ಬ್ರೇಕಿಂಗ್ ನ್ಯೂಸ್
10-12-22 01:01 pm Mangaluru Correspondent ಕರಾವಳಿ
ಉಳ್ಳಾಲ, ಡಿ.10: ನಟಿ ರಕ್ಷಿತಾ ಪ್ರೇಮ್ ಸಲಹೆ ಮೇರೆಗೆ ಕರಾವಳಿಯ ಕಾರಣಿಕ ಶಕ್ತಿ ಕೊರಗಜ್ಜ ದೈವದ ಆದಿಸ್ಥಳ ಕುತ್ತಾರಿನ ಸ್ಥಾನಕ್ಕೆ ನಟ ಶಿವರಾಜ್ ಕುಮಾರ್ ಕುಟುಂಬ ಸಮೇತ ಭೇಟಿ ನೀಡಿದ್ದು ದೈವದ ಆಶೀರ್ವಾದ ಕೋರಿದ್ದಾರೆ.
ತಾನು ನಟಿಸಿರುವ ವೇದ ಸಿನಿಮಾದ ಪ್ರಚಾರಕ್ಕಾಗಿ ಮಂಗಳೂರಿಗೆ ಆಗಮಿಸಿರುವ ಶಿವರಾಜ್ ಕುಮಾರ್ ಇಂದು ಮೊದಲ ಬಾರಿಗೆ ಪತ್ನಿ ಗೀತಾ ಹಾಗೂ ಕುಟುಂಬಸ್ಥರೊಂದಿಗೆ ಕೊರಗಜ್ಜ ಕ್ಷೇತ್ರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಇಂದು ಸಂಜೆ ಪಣಂಬೂರು ಬೀಚ್ ನಲ್ಲಿ ನಡೆಯಲಿರುವ ವೇದ ಸಿನಿಮಾದ ಫ್ರೀ ರಿಲೀಸ್ ಇವೆಂಟ್ ಗೆ ಶಿವರಾಜ್ ಆಗಮಿಸಿದ್ದು ನಟಿ ರಕ್ಷಿತಾ ಪ್ರೇಮ್ ಸಲಹೆಯ ಮೇರೆಗೆ ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿರುವುದಾಗಿ ಅವರು ಹೇಳಿದರು.



ಇವತ್ತು ವೇದಾ ಈವೆಂಟ್ ಇರೋ ಕಾರಣ ಮಂಗಳೂರಿಗೆ ಬಂದಿದ್ದೇನೆ. ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ಕೊರಗಜ್ಜ ಕ್ಷೇತ್ರಕ್ಕೆ ಬಂದಿದ್ದೇನೆ. ಕೊರಗಜ್ಜನ ಕ್ಷೇತ್ರದ ಕಾರಣಿಕದ ಬಗ್ಗೆ ನನಗೆ ರಕ್ಷಿತಾ ಅನೇಕ ಬಾರಿ ಹೇಳಿದ್ದರು. ಮನುಷ್ಯನ ಸಮಸ್ಯೆಯನ್ನ ಬಹಳ ಸರಳವಾಗಿ ಹೇಳುವ ರೀತಿ ಈ ಕ್ಷೇತ್ರದ್ದಾಗಿದೆ. ಯಾವುದೇ ಆಡಂಬರ ಇಲ್ಲದೇ ಜನರು ಪ್ರಾರ್ಥನೆ ಮಾಡಲು ಇಲ್ಲಿ ಅವಕಾಶ ಇದೆ. ಕೊರಗಜ್ಜನಿಗೆ ವೀಳ್ಯದೆಲೆ ಮತ್ತು ಶರಾಬು ಕೊಟ್ಟು ಪ್ರಾರ್ಥನೆ ಮಾಡುವ ಸರಳ ವಿಧಾನ ಖುಷಿ ಕೊಟ್ಟಿತು. ಕೊರಗಜ್ಜನಿಗೆ ಪ್ರಾರ್ಥನೆ ಸಲ್ಲಿಸಿದ್ದೇನೆ, ಆಗೋದು ಬಿಡೋದು ದೈವದ ಇಚ್ಛೆ, ದೈವದೆದುರು ಶ್ರದ್ಧೆಯಿಂದ ಬೇಡುವುದು ನಮ್ಮ ಕಾರ್ಯ ಎಂದರು.
ರಕ್ಷಿತಾ ಪ್ರೇಮ್ ಅವರು ಈ ಹಿಂದೆ ಕುತ್ತಾರಿಗೆ ಆಗಮಿಸಿ ಕೊರಗಜ್ಜನಿಗೆ ಹರಕೆ ಸಲ್ಲಿಸಿದ್ದರು.
Mangalore actor Shivarajkumar visits kuttar Koragajja Temple offer prayer. As per advice of actress Rakshitha prem Shivarajkumar agreed to visit temple.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
03-04-26 11:00 pm
HK News Staffer
ಜಿಮ್ ಸೆಂಟರ್ ನೆಪದಲ್ಲಿ ಲವ್ ಜಿಹಾದ್! ಜಿಮ್ ಟ್ರೈ...
03-04-26 10:53 pm
ಮೆಲ್ಕಾರ್ ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ;...
01-04-26 02:54 pm
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am