ಬ್ರೇಕಿಂಗ್ ನ್ಯೂಸ್
05-12-22 02:44 pm Mangalore Correspondent ಕರಾವಳಿ
ಮಂಗಳೂರು, ಡಿ.5 : ನಗರ ಹೊರವಲಯದ ಗುರುಪುರದಲ್ಲಿ ಎರಡು ಲಾರಿ ಮುಖಾಮುಖಿ ಡಿಕ್ಕಿಯಾಗಿ ಚಾಲಕರಿಬ್ಬರು ಸಾವನಪ್ಪಿದ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ. ಕೆಂಪು ಮಣ್ಣು ಹೇರಿಕೊಂಡು ಆಂಧ್ರಕ್ಕೆ ಹೊರಟಿದ್ದ ಕಂಟೇನರ್ ಲಾರಿ ಚಾಲಕನ ನಿಯಂತ್ರಣಕ್ಕೆ ಸಿಗದೆ ಗುರುಪುರ ಇಳಿಜಾರಿನಲ್ಲಿ ಎದುರಿನಿಂದ ಬರುತ್ತಿದ್ದ ಈಚರ್ ಲಾರಿಗೆ ಡಿಕ್ಕಿಯಾಗಿದೆ.
ಕೈಕಂಬ ಕಡೆಯಿಂದ ಬರುತ್ತಿದ್ದ ಹತ್ತು ಚಕ್ರದ ಲಾರಿಯು ವಾಮಂಜೂರಿನಿಂದ ಮೂಡುಬಿದ್ರೆ ಕಡೆಗೆ ತೆರಳುತ್ತಿದ್ದ ಈಚರ್ ಲಾರಿಗೆ ನೇರವಾಗಿ ಡಿಕ್ಕಿಯಾಗಿದ್ದರಿಂದ ಭೀಕರ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಈಚರ್ ಲಾರಿ ಚಾಲಕ ಮತ್ತು ಮಾಲಕರಾಗಿದ್ದ ಕಾವೂರು ಹರಿಪದವು ನಿವಾಸಿ ಲೋಕನಾಥ್ ಶೆಟ್ಟಿಗಾರ್(52) ಸ್ಥಳದಲ್ಲೇ ಸಾವು ಕಂಡಿದ್ದಾರೆ. ಕಂಟೇನರ್ ಲಾರಿಯಲ್ಲಿ ಚಾಲಕನಾಗಿದ್ದ ಆಂಧ್ರಪ್ರದೇಶ ಮೂಲದ ಬಲರಾಮ್ (55) ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲಿ ಮೃತಪಟ್ಟಿದ್ದಾರೆ.



ಗಂಜಿಮಠ ಬಳಿಯಿಂದ ಕೆಂಪು ಮಣ್ಣು ಹೇರಿಕೊಂಡು ಆಂಧ್ರ ಪ್ರದೇಶಕ್ಕೆ ಹೊರಟಿದ್ದ ಕಂಟೇನರ್ ಲಾರಿ ಗುರುಪುರದಿಂದ ಇಳಿಜಾರು ಹೆದ್ದಾರಿಯಲ್ಲಿ ಬರುತ್ತಿದ್ದಾಗ ಓವರ್ ಲೋಡ್ ಕಾರಣದಿಂದ ಬ್ರೇಕ್ ಸಿಗದೆ ನುಗ್ಗಿ ಬಂದಿದೆ. ಬೆಳಗ್ಗೆ ಎಂದಿನಂತೆ ಜಲ್ಲಿ ಕ್ರಶರ್ ನತ್ತ ಸಾಗುತ್ತಿದ್ದ ಈಚರ್ ಲಾರಿಗೆ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಈಚರ್ ಲಾರಿ ಅಪ್ಪಚ್ಚಿಯಾಗಿ ಹೊಂಡಕ್ಕೆ ಪಲ್ಟಿಯಾಗಿ ಬಿದ್ದಿದೆ. ಅದರ ಚಾಲಕ ಲೋಕನಾಥ್ ದಾರುಣ ಸಾವು ಕಂಡಿದ್ದಾರೆ.



ಬೆಳಗ್ಗೆ 8 ಗಂಟೆ ಸುಮಾರಿಗೆ ಘಟನೆ ನಡೆದಿದ್ದು ಅರ್ಧ ಗಂಟೆ ಕಾಲ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಎರಡೂ ಲಾರಿಯಲ್ಲಿದ್ದ ಕ್ಲೀನರ್ ಸಣ್ಣಪುಟ್ಟ ಗಾಯಗಳಿಂದ ಅಪಾಯದಿಂದ ಪಾರಾಗಿದ್ದಾರೆ. ಬಜ್ಪೆ ಪೊಲೀಸರು ಬಳಿಕ ಕ್ರೇನ್ ತರಿಸಿ ಲಾರಿಯನ್ನು ತೆರವು ಮಾಡಿ ರಸ್ತೆ ಸಂಚಾರ ಸುಗಮಗೊಳಿಸಿದ್ದಾರೆ. ಗಾಯಗೊಂಡ ಇಬ್ಬರನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
Sever accident in gurupur near Mangalore truck drivers spot death.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm