ಬ್ರೇಕಿಂಗ್ ನ್ಯೂಸ್
14-10-20 11:34 am Mangaluru Correspondent ಕರಾವಳಿ
ಮಂಗಳೂರು, ಅಕ್ಟೋಬರ್ 14: ಮಾಂಸದ ಮಾರುಕಟ್ಟೆಯಲ್ಲಿ ದನದ ಮಾಂಸವನ್ನು ಬೆರೆಸಲಾಗುತ್ತದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆ ಮೇಯರ್ ದಿವಾಕರ ಪಾಂಡೇಶ್ವರ್ ಮಂಗಳೂರಿನ ಮಾಂಸದ ಮಾರುಕಟ್ಟೆಗಳಿಗೆ ದಿಢೀರ್ ದಾಳಿ ನಡೆಸಿದ್ದಾರೆ.
ಉರ್ವಾ, ಉರ್ವಾ ಸ್ಟೋರ್ ಮತ್ತು ಕುದ್ರೋಳಿ ಕಸಾಯಿಖಾನೆಗೆ ಭೇಟಿ ನೀಡಿದ ಮೇಯರ್, ಅಧಿಕಾರಿಗಳ ಜೊತೆ ಪರಿಶೀಲನೆ ನಡೆಸಿದರು. ಮಾಂಸದ ಮಾರುಕಟ್ಟೆಗಳಲ್ಲಿ ದಿನವಹಿ ವ್ಯಾಪಾರವಾಗುವ ಮಾಂಸದ ಪ್ರಮಾಣ, ಕಡಿಯುವ ಕುರಿ, ಆಗಳ ಕುರಿತು ರಶೀದಿ ಇಟ್ಟುಕೊಳ್ಳದಿರುವ ವಿಚಾರದ ಬಗ್ಗೆ ಮೇಯರ್ ವ್ಯಾಪಾರಿಗಳನ್ನು ತರಾಟೆಗೆತ್ತಿಕೊಂಡರು. ಎಲ್ಲಿಂದ ಕುರಿ, ಆಡುಗಳನ್ನು ತರುತ್ತೀರಿ, ಎಷ್ಟು ಕಡಿಯುತ್ತೀರಿ ಮತ್ತು ಮಾಂಸದ ಪ್ರಮಾಣ ಎಷ್ಟು ಎನ್ನುವ ಬಗ್ಗೆ ಕಂಪ್ಯೂಟರೈಸ್ಡ್ ಬಿಲ್ ಇಟ್ಟುಕೊಳ್ಳಬೇಕು. ಈ ಬಗ್ಗೆ ಪಾಲಿಕೆಯ ಆರೋಗ್ಯ ಇಲಾಖೆ ಅಧಿಕಾರಿಗಳು ದಿನವೂ ಚೆಕ್ ಮಾಡಬೇಕು ಎಂದು ಸೂಚನೆ ನೀಡಿದರು.
ದಾಳಿ ವೇಳೆ, ದಿನದ ಮಾಂಸ ಪತ್ತೆಯಾಗಿಲ್ಲ ಎಂದು ಮೇಯರ್ ದಿವಾಕರ್ ಹೇಳಿದ್ದಾರೆ. ಇದೇ ವೇಳೆ, ಕುದ್ರೋಳಿ ಕಸಾಯಿಖಾನೆಗೂ ಮೇಯರ್ ಭೇಟಿ ನೀಡಿದ್ದಾರೆ. ಅಲ್ಲಿ ಎಷ್ಟು ಪ್ರಮಾಣದಲ್ಲಿ ಡೈಲಿ ಆಡು, ಕುರಿ, ದನಗಳನ್ನು ಕಡಿಯಲಾಗುತ್ತದೆ ಎನ್ನುವ ಮಾಹಿತಿಯೇ ಇರಲಿಲ್ಲ. ಅದರ ಬಗ್ಗೆ ರಶೀದಿ ಕೇಳಿದ್ದಕ್ಕೆ ಅಲ್ಲಿನ ಸಿಬಂದಿಗಳು ಕೈಯಲ್ಲಿ ಬರೆದ ಚೀಟಿಗಳನ್ನು ಮುಂದಿಟ್ಟರು. ರಶೀದಿ, ಬಿಲ್ ಪುಸ್ತಕ ಇಟ್ಟುಕೊಳ್ಳದ ವ್ಯಾಪಾರಿಗಳ ವಿರುದ್ಧ ಗರಂ ಆದ ಮೇಯರ್, ಆರೋಗ್ಯ ಇಲಾಖೆಯ ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡರು.





ದಿನವೂ ದನ, ಆಡುಗಳನ್ನು ಕಡಿಯುವ ವೇಳೆ, ಆರೋಗ್ಯ ಇಲಾಖೆ ಅಧಿಕಾರಿಗಳು ಸ್ಥಳದಲ್ಲಿರಬೇಕು. ಅಧಿಕಾರಿಗಳ ಅನುಮತಿಯ ಬಳಿಕವೇ ವಧೆ ಮಾಡಬೇಕೆಂದು ನಿಯಮ ಇದೆ. ಆರೋಗ್ಯ ಅಧಿಕಾರಿಗಳು ಇದನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂದು ಸೂಚನೆ ನೀಡಿದರು.
Mangaluru City Corporation (MCC) officials, including mayor Diwakara raided the slaughterhouse under the limits of MCC as there were allegations that beef meat is being mixed with mutton here on Wednesday 14th, October 2020.
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm