ಬ್ರೇಕಿಂಗ್ ನ್ಯೂಸ್
30-11-22 09:54 pm Mangalore Correspondent ಕರಾವಳಿ
ಮಂಗಳೂರು, ನ.30: ಮುಸ್ಲಿಂ ಸಮುದಾಯಕ್ಕೆ ಪ್ರತ್ಯೇಕ ವಿದ್ಯಾಸಂಸ್ಥೆಗಳನ್ನು ತೆರೆಯಲು ಅವಕಾಶ ಕೊಟ್ಟು ಅವುಗಳಿಗೆ ಅನುದಾನ ಒದಗಿಸಲು ಮುಂದಾಗುವ ಮೂಲಕ ಬಿ.ಜೆ.ಪಿ. ತನ್ನ ಅಸಲಿ ಮುಖವನ್ನು ಬಯಲು ಮಾಡಿಕೊಂಡಿದೆ ಎಂದು ಹಿಂದು ಮಹಾಸಭಾದ ಕರ್ನಾಟಕ ರಾಜ್ಯಾಧ್ಯಕ್ಷ ರಾಜೇಶ್ ಪವಿತ್ರನ್ ಲೇವಡಿ ಮಾಡಿದ್ದಾರೆ.
ರಾಜ್ಯದ ಬಿಜೆಪಿ ಸರಕಾರ ಮುಸ್ಲಿಂ ವಿದ್ಯಾರ್ಥಿಗಳಿಗಾಗಿಯೇ ವಿದ್ಯಾಸಂಸ್ಥೆ ತೆರೆಯಲು ಮುಂದಾಗಿರುವಾಗ ಹಿಂದೂಗಳಿಗೆಂದೇ ಯಾಕೆ ಪ್ರತ್ಯೇಕ ವಿದ್ಯಾಸಂಸ್ಥೆ ತೆರೆಯಬಾರದು ಎಂದು ಪವಿತ್ರನ್ ಪ್ರಶ್ನೆ ಮಾಡಿದ್ದಾರೆ. ಈ ದೇಶದಲ್ಲಿ ಹಿಂದುಗಳಿಗೆ ಪ್ರತ್ಯೇಕ ಶಿಕ್ಷಣ ಸಂಸ್ಥೆ ತೆರೆಯಲು ಕಾನೂನಿನಲ್ಲಿ ಅವಕಾಶ ಇಲ್ಲ. ಹಿಂದುಗಳ ಪಕ್ಷ ಎಂದು ಹೇಳಿಕೊಳ್ಳುವ ಬಿಜೆಪಿ ಹಿಂದುಗಳ ಶಿಕ್ಷಣ ಸಂಸ್ಥೆ ತೆರೆಯುವ ಯಾವುದೇ ಗೋಜಿಗೆ ಹೋಗಿಲ್ಲ. ಹಿಂದೆ ಇದ್ದ ಗುರುಕುಲ ಪದ್ಧತಿ ಪ್ರಕಾರದ ಶಿಕ್ಷಣಕ್ಕೆ ಇವರು ಅನುಮತಿ ಕೊಡಲ್ಲ. ಆದರೆ ಮುಸ್ಲಿಮರಿಗೆ ಪ್ರತ್ಯೇಕ ಶಿಕ್ಷಣ ಸಂಸ್ಥೆ ತೆರೆಯಲು ಅನುದಾನ ಕೊಡುತ್ತದೆ. ರಾಜ್ಯದಲ್ಲಿ ಪ್ರತಿ ಶಿಕ್ಷಣ ಸಂಸ್ಥೆಗೆ ತಲಾ ಎರಡೂವರೆ ಕೋಟಿ ಅಂದರೆ ಹತ್ತಯ ಸಂಸ್ಥೆಗಳಿಗೆ ಸುಮಾರು 30 ಕೋಟಿ ರೂ. ಅನುದಾನ ಕೊಡಲು ಮುಂದಾಗಿದೆ. ಇದನ್ನು ಖಂಡಿಸುತ್ತೇನೆ. ಬಿಜೆಪಿ ಚುನಾವಣೆ ಕಾಲದಲ್ಲಿ ಮುಸ್ಲಿಮರ ಓಲೈಕೆಗೆ ತೊಡಗಿರುವುದನ್ನು ತೋರಿಸಿದೆ ಎಂದಿದ್ದಾರೆ.

ಈ ರೀತಿ ಮಾಡಿದರೆ ಹಿಜಾಬ್ ವಿರುದ್ಧ ಮಾಡಿದ ಹೋರಾಟಕ್ಕೆ ಏನು ಬೆಲೆ ಬಂದಂತಾಯಿತು, ಇದು ಹಿಂದೂ ವಿರೋಧಿ ನೀತಿಯಲ್ಲವೇ, ಈ ಕೆಲಸವನ್ನು ಕಾಂಗ್ರೆಸ್ ಅಥವಾ ಬೇರೆ ಯಾವುದೇ ಪಕ್ಷದವರು ಮಾಡಿದ್ದರೆ ಬಿ.ಜೆ.ಪಿ. ಬೀದಿಗೆ ಇಳಿದು ಪ್ರತಿಭಟನೆ ಮಾಡುತ್ತಿರಲಿಲ್ಲವೇ ಎಂದು ಸರಣಿ ಪ್ರಶ್ನೆಗಳನ್ನು ಪವಿತ್ರನ್ ಕೇಳಿದ್ದಾರೆ.

ಮಂಗಳೂರಿನಲ್ಲಿ ಮಾಧ್ಯಮಗಳಿಗೆ ಹೇಳಿಕೆಯನ್ನು ಬಿಡುಗಡೆ ಮಾಡಿರುವ ರಾಜ್ಯಾಧ್ಯಕ್ಷ ಪವಿತ್ರನ್, ಇಂತಹ ಬೇಜವಾಬ್ದಾರಿ ನಿಲುವನ್ನು ತೋರಿಸುತ್ತಿರುವ ಬಿಜೆಪಿ ಬೋಗಸ್ ಜನರ ಪಕ್ಷವಾಗಿದೆ ಎನ್ನುವುದನ್ನು ತೋರಿಸಿದೆ. ಹಿಂದೆ ಭ್ರಷ್ಟ ಜನರ ಪಕ್ಷವಾಗಿತ್ತು. ಈಗ ಬೋಗಸ್ ಜನರ ಪಕ್ಷವಾಗಿದೆ ಎಂದು ಜರೆದಿದ್ದಾರೆ.
The BHARATIYA Janata Party (BJP) has decided to open separate educational institutions for the Muslim community and provide them with grants. Hindu Mahasabha's Karnataka state president Rajesh Pavithran said the party has exposed its true face.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm