಣಿಕರೊಂದಿಗೆ ಅಸಭ್ಯವಾಗಿ ವರ್ತಿಸಿದಲ್ಲಿ ಅಂತಹ ಆಟೋ ಚಾಲಕರ ವಿರುದ್ಧ ಕಾನೂನಿನಂತೆ ದಂಡ ವಿಧಿಸುವುದು, ಪರವಾನಿಗೆ ಅಮಾನತ್ತು, ರದ್ದತಿ ಕುರಿತು ಕ್ರಮ ಕೈಗೊಳ್ಳುವುದು ಹಾಗೂ ಇತರೆ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಪೊಲೀಸ್ ಇಲಾಖಾ ಅಧಿಕಾರಿಗಳಿಗೆ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ನಿರ್ದೇಶಿಸಲಾಗಿದೆ.
ಅಧಿಕ ದರ ವಸೂಲು ಮಾಡಿದಲ್ಲಿ ಮಂಗಳೂರು ಕಚೇರಿ ದೂ. ಸಂಖ್ಯೆ: 0824-2220577, ಪುತ್ತೂರು ದೂ.ಸಂ: 08251-230729, ಹಾಗೂ ಬಂಟ್ವಾಳ ದೂ.ಸಂ: 08255-280504 ಅವರಿಗೆ ಸಾರ್ವಜನಿಕರು ದೂರುಗಳನ್ನು ನೀಡುವಂತೆ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
District regional transport authority revised the fare of auto rickshaws in the district. The new rates will be effective from December 1. Minimum fare for 1.5 km is fixed at Rs 35 (maximum three passengers). After 1.5 km, Rs 20 is fixed for every additional kilometre. Waiting charges will be free for the first 15 minutes. The next 15 minutes will be charged at Rs five.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
15-11-25 11:12 pm
HK News Desk
ದೆಹಲಿ ಕಾರು ಸ್ಫೋಟ ಪ್ರಕರಣ ; ಪಶ್ಚಿಮ ಬಂಗಾಳದಲ್ಲಿ ಮ...
15-11-25 07:09 pm
ಶ್ರೀನಗರ ಪೊಲೀಸ್ ಠಾಣೆಯಲ್ಲಿ ಭೀಕರ ಸ್ಫೋಟ ; 6 ಮಂದಿ...
15-11-25 12:06 pm
ಬಿಹಾರ ಫಲಿತಾಂಶ ; ‘ಛೋಟೇ ಸರ್ಕಾರ್’ ಖ್ಯಾತಿಯ ಅನಂತ್...
14-11-25 09:10 pm
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
15-11-25 10:47 pm
Mangalore Correspondent
ಬೀದಿ ನಾಯಿಗಳಿಗೆ ವ್ಯಕ್ತಿ ಬಲಿ ; ಕಡೆಗೂ ಎಚ್ಚತ್ತುಕೊ...
15-11-25 07:42 pm
Panambur Accident, Mangalore, Three dead: ಪಣಂ...
15-11-25 02:47 pm
ಬಿಹಾರದಲ್ಲಿ ಚುನಾವಣೆ ಮುನ್ನ ಹತ್ತು ಸಾವಿರ ಕೊಟ್ಟು ಮ...
15-11-25 01:51 pm
ಬಿ.ಸಿ. ರೋಡ್ ಬಳಿ ಭೀಕರ ಅಪಘಾತ ; ಉಡುಪಿ ಕೃಷ್ಣ ಮಠಕ್...
15-11-25 12:12 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm