ಬ್ರೇಕಿಂಗ್ ನ್ಯೂಸ್
09-12-22 10:58 pm Mangalore Correspondent ಕರಾವಳಿ
ಮಂಗಳೂರು, ಡಿ.9: ಶಿರಾಡಿ ಘಾಟ್ ನಲ್ಲಿ ಸುರಂಗ ಮಾರ್ಗ ನಿರ್ಮಿಸುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಸ್ತಾವಕ್ಕೆ ಕೇಂದ್ರ ಸರಕಾರ ನಿರಾಸಕ್ತಿ ತೋರಿದೆ. ಈ ಬಗ್ಗೆ ಸಂಸದ ನಳಿನ್ ಕುಮಾರ್ ಕೇಳಿದ ಚುಕ್ಕಿ ಪ್ರಶ್ನೆಗೆ ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಉತ್ತರಿಸಿದ್ದು, ಸುರಂಗ ಮಾರ್ಗ ಅತ್ಯಂತ ಹೆಚ್ಚು ಬಜೆಟ್ ಬಯಸುತ್ತದೆ ಮತ್ತು ಕಾರ್ಯ ಸಾಧುವಲ್ಲ ಎಂದು ಹೇಳಿದ್ದಾರೆ. ಇದರೊಂದಿಗೆ ದಶಕಗಳ ಹಿಂದಿನ ಕನಸಾಗಿದ್ದ ಸುರಂಗ ಮಾರ್ಗ ಪ್ರಸ್ತಾವ ಬಹುತೇಕ ಕೈಬಿಟ್ಟಂತಾಗಿದೆ.
ಕಳೆದ ಫೆಬ್ರವರಿಯಲ್ಲಿ ಮಂಗಳೂರಿಗೆ ಬಂದಿದ್ದ ಸಚಿವ ನಿತಿನ್ ಗಡ್ಕರಿ, ಶಿರಾಡಿಯಲ್ಲಿ ಆರು ಪಥದ ರಸ್ತೆ ಮತ್ತು ಸುರಂಗ ಮಾರ್ಗ ನಿರ್ಮಿಸಲಾಗುವುದು. 14 ಸಾವಿರ ಕೋಟಿ ಮೊತ್ತದ ಈ ಯೋಜನೆಗೆ ಶೀಘ್ರದಲ್ಲೇ ಗ್ರೀನ್ ಸಿಗ್ನಲ್ ನೀಡಲಾಗುವುದು ಎಂದು ಹೇಳಿದ್ದರು. ಈ ಬಗ್ಗೆ ಸಂಸತ್ತಿನಲ್ಲಿ ಸ್ಪಷ್ಟನೆ ನೀಡಿರುವ ಗಡ್ಕರಿ, ಈಗಾಗಲೇ ನಾಲ್ಕು ಪಥದ ರಸ್ತೆ ನಿರ್ಮಿಸುವ ಬಗ್ಗೆ ಹೆದ್ದಾರಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಆ ಬಗ್ಗೆ ಸದ್ಯದಲ್ಲೇ ಡಿಪಿಆರ್ ರಚಿಸಲಿದ್ದಾರೆ ಎಂದಿದ್ದಾರೆ.
ಕೆನರಾ ಚೇಂಬರ್ ಆಫ್ ಕಾಮರ್ಸ್ ಶಿರಾಡಿಯಲ್ಲಿ ಸುರಂಗ ಮಾರ್ಗ ನಿರ್ಮಿಸಿದಲ್ಲಿ ಸಾಗಾಟ ವೆಚ್ಚ ತಗ್ಗಲಿದೆ, ಮಂಗಳೂರು- ಬೆಂಗಳೂರು ನಡುವೆ ಸಂಚಾರಕ್ಕೆ ಸಹಕಾರಿ ಆಗಲಿದೆ ಎಂದು ಮನವಿ ಮಾಡಿದ್ದರು. ಈ ಬಗ್ಗೆ ಆಸ್ಟ್ರಿಯಾ ಮೂಲದ ಕಂಪನಿಯೊಂದು ಸಮೀಕ್ಷೆಯನ್ನೂ ನಡೆಸಿತ್ತು. 23.5 ಕಿಮೀ ಉದ್ದದ ರಸ್ತೆ ನಿರ್ಮಿಸಿ, ಅದರಲ್ಲಿ ಆರು ಕಡೆ ಸುರಂಗ, ಏಳು ಸೇತುವೆ ನಿರ್ಮಿಸುವ ಪ್ರಸ್ತಾಪ ಮಾಡಿತ್ತು.
ಈಗ ಮಂಗಳೂರು- ಬೆಂಗಳೂರು ಸಂಚಾರಕ್ಕೆ ಏಳರಿಂದ ಎಂಟು ಗಂಟೆ ಬೇಕಾಗಿದ್ದರೆ, ಸುರಂಗ ನಿರ್ಮಾಣದ ಬಳಿಕ ಒಂದು ಗಂಟೆ ಕಡಿಮೆಯಾಗುವ ಬಗ್ಗೆ ಚಿಂತನೆ ಇತ್ತು. ಅಲ್ಲದೆ, ಸುರಂಗ ಮಾರ್ಗ ಮಾಡಿದಲ್ಲಿ ಹೆಚಚು ಅರಣ್ಯ ನಾಶ ಆಗುವುದಿಲ್ಲ. ದ್ವಿಪಥದ ಬದಲು ನಾಲ್ಕು ಪಥದ ರಸ್ತೆ ಮಾಡಿದಲ್ಲಿ ಅಪಾರ ಅರಣ್ಯ ನಾಶ ಆಗಲಿದೆ ಎಂದು ಹೇಳಲಾಗಿತ್ತು. ಆದರೆ ಅಪಾರ ನಿರ್ಮಾಣ ವೆಚ್ಚ ಮತ್ತು ಮಳೆಗಾಲದಲ್ಲಿ ಕುಸಿಯುವ ಬೆಟ್ಟಗಳ ನಡುವೆ ಸುರಂಗ ಮಾರ್ಗ ಉಚಿತವಲ್ಲ ಎಂಬ ನಿರ್ಧಾರಕ್ಕೆ ಹೆದ್ದಾರಿ ಸಚಿವಾಲಯ ಬಂದಿದೆ.
The much-hyped Green Tunnel Bypass for Shiradi Ghat on Bengaluru-Mangaluru National Highway 75 was found to be not viable and instead the National Highways Authority of India (NHAI) was asked to prepare a detailed project report (DPR) for a four-lane road on the 26-km Ghat stretch. This was disclosed by Union Minister for Road Transport and Highways Nitin Gadkari in the Lok Sabha while answering a question on the present status of Shiradi Ghat posed by Nalin Kumar Kateel, MP of Dakshina Kannada on Thursday, December 8 in New Delhi.
15-05-25 10:16 pm
HK News Desk
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm