ಬ್ರೇಕಿಂಗ್ ನ್ಯೂಸ್
05-12-22 02:44 pm Mangalore Correspondent ಕರಾವಳಿ
ಮಂಗಳೂರು, ಡಿ.5 : ನಗರ ಹೊರವಲಯದ ಗುರುಪುರದಲ್ಲಿ ಎರಡು ಲಾರಿ ಮುಖಾಮುಖಿ ಡಿಕ್ಕಿಯಾಗಿ ಚಾಲಕರಿಬ್ಬರು ಸಾವನಪ್ಪಿದ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ. ಕೆಂಪು ಮಣ್ಣು ಹೇರಿಕೊಂಡು ಆಂಧ್ರಕ್ಕೆ ಹೊರಟಿದ್ದ ಕಂಟೇನರ್ ಲಾರಿ ಚಾಲಕನ ನಿಯಂತ್ರಣಕ್ಕೆ ಸಿಗದೆ ಗುರುಪುರ ಇಳಿಜಾರಿನಲ್ಲಿ ಎದುರಿನಿಂದ ಬರುತ್ತಿದ್ದ ಈಚರ್ ಲಾರಿಗೆ ಡಿಕ್ಕಿಯಾಗಿದೆ.
ಕೈಕಂಬ ಕಡೆಯಿಂದ ಬರುತ್ತಿದ್ದ ಹತ್ತು ಚಕ್ರದ ಲಾರಿಯು ವಾಮಂಜೂರಿನಿಂದ ಮೂಡುಬಿದ್ರೆ ಕಡೆಗೆ ತೆರಳುತ್ತಿದ್ದ ಈಚರ್ ಲಾರಿಗೆ ನೇರವಾಗಿ ಡಿಕ್ಕಿಯಾಗಿದ್ದರಿಂದ ಭೀಕರ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಈಚರ್ ಲಾರಿ ಚಾಲಕ ಮತ್ತು ಮಾಲಕರಾಗಿದ್ದ ಕಾವೂರು ಹರಿಪದವು ನಿವಾಸಿ ಲೋಕನಾಥ್ ಶೆಟ್ಟಿಗಾರ್(52) ಸ್ಥಳದಲ್ಲೇ ಸಾವು ಕಂಡಿದ್ದಾರೆ. ಕಂಟೇನರ್ ಲಾರಿಯಲ್ಲಿ ಚಾಲಕನಾಗಿದ್ದ ಆಂಧ್ರಪ್ರದೇಶ ಮೂಲದ ಬಲರಾಮ್ (55) ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲಿ ಮೃತಪಟ್ಟಿದ್ದಾರೆ.



ಗಂಜಿಮಠ ಬಳಿಯಿಂದ ಕೆಂಪು ಮಣ್ಣು ಹೇರಿಕೊಂಡು ಆಂಧ್ರ ಪ್ರದೇಶಕ್ಕೆ ಹೊರಟಿದ್ದ ಕಂಟೇನರ್ ಲಾರಿ ಗುರುಪುರದಿಂದ ಇಳಿಜಾರು ಹೆದ್ದಾರಿಯಲ್ಲಿ ಬರುತ್ತಿದ್ದಾಗ ಓವರ್ ಲೋಡ್ ಕಾರಣದಿಂದ ಬ್ರೇಕ್ ಸಿಗದೆ ನುಗ್ಗಿ ಬಂದಿದೆ. ಬೆಳಗ್ಗೆ ಎಂದಿನಂತೆ ಜಲ್ಲಿ ಕ್ರಶರ್ ನತ್ತ ಸಾಗುತ್ತಿದ್ದ ಈಚರ್ ಲಾರಿಗೆ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಈಚರ್ ಲಾರಿ ಅಪ್ಪಚ್ಚಿಯಾಗಿ ಹೊಂಡಕ್ಕೆ ಪಲ್ಟಿಯಾಗಿ ಬಿದ್ದಿದೆ. ಅದರ ಚಾಲಕ ಲೋಕನಾಥ್ ದಾರುಣ ಸಾವು ಕಂಡಿದ್ದಾರೆ.



ಬೆಳಗ್ಗೆ 8 ಗಂಟೆ ಸುಮಾರಿಗೆ ಘಟನೆ ನಡೆದಿದ್ದು ಅರ್ಧ ಗಂಟೆ ಕಾಲ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಎರಡೂ ಲಾರಿಯಲ್ಲಿದ್ದ ಕ್ಲೀನರ್ ಸಣ್ಣಪುಟ್ಟ ಗಾಯಗಳಿಂದ ಅಪಾಯದಿಂದ ಪಾರಾಗಿದ್ದಾರೆ. ಬಜ್ಪೆ ಪೊಲೀಸರು ಬಳಿಕ ಕ್ರೇನ್ ತರಿಸಿ ಲಾರಿಯನ್ನು ತೆರವು ಮಾಡಿ ರಸ್ತೆ ಸಂಚಾರ ಸುಗಮಗೊಳಿಸಿದ್ದಾರೆ. ಗಾಯಗೊಂಡ ಇಬ್ಬರನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
Sever accident in gurupur near Mangalore truck drivers spot death.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am