ಬ್ರೇಕಿಂಗ್ ನ್ಯೂಸ್
01-12-22 04:58 pm Mangalore Correspondent ಕರಾವಳಿ
ಮಂಗಳೂರು, ಡಿ.1: ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಮೊಹಮ್ಮದ್ ಶಾರೀಕ್ ಸುಟ್ಟ ಗಾಯಗಳಿಂದ ಸ್ವಲ್ಪ ಮಟ್ಟಿಗೆ ಚೇತರಿಸಿಕೊಂಡಿದ್ದು, ವೈದ್ಯರ ಸೂಚನೆಯಂತೆ ಪೊಲೀಸರು ಆತನನ್ನು ಪ್ರಾಥಮಿಕ ವಿಚಾರಣೆ ನಡೆಸಿದ್ದಾರೆ. ಒಂದಷ್ಟು ಪ್ರಶ್ನೆಗಳನ್ನು ಕೇಳಿ, ಉತ್ತರಗಳನ್ನು ಪಡೆದುಕೊಂಡಿದ್ದಾರೆ. ಪೊಲೀಸರ ಪ್ರಶ್ನೆಗಳಿಗೆ ಶಾರೀಕ್ ಸಕಾರಾತ್ಮಕವಾಗಿಯೇ ಉತ್ತರ ನೀಡಿದ್ದಾನೆ.
ಈ ಬಗ್ಗೆ ಪೊಲೀಸ್ ಕಮಿಷನರ್ ಶಶಿಕುಮಾರ್ ಮಾಹಿತಿ ನೀಡಿದ್ದು, ಸುಟ್ಟ ಗಾಯಗಳಿಗೆ ಚಿಕಿತ್ಸೆ ಮುಂದುವರಿದಿದೆ. ಆದರೆ ಒಂದಷ್ಟು ಚೇತರಿಕೆ ಕಂಡಿರುವುದರಿಂದ ಆರೋಪಿಯನ್ನು ವಿಚಾರಣೆ ನಡೆಸಲು ವೈದ್ಯರು ಅನುಮತಿ ನೀಡಿದ್ದಾರೆ. ಹಾಗಾಗಿ ಕೆಲವೊಂದಷ್ಟು ಮಾಹಿತಿಗಳನ್ನು ಸಂಗ್ರಹ ಮಾಡಿದ್ದಾರೆ. ಸದ್ಯಕ್ಕೆ ಡಿಜಿಪಿ ಸೂಚನೆಯಂತೆ, ದೇಶದ್ರೋಹ ಕಾಯ್ದೆಯಡಿ ದಾಖಲಾಗಿರುವುದರಿಂದ ಪ್ರಕರಣವನ್ನು ಎನ್ಐಎಗೆ ಹಸ್ತಾಂತರ ಮಾಡಲಾಗಿದೆ. ಮುಂದಿನ ತನಿಖೆಯನ್ನು ಎನ್ಐಎ ಏಜನ್ಸಿಯವರೇ ಮಾಡಲಿದ್ದಾರೆ. ಅವರಿಗೆ ಬೇಕಾದ ಪೊಲೀಸ್ ಸಿಬಂದಿ ನೆರವನ್ನು ನಾವು ನೀಡುತ್ತೇವೆ ಎಂದು ಹೇಳಿದ್ದಾರೆ.

ಈ ನಡುವೆ, ಎನ್ಐಎ ಅಧಿಕಾರಿಗಳು ಮಂಗಳೂರು ಪೊಲೀಸ್ ಕಮಿಷನರ್ ಕಚೇರಿಗೆ ಆಗಮಿಸಿ, ಪ್ರಕರಣದ ಬೆಳವಣಿಗೆ ಕುರಿತು ತನಿಖಾ ಮಾಹಿತಿಗಳನ್ನು ಪಡೆದುಕೊಂಡಿದ್ದಾರೆ. ಇದೇ ವೇಳೆ, ಬಾಂಬ್ ಸ್ಫೋಟ ಪ್ರಕರಣದಲ್ಲಿ ಗಾಯಗೊಂಡಿರುವ ಆಟೋ ಚಾಲಕ ಪುರುಷೋತ್ತಮ ಪೂಜಾರಿ ಅವರು ಕೂಡ ಸುಟ್ಟ ಗಾಯಗಳಿಂದ ಚೇತರಿಕೆ ಕಂಡಿದ್ದು, ಐಸಿಯು ಘಟಕದಿಂದ ಬೇರೆ ಸಾಮಾನ್ಯ ವಾರ್ಡಿಗೆ ಶಿಫ್ಟ್ ಮಾಡಲಾಗಿದೆ. ಆದರೆ ಸುಟ್ಟ ಗಾಯ ಆಗಿರುವುದರಿಂದ ಪ್ರತ್ಯೇಕವಾಗಿರಿಸಿ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದು ಕಮಿಷನರ್ ಮಾಹಿತಿ ನೀಡಿದ್ದಾರೆ.


ಶಾರೀಕ್ ಗೆ ಇನ್ನೆಷ್ಟು ದಿನ ಚಿಕಿತ್ಸೆ ಬೇಕಾಗಬಹುದು ಎಂಬ ಪ್ರಶ್ನೆಗೆ, ಅದು ಹೇಳಕ್ಕೆ ಬರೋದಿಲ್ಲ, ವೈದ್ಯರು ಹೇಳಬೇಕಷ್ಟೆ. 40 ಶೇ. ದೇಹದ ಭಾಗಗಳು ಸುಟ್ಟು ಹೋಗಿರುವುದರಿಂದ ಒಳಭಾಗದಲ್ಲಿ ಕಂಡಿಶನ್ ಹೇಳಕ್ಕಾಗಲ್ಲ. ಸದ್ಯಕ್ಕೆ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಹೇಳಿದರು. ನ.19ರಂದು ಮಂಗಳೂರಿನ ನಾಗುರಿಯಲ್ಲಿ ಆಟೋದಲ್ಲಿ ಚಲಿಸುತ್ತಿದ್ದಾಗಲೇ ಕುಕ್ಕರ್ ಬಾಂಬ್ ಸ್ಫೋಟ ನಡೆದಿತ್ತು. ಆಟೋ ಚಾಲಕ ಮತ್ತು ಅದರಲ್ಲಿದ್ದ ಪ್ರಯಾಣಿಕ ಗಾಯಗೊಂಡಿದ್ದ. ಬಳಿಕ ನಡೆದ ತನಿಖೆಯಲ್ಲಿ ಪ್ರಯಾಣಿಕನಾಗಿ ಇದ್ದಿದ್ದು ಮೊಹಮ್ಮದ್ ಶಾರೀಕ್ ಅನ್ನುವುದು ತಿಳಿದುಬಂದಿತ್ತು.
Mangalore bomb blast accused sharik health improved investigation begun.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am