ಬ್ರೇಕಿಂಗ್ ನ್ಯೂಸ್
25-11-22 07:00 pm Mangalore Correspondent ಕರಾವಳಿ
ಮಂಗಳೂರು, ನ.25 : ದಕ್ಷಿಣ ಕನ್ನಡ ಜಿಲ್ಲಾ ಪ್ರಾದೇಶಿಕ ಸಾರಿಗೆ ಪ್ರಾಧಿಕಾರವು ಆಟೋ ರಿಕ್ಷಾ ಪ್ರಯಾಣ ದರವನ್ನು ಹೆಚ್ಚಳ ಮಾಡಿ ಆದೇಶ ಮಾಡಿದೆ. ಈ ಹಿಂದೆ ಇದ್ದ 25 ರೂ. ಕನಿಷ್ಠ ದರವನ್ನು 35 ರೂ.ಗೆ ಹೆಚ್ಚಿಸಲಾಗಿದೆ.
ಆಟೋ ರಿಕ್ಷಾ ಚಾಲಕರ ಬೇಡಿಕೆ ಪರಿಗಣಿಸಿ, ಈ ಹಿಂದೆ 2020ರ ಫೆಬ್ರವರಿ 27ರಂದು ನಿಗದಿ ಪಡಿಸಿದ ಆಟೋರಿಕ್ಷಾ ದರಗಳನ್ನು ಪುನರ್ ಪರಿಷ್ಕರಿಸಲಾಗಿದೆ. 2022ರ ಡಿಸೆಂಬರ್ 01ರಿಂದ ಜಾರಿಗೆ ಬರುವಂತೆ ಹೊಸ ದರವನ್ನು ನಿಗದಿ ಪಡಿಸಿದೆ.
ಮೊದಲ 1.5 ಕಿ.ಮೀ. ಕನಿಷ್ಠ ದರ 35 ರೂ. (ಗರಿಷ್ಠ 3 ಜನ ಪ್ರಯಾಣಿಕರು), ನಂತರದ ಪ್ರತಿ ಕಿ.ಮೀ. ದರ 20 ರೂ. (ಗರಿಷ್ಠ 3 ಜನ ಪ್ರಯಾಣಿಕರು), ಕಾಯುವಿಕೆ ದರ ಮೊದಲ 15 ನಿಮಿಷ ಉಚಿತ, ನಂತರದ 15 ನಿಮಿಷದ ವರೆಗೆ 5 ರೂ., ಪ್ರಯಾಣಿಕರ ಸರಕಿಗೆ (ಲಗೇಜ್) ಒಬ್ಬ ಪ್ರಯಾಣಿಕ ಕಡ್ಡಾಯವಾಗಿ ಜೊತೆ ಇರಬೇಕು. ಮೊದಲ 20 ಕಿ.ಗ್ರಾಂ. ಗಳಿಗೆ ಉಚಿತ ಹಾಗೂ ನಂತರದ ಪ್ರತಿ 10 ಕಿ.ಗ್ರಾಂ. ಅಥವಾ ಅದರ ಭಾಗಕ್ಕೆ 5 ರೂ. ನಿಗದಿ ಮಾಡಲಾಗಿದೆ. ರಾತ್ರಿ ವೇಳೆ 10 ಗಂಟೆಯಿಂದ ಬೆಳಗಿನ ಜಾವ 5ರ ವರೆಗೆ ಮಾತ್ರ ಈ ಮೇಲಿನ ದರದ ಒಂದೂವರೆ ಪಟ್ಟು ದರವನ್ನು ಪ್ರಯಾಣಿಕರಿಂದ ಪಡೆಯಲು ಅವಕಾಶವಿದೆ.
2022ರ ಡಿಸೆಂಬರ್ 01ರಿಂದ ಒಂದು ತಿಂಗಳೊಳಗೆ ಎಲ್ಲಾ ಆಟೋ ರಿಕ್ಷಾ ಫೇರ್ ಮೀಟರ್ನಲ್ಲಿ ಹೊಸ ದರ ಅಳವಡಿಸಿಕೊಂಡು ತೂಕ ಮತ್ತು ಮಾಪನ ಶಾಸ್ತ್ರ ಇಲಾಖೆಯಿಂದ ದೃಢೀಕರಿಸಿಕೊಳ್ಳಬೇಕು. ಅಲ್ಲದೆ, ಪ್ರಾದೇಶಿಕ ಸಾರಿಗೆ ಪ್ರಾಧಿಕಾರದಿಂದ ಅನುಮೋದಿಸಿದ ದರ ಪಟ್ಟಿಯನ್ನು ಪ್ರತಿ ಆಟೋ ರಿಕ್ಷಾಗಳಲ್ಲಿಯೂ ಪ್ರದರ್ಶಿಸಬೇಕು. ಪ್ರಯಾಣಿಕರು ಪ್ರಯಾಣಿಸುವ ಸ್ಥಳಗಳಿಗೆ ಹೋಗಲು ನಿರಾಕರಿಸಿದಲ್ಲಿ ಹಾಗೂ ಸಾರ್ವಜನಿಕ ಪ್ರಯಾಣಿಕರೊಂದಿಗೆ ಅಸಭ್ಯವಾಗಿ ವರ್ತಿಸಿದಲ್ಲಿ ಅಂತಹ ಆಟೋ ಚಾಲಕರ ವಿರುದ್ಧ ಕಾನೂನಿನಂತೆ ದಂಡ ವಿಧಿಸುವುದು, ಪರವಾನಿಗೆ ಅಮಾನತ್ತು, ರದ್ದತಿ ಕುರಿತು ಕ್ರಮ ಕೈಗೊಳ್ಳುವುದು ಹಾಗೂ ಇತರೆ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಪೊಲೀಸ್ ಇಲಾಖಾ ಅಧಿಕಾರಿಗಳಿಗೆ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ನಿರ್ದೇಶಿಸಲಾಗಿದೆ.
ಅಧಿಕ ದರ ವಸೂಲು ಮಾಡಿದಲ್ಲಿ ಮಂಗಳೂರು ಕಚೇರಿ ದೂ. ಸಂಖ್ಯೆ: 0824-2220577, ಪುತ್ತೂರು ದೂ.ಸಂ: 08251-230729, ಹಾಗೂ ಬಂಟ್ವಾಳ ದೂ.ಸಂ: 08255-280504 ಅವರಿಗೆ ಸಾರ್ವಜನಿಕರು ದೂರುಗಳನ್ನು ನೀಡುವಂತೆ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
District regional transport authority revised the fare of auto rickshaws in the district. The new rates will be effective from December 1. Minimum fare for 1.5 km is fixed at Rs 35 (maximum three passengers). After 1.5 km, Rs 20 is fixed for every additional kilometre. Waiting charges will be free for the first 15 minutes. The next 15 minutes will be charged at Rs five.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am