ಬ್ರೇಕಿಂಗ್ ನ್ಯೂಸ್
05-12-22 10:53 am Udupi Correspondent ಕರಾವಳಿ
ಕುಂದಾಪುರ, ಡಿ.5: ಹೆಜಮಾಡಿಯಲ್ಲಿ ಸುರತ್ಕಲ್ ಟೋಲ್ ದರವನ್ನೂ ಸೇರಿಸಿ ವಸೂಲಿ ಮಾಡುವ ಕ್ರಮಕ್ಕೆ ವ್ಯಾಪಕ ಜನಾಕ್ರೋಶ ವ್ಯಕ್ತವಾಗಿದ್ದರಿಂದ ಟೋಲ್ ದರ ಮನ್ನಾ ಮಾಡುವ ಕುರಿತು ಮುಖ್ಯಮಂತ್ರಿಗಳು ತೀರ್ಮಾನಿಸಲಿದ್ದಾರೆ ಎಂದು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಹೇಳಿದ್ದಾರೆ.
ಜಿಲ್ಲಾಧಿಕಾರಿಗಳು, ಶಾಸಕರು, ಸಚಿವರು ಇದ್ದು ಉಡುಪಿಯಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಚರ್ಚೆ ನಡೆದಿದೆ. ಎರಡೂ ಟೋಲ್ ದರ ಒಟ್ಟಾಗಿ ಪಡೆಯುವ ಹೆದ್ದಾರಿ ಇಲಾಖೆಯ ನಿರ್ಧಾರವನ್ನು ವಿರೋಧಿಸಲಾಗಿದೆ. ವಿವಿಧ ಟೋಲ್ಗಳಿಗೆ ಹಂಚಿ ಹಾಕುವುದಕ್ಕೂ ವಿರೋಧ ಇದೆ. ರಸ್ತೆ ನಿರ್ಮಾಣ ಕುರಿತು ಒಟ್ಟು 400 ಕೋ.ರೂ. ಪಾವತಿಸಬೇಕಿದ್ದು ಈಗಾಗಲೇ 250 ಕೋ.ರೂ. ಟೋಲ್ ಮೂಲಕ ಸಂಗ್ರಹಿಸಿ ಪಾವತಿಸಲಾಗಿದೆ. ಇನ್ನುಳಿದ 150 ಕೋ.ರೂ.ಗಳನ್ನು ಮನ್ನಾ ಮಾಡಬೇಕೆಂದು ಕೇಂದ್ರಕ್ಕೆ ಮನವಿ ಮಾಡಲು ನಿರ್ಧರಿಸಲಾಗಿದೆ. ಆಡಳಿತ ಶಿಷ್ಟಾಚಾರದಂತೆ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಯೇ ಈ ಕುರಿತು ಕೇಂದ್ರಕ್ಕೆ ಪತ್ರ ಬರೆಯಬೇಕಾದ ಕಾರಣ ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ನಡೆದು ಅಲ್ಲೇ ಸ್ಪಷ್ಟ ತೀರ್ಮಾನ ಆಗಲಿದೆ. ಸಾಸ್ತಾನ ಹಾಗೂ ಹೆಜಮಾಡಿ ಟೋಲ್ ಗೇಟ್ ಅಂತರವೂ ನಿಗದಿಗಿಂತ ಕಡಿಮೆ ಇದೆ ಎನ್ನುವುದನ್ನು ಚರ್ಚೆ ವೇಳೆ ಗಮನಕ್ಕೆ ತರಲಾಗಿದೆ ಎಂದರು.

ಪಕ್ಷ ಹೇಳಿದರೆ ಸ್ಪರ್ಧಿಸುತ್ತೇನೆ
ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವ ಇರಾದೆ ಇದೆಯೇ ಎಂದಾಗ, ಜನರಿಂದ ಒತ್ತಡ ಬರುತ್ತಿದೆ. ಈಗ ಸಾಂವಿಧಾನಿಕ ಹುದ್ದೆಯಲ್ಲಿ ಇರುವುದರಿಂದ ಯಾವುದೇ ತೀರ್ಮಾನ ಮಾಡಿಲ್ಲ. ಪಕ್ಷ ಸೂಚಿಸಿದರೆ ಈ ಹುದ್ದೆಗೆ ರಾಜೀನಾಮೆ ನೀಡಿ ಪಕ್ಷ ಹೇಳಿದ ಕ್ಷೇತ್ರದಲ್ಲಿ ಸ್ಪರ್ಧಿಸಲು ಸಿದ್ಧನಿದ್ದೇನೆ. ಯಾವ ಕ್ಷೇತ್ರ ಮೊದಲಾದವುಗಳ ಕುರಿತು ಯಾವುದೇ ಚರ್ಚೆ ನಡೆದಿಲ್ಲ, ಪಕ್ಷದಲ್ಲಿ ಈ ಕುರಿತಾದ ಬೆಳವಣಿಗೆ ನನ್ನ ಗಮನಕ್ಕೆ ಬಂದಿಲ್ಲ ಎಂದರು.
ಕೆಲಸ ಮಾಡುವ ಜನಪ್ರತಿನಿಧಿ ಬೇಕು ಎಂದು ಜನ ಬಯಸುತ್ತಿದ್ದಾರೆ. ಆದ್ದರಿಂದ ಯಾವುದಾದರೂ ಕ್ಷೇತ್ರದ ಶಾಸಕರ ಕೆಲಸ ಕಡಿಮೆ ಎಂದು ಜನರಿಗೆ ಹಾಗೂ ಪಕ್ಷಕ್ಕೆ ಅನಿಸಿದರೆ ಅಲ್ಲಿ ಸ್ಪರ್ಧಿಸಲು ಸೂಚಿಸಿದರೆ ನಾನು ನಿರಾಕರಿಸುವುದಿಲ್ಲ ಎಂದರು.
Backward Classes Commission chairman K Jayaprakash Hegde said the merger of Hejamady and Surathkal toll gates has met with mixed response from the citizens.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm