ಬ್ರೇಕಿಂಗ್ ನ್ಯೂಸ್
10-12-22 01:01 pm Mangaluru Correspondent ಕರಾವಳಿ
ಉಳ್ಳಾಲ, ಡಿ.10: ನಟಿ ರಕ್ಷಿತಾ ಪ್ರೇಮ್ ಸಲಹೆ ಮೇರೆಗೆ ಕರಾವಳಿಯ ಕಾರಣಿಕ ಶಕ್ತಿ ಕೊರಗಜ್ಜ ದೈವದ ಆದಿಸ್ಥಳ ಕುತ್ತಾರಿನ ಸ್ಥಾನಕ್ಕೆ ನಟ ಶಿವರಾಜ್ ಕುಮಾರ್ ಕುಟುಂಬ ಸಮೇತ ಭೇಟಿ ನೀಡಿದ್ದು ದೈವದ ಆಶೀರ್ವಾದ ಕೋರಿದ್ದಾರೆ.
ತಾನು ನಟಿಸಿರುವ ವೇದ ಸಿನಿಮಾದ ಪ್ರಚಾರಕ್ಕಾಗಿ ಮಂಗಳೂರಿಗೆ ಆಗಮಿಸಿರುವ ಶಿವರಾಜ್ ಕುಮಾರ್ ಇಂದು ಮೊದಲ ಬಾರಿಗೆ ಪತ್ನಿ ಗೀತಾ ಹಾಗೂ ಕುಟುಂಬಸ್ಥರೊಂದಿಗೆ ಕೊರಗಜ್ಜ ಕ್ಷೇತ್ರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಇಂದು ಸಂಜೆ ಪಣಂಬೂರು ಬೀಚ್ ನಲ್ಲಿ ನಡೆಯಲಿರುವ ವೇದ ಸಿನಿಮಾದ ಫ್ರೀ ರಿಲೀಸ್ ಇವೆಂಟ್ ಗೆ ಶಿವರಾಜ್ ಆಗಮಿಸಿದ್ದು ನಟಿ ರಕ್ಷಿತಾ ಪ್ರೇಮ್ ಸಲಹೆಯ ಮೇರೆಗೆ ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿರುವುದಾಗಿ ಅವರು ಹೇಳಿದರು.



ಇವತ್ತು ವೇದಾ ಈವೆಂಟ್ ಇರೋ ಕಾರಣ ಮಂಗಳೂರಿಗೆ ಬಂದಿದ್ದೇನೆ. ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ಕೊರಗಜ್ಜ ಕ್ಷೇತ್ರಕ್ಕೆ ಬಂದಿದ್ದೇನೆ. ಕೊರಗಜ್ಜನ ಕ್ಷೇತ್ರದ ಕಾರಣಿಕದ ಬಗ್ಗೆ ನನಗೆ ರಕ್ಷಿತಾ ಅನೇಕ ಬಾರಿ ಹೇಳಿದ್ದರು. ಮನುಷ್ಯನ ಸಮಸ್ಯೆಯನ್ನ ಬಹಳ ಸರಳವಾಗಿ ಹೇಳುವ ರೀತಿ ಈ ಕ್ಷೇತ್ರದ್ದಾಗಿದೆ. ಯಾವುದೇ ಆಡಂಬರ ಇಲ್ಲದೇ ಜನರು ಪ್ರಾರ್ಥನೆ ಮಾಡಲು ಇಲ್ಲಿ ಅವಕಾಶ ಇದೆ. ಕೊರಗಜ್ಜನಿಗೆ ವೀಳ್ಯದೆಲೆ ಮತ್ತು ಶರಾಬು ಕೊಟ್ಟು ಪ್ರಾರ್ಥನೆ ಮಾಡುವ ಸರಳ ವಿಧಾನ ಖುಷಿ ಕೊಟ್ಟಿತು. ಕೊರಗಜ್ಜನಿಗೆ ಪ್ರಾರ್ಥನೆ ಸಲ್ಲಿಸಿದ್ದೇನೆ, ಆಗೋದು ಬಿಡೋದು ದೈವದ ಇಚ್ಛೆ, ದೈವದೆದುರು ಶ್ರದ್ಧೆಯಿಂದ ಬೇಡುವುದು ನಮ್ಮ ಕಾರ್ಯ ಎಂದರು.
ರಕ್ಷಿತಾ ಪ್ರೇಮ್ ಅವರು ಈ ಹಿಂದೆ ಕುತ್ತಾರಿಗೆ ಆಗಮಿಸಿ ಕೊರಗಜ್ಜನಿಗೆ ಹರಕೆ ಸಲ್ಲಿಸಿದ್ದರು.
Mangalore actor Shivarajkumar visits kuttar Koragajja Temple offer prayer. As per advice of actress Rakshitha prem Shivarajkumar agreed to visit temple.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm