ಬ್ರೇಕಿಂಗ್ ನ್ಯೂಸ್
28-11-22 06:39 pm Udupi Correspondent ಕರಾವಳಿ
ಉಡುಪಿ, ನ.28 : ಮಣಿಪಾಲದ ಎಂಐಟಿ ಕಾಲೇಜಿನಲ್ಲಿ ಪ್ರಾಧ್ಯಾಪಕರೊಬ್ಬರು ತರಗತಿ ವೇಳೆ ಮುಸ್ಲಿಂ ವಿದ್ಯಾರ್ಥಿಯೊಬ್ಬನಿಗೆ `ಟೆರರಿಸ್ಟ್’ ಎಂಬ ಪದ ಬಳಸಿ ನಿಂದನೆ ಮಾಡಿದ ಘಟನೆಯ ವಿಡಿಯೋ ವೈರಲ್ ಆಗಿದೆ.
ತರಗತಿಯಲ್ಲಿ ವಿದ್ಯಾರ್ಥಿ ಮತ್ತು ಪ್ರೊಫೆಸರ್ ವಾಗ್ವಾದ ನಡೆಸುತ್ತಿರುವ ವಿಡಿಯೋ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ಇದೇ ತಿಂಗಳ ನವೆಂಬರ್ 26ರಂದು ಘಟನೆ ನಡೆದಿದ್ದು, ವಿದ್ಯಾರ್ಥಿಗಳೊಂದಿಗೆ ಮಾತನಾಡುವಾಗ ಮುಸ್ಲಿಮರು ಟೆರರಿಸ್ಟ್ ಗಳು ಎಂಬ ಅರ್ಥದಲ್ಲಿ ಪ್ರೊಫೆಸರ್ ಹೇಳಿದ್ದು, ವಿವಾದಕ್ಕೆ ಕಾರಣವಾಗಿದೆ.
ಪ್ರೊಫೆಸರ್ ಮಾತಿಗೆ ತರಗತಿಯಲ್ಲಿ ಆಕ್ಷೇಪ ವ್ಯಕ್ತಪಡಿಸಿದ ವಿದ್ಯಾರ್ಥಿ, ಇಡೀ ಮುಸ್ಲಿಂ ಕಮ್ಯುನಿಟಿಯನ್ನು ಟೆರರಿಸ್ಟ್ ಎಂದು ಕರೆಯಬೇಡಿ, ಅನಗತ್ಯವಾಗಿ ಈ ರೀತಿ ಮಾತನಾಡಬೇಡಿ ಎಂದಿದ್ದಾನೆ. ಬಳಿಕ ಪ್ರಾಧ್ಯಾಪಕರು ಸಮಜಾಯಿಷಿ ಹೇಳಿದ್ದು ವಿದ್ಯಾರ್ಥಿ ತನ್ನ ಮಗನಂತೆ ಎಂದಿದ್ದಾರೆ. ಇದನ್ನು ಪ್ರಶ್ನಿಸಿದ ವಿದ್ಯಾರ್ಥಿ `ನೀವು ನಿಮ್ಮ ಮಗನಿಗೆ ಹೀಗೆ ಮಾತನಾಡುತ್ತೀರಾ? ನೀವು ಅವನನ್ನು ಭಯೋತ್ಪಾದಕ ಎಂದು ಕರೆಯುತ್ತೀರಾ? ನೀವು ಎಷ್ಟು ಜನರ ಮುಂದೆ ನನ್ನನ್ನು ಹಾಗೆ ಕರೆಯುತ್ತೀರಿ? ಇದು ತರಗತಿ, ನೀವು ವೃತ್ತಿಪರರಾಗಿ ಕಲಿಸುತ್ತಿದ್ದೀರಿ, ಮುಸ್ಲಿಮನಾಗಿ ದಿನನಿತ್ಯ ಇದನ್ನು ಎದುರಿಸುವುದು ತಮಾಷೆಯಲ್ಲ. ನೀವು ನನ್ನನ್ನು ಹಾಗೆ ಕರೆಯಬೇಡಿ” ಎಂದು ವಿದ್ಯಾರ್ಥಿ ವಾಗ್ವಾದಕ್ಕಿಳಿದಿದ್ದಾನೆ. ವಿದ್ಯಾರ್ಥಿ ಆಕ್ಷೇಪಿಸುತ್ತಿದ್ದಂತೆ ಪ್ರೊಫೆಸರ್ ವಿಷಾದ ವ್ಯಕ್ತಪಡಿಸಿ, ಸ್ಥಳದಲ್ಲೇ ಕ್ಷಮೆ ಕೋರಿದ್ದು ವಿಡಿಯೋದಲ್ಲಿದೆ.
ನೀವು ಕ್ಷಮೆ ಕೇಳಿದ ತಕ್ಷಣ ಮಾಡಿರುವ ಆರೋಪ ಬದಲಾಗಲ್ಲ ಎಂದು ವಿದ್ಯಾರ್ಥಿ ಆಕ್ಷೇಪಿಸಿದ್ದಾನೆ. ಈ ವೀಡಿಯೋ ಜಾಲತಾಣದಲ್ಲಿ ಹರಿದಾಡುತ್ತಿದ್ದಂತೆ ಉಪನ್ಯಾಸಕನ ವಿರುದ್ಧ ಮಾಹೆ ವಿಶ್ವವಿದ್ಯಾನಿಲಯದ ಆಡಳಿತ ಅಮಾನತುಗೊಳಿಸಿ ಆಂತರಿಕ ತನಿಖೆಗೆ ಆದೇಶಿಸಿದೆ. ವಿದ್ಯಾರ್ಥಿಗೆ ಕೌನ್ಸಿಲಿಂಗ್ ಮೂಲಕ ಸಾಂತ್ವನ ಹೇಳಿದೆ.
A Professor in a class room in India calling a Muslim student ‘terrorist’ - This is what it has been to be a minority in India! pic.twitter.com/EjE7uFbsSi
— Ashok Swain (@ashoswai) November 27, 2022
In a shocking incident, a professor from a Reputed University was suspended after a video went viral on social media where a student is seen to be arguing with the professor for allegedly calling him a terrorist. The professor later apologised to the student and said that he did not seriously mean it and that he is like his kid.
15-05-25 11:59 am
HK News Desk
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 06:02 pm
Bangalore Correspondent
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm