ಬ್ರೇಕಿಂಗ್ ನ್ಯೂಸ್
28-11-22 10:21 pm Mangalore Correspondent ಕರಾವಳಿ
ಮಂಗಳೂರು, ನ.28: ಸುರತ್ಕಲ್ ಟೋಲ್ ಗೇಟ್ ಕಡೆಗೂ ಅಲ್ಲಿಂದ ತೆರವುಗೊಳಿಸಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎಂ.ಆರ್ ರವಿಕುಮಾರ್ ಅಧಿಕೃತ ಆದೇಶ ಹೊರಡಿಸಿದ್ದಾರೆ. ಅದರಂತೆ, ಡಿ.1ರ ಬಳಿಕ ಸುರತ್ಕಲ್ ಟೋಲ್ ಅಲ್ಲಿ ಇರುವುದಿಲ್ಲ. ಬದಲಿಗೆ, ಹೆಜಮಾಡಿಯ ಟೋಲ್ ಗೇಟ್ ನಲ್ಲಿ ವಿಲೀನಗೊಳ್ಳಲಿದ್ದು ಅಲ್ಲಿನ ಶುಲ್ಕ ಡಬಲ್ ಗಿಂತಲೂ ಹೆಚ್ಚಾಗಲಿದೆ.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನೋಟಿಫಿಕೇಶನ್ ಆಧರಿಸಿ ಜಿಲ್ಲಾಡಳಿತ ವಿಲೀನ ಮತ್ತು ಸುರತ್ಕಲ್ ಟೋಲ್ ಗೇಟ್ ತೆರವಿನ ಬಗ್ಗೆ ಆದೇಶ ಹೊರಡಿಸಿದೆ. ಅಲ್ಲದೆ, ಹೆದ್ದಾರಿ ಪ್ರಾಧಿಕಾರದ ನೋಟಿಫಿಕೇಶನ್ ರೀತಿಯಲ್ಲೇ ಹೆಜಮಾಡಿಯಲ್ಲಿ ಸುರತ್ಕಲ್ ಟೋಲನ್ನು ಪಡೆಯುವಂತೆ ನವಯುಗ ಸಂಸ್ಥೆಗೆ ಸೂಚನೆ ನೀಡಿದ್ದಾರೆ. ಇದಲ್ಲದೆ, ಹೆದ್ದಾರಿ ಪ್ರಾಧಿಕಾರದ ಕೋರಿಕೆಯಂತೆ ಹೆಜಮಾಡಿಯಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸುವುದಕ್ಕೂ ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ.

ಸುರತ್ಕಲ್ ಟೋಲ್ ಗೇಟ್ ತೆರವಿಗಾಗಿ ಕಳೆದ ಒಂದು ತಿಂಗಳಿನಿಂದ ಪ್ರತಿಭಟನಾ ಧರಣಿ ನಡೆಯುತ್ತಿದೆ. ಕಳೆದ ಅ.28ರಂದು ಟೋಲ್ ಗೇಟ್ ಗೆ ಮುತ್ತಿಗೆ ಹಾಕಿ ಭಾರೀ ಪ್ರತಿಭಟನೆ ನಡೆದಿತ್ತು. ಪೊಲೀಸರ ಸರ್ಪಗಾವಲು ಮಧ್ಯೆಯೂ ಟೋಲ್ ಗೇಟನ್ನು ಬಲವಂತದಿಂದ ತೆರವು ಮಾಡಲು ಜನರು ಯತ್ನಿಸಿದ್ದರು. ಬಳಿಕ ಪೊಲೀಸರು ಸೇರಿದ್ದ ವಿವಿಧ ಪಕ್ಷಗಳ ನಾಯಕರು, ಕಾರ್ಯಕರ್ತರನ್ನು ಬಂಧಿಸಿದ್ದರು. ಆನಂತರ, ಸ್ಥಳದಲ್ಲಿ ಪ್ರತಿಭಟನಾ ಧರಣಿ ನಡೆಸಲಾಗಿದ್ದು ಒಂದು ತಿಂಗಳನ್ನು ಪೂರೈಸಿದೆ. ಈ ನಡುವೆ ಶಾಸಕರು, ಸಂಸದರು ಸುರತ್ಕಲ್ ಟೋಲ್ ತೆರವುಗೊಳಿಸುವ ಬಗ್ಗೆ ಹೇಳಿಕೆ ನೀಡಿದ್ದರೂ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹೆಜಮಾಡಿ ಟೋಲ್ ಪ್ಲಾಜಾದಲ್ಲಿ ವಿಲೀನಗೊಳಿಸಿ ಆದೇಶ ಹೊರಡಿಸಿದ್ದರು. ಇದರಿಂದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಸ್ಥಳೀಯ ಜನಪ್ರತಿನಿಧಿಗಳಿಗೆ ತೀವ್ರ ಮುಖಭಂಗ ಆಗಿತ್ತು.
ಇದೀಗ ಹೆದ್ದಾರಿ ಪ್ರಾಧಿಕಾರದ ಆದೇಶವನ್ನು ಯಥಾವತ್ತಾಗಿ ಜಾರಿಗೊಳಿಸಲು ಜಿಲ್ಲಾಡಳಿತ ಮುಂದಾಗಿದೆ. ಹೆಜಮಾಡಿಯಲ್ಲಿ ಟೋಲ್ ಡಬಲ್ ಸಂಗ್ರಹ ಮಾಡುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಪ್ರತಿಭಟನಾ ಧರಣಿ ಅಲ್ಲಿಗೆ ಸ್ಥಳಾಂತರಗೊಳ್ಳುವ ಸಾಧ್ಯತೆಯಿದೆ.
Mangalore DC orders for removal of the illegal Surathkal toll, double collection at Hejamady toll. But DC has not clarified anything about the double toll that will be collected at Hejamady hereafter.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
15-11-25 11:12 pm
HK News Desk
ದೆಹಲಿ ಕಾರು ಸ್ಫೋಟ ಪ್ರಕರಣ ; ಪಶ್ಚಿಮ ಬಂಗಾಳದಲ್ಲಿ ಮ...
15-11-25 07:09 pm
ಶ್ರೀನಗರ ಪೊಲೀಸ್ ಠಾಣೆಯಲ್ಲಿ ಭೀಕರ ಸ್ಫೋಟ ; 6 ಮಂದಿ...
15-11-25 12:06 pm
ಬಿಹಾರ ಫಲಿತಾಂಶ ; ‘ಛೋಟೇ ಸರ್ಕಾರ್’ ಖ್ಯಾತಿಯ ಅನಂತ್...
14-11-25 09:10 pm
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
15-11-25 10:47 pm
Mangalore Correspondent
ಬೀದಿ ನಾಯಿಗಳಿಗೆ ವ್ಯಕ್ತಿ ಬಲಿ ; ಕಡೆಗೂ ಎಚ್ಚತ್ತುಕೊ...
15-11-25 07:42 pm
Panambur Accident, Mangalore, Three dead: ಪಣಂ...
15-11-25 02:47 pm
ಬಿಹಾರದಲ್ಲಿ ಚುನಾವಣೆ ಮುನ್ನ ಹತ್ತು ಸಾವಿರ ಕೊಟ್ಟು ಮ...
15-11-25 01:51 pm
ಬಿ.ಸಿ. ರೋಡ್ ಬಳಿ ಭೀಕರ ಅಪಘಾತ ; ಉಡುಪಿ ಕೃಷ್ಣ ಮಠಕ್...
15-11-25 12:12 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm