ಬ್ರೇಕಿಂಗ್ ನ್ಯೂಸ್
10-12-22 10:38 pm Mangalore Correspondent ಕರಾವಳಿ
ಮಂಗಳೂರು, ಡಿ.10: ಹಿಮಾಚಲ ಪ್ರದೇಶ ಮತ್ತು ದೆಹಲಿ ಪಾಲಿಕೆಯ ಚುನಾವಣೆಯಲ್ಲಿ ಸೋಲಾದ ಬಳಿಕ ಬಿಜೆಪಿಗೆ ಚುನಾವಣೆ ಭಯ ಕಾಡತೊಡಗಿದೆ. ಹಾಗಾಗಿ ಗುಜರಾತ್ ಮಂತ್ರ ಪಠಿಸುತ್ತಿದ್ದಾರೆ. ಗುಜರಾತ್ ರೀತಿಯಲ್ಲೇ ಕರ್ನಾಟಕದಲ್ಲಿಯೂ ಫಲಿತಾಂಶ ಬರಲಿದೆ ಎನ್ನುತ್ತಿದ್ದಾರೆ. ಆದರೆ ಹಿಮಾಚಲದಲ್ಲಿ ಕಾಂಗ್ರೆಸ್, ಬಿಜೆಪಿಯನ್ನು ಸೋಲಿಸಿರುವುದರಿಂದ ಅದನ್ನು ಅರಗಿಸಿಕೊಳ್ಳಲಾಗದೆ ಗುಜರಾತ್ ಮಾದರಿ ಅನ್ನುತ್ತಿದ್ದಾರೆ. ಹಿಮಾಚಲದ ಸೋಲಿನ ಇಲ್ಲಿಯೂ ಮರುಕಳಿಕೆ ಆಗಲಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಹೇಳಿದ್ದಾರೆ.
ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಬಿಜೆಪಿಯವರು ಚುನಾವಣೆಯಲ್ಲಿ ಸೋಲುವ ಭಯದಲ್ಲಿ ಇಲ್ಲದ ವಿಚಾರಗಳನ್ನು ಮುಂದಿಡುತ್ತಿದ್ದಾರೆ. ಸಿದ್ದರಾಮಯ್ಯ ಅವರನ್ನು ಸಿದ್ರಾಮುಲ್ಲಾಖಾನ್ ಎಂದು ಹೇಳಿ ಮುಸ್ಲಿಮರನ್ನು ಎತ್ತಿ ಕಟ್ಟುವ ಕೆಲಸ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಇವರಿಗೆ ಖಡಕ್ಕಾಗಿ ಪ್ರತ್ಯುತ್ತರ ನೀಡುತ್ತಿರುವುದರಿಂದ ಅವರನ್ನು ಟಾರ್ಗೆಟ್ ಮಾಡಿದ್ದಾರೆ. ಬಿಜೆಪಿಯವರಿಗೆ ಹಿಂದು- ಮುಸ್ಲಿಂ ನಡುವೆ ಕಂದಕ ಏರ್ಪಡಿಸುವುದೇ ಕೆಲಸವಾಗಿದೆ. ಮುಸ್ಲಿಮರು ಇಲ್ಲದೆ ಬಿಜೆಪಿ ಪಕ್ಷವೇ ಇರುವುದಿಲ್ಲ. ಬಿಜೆಪಿಯವರು ತಮ್ಮ ಬಿ ಟೀಮ್ ಆಗಿ ಎಸ್ಡಿಪಿಐ, ಆಪ್, ಎಐಎಂಐಎಂ ಸೃಷ್ಟಿಸಿದ್ದಾರೆ. ಅವುಗಳಿಗೆ ಫಂಡಿಂಗ್ ಮಾಡಿ, ಕಾಂಗ್ರೆಸ್ ವಿರುದ್ಧ ಛೂಬಿಡುತ್ತಿದ್ದಾರೆ ಎಂದು ಹೇಳಿದರು.
ಒವೈಸಿ ದೇಶ ವಿರೋಧಿ, ಹಿಂದು ವಿರೋಧಿ ಹೇಳಿಕೆ ನೀಡಿದರೂ ಬಿಜೆಪಿಯವರು ಏನೂ ಕ್ರಮ ಕೈಗೊಳ್ಳುವುದಿಲ್ಲ. ಯಾರಾದ್ರೂ ಪ್ರಧಾನಿ ಮೋದಿ ವಿರುದ್ಧ ಮಾತನಾಡಿದರೆ ಜೈಲಿಗೆ ಹಾಕುತ್ತಾರೆ. ಓವೈಸಿ, ಮೋದಿಗೆ ಬೈದರೂ, ಹಿಂದುಗಳಿಗೆ ನೇರಾನೇರ ಬೈದರೂ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ. ಕೇಳದಂತೇ ಇರುತ್ತಾರೆ. ಇದು ಬಿಜೆಪಿಯ ರಾಜಕೀಯ ಎಂದು ಹರೀಶ್ ಕುಮಾರ್ ಹೇಳಿದರು. ಕರಾವಳಿಯಲ್ಲಿ ಮರಳು ಮಾಫಿಯಾ ಮಿತಿ ಮೀರಿದೆ. ಈಗ ಲೋಕಾಯುಕ್ತ ಅಧಿಕಾರಿಗಳು ಮರಳು ಮಾಫಿಯಾ ವಿರುದ್ಧ ದಾಳಿ ನಡೆಸುವಂತಾಗಿದೆ. ಆದರೆ ಸಂಬಂಧಪಟ್ಟ ಅಧಿಕಾರಿಗಳು, ಇದನ್ನು ನಿಯಂತ್ರಣ ಮಾಡಬೇಕಿರುವ ಸಂಸದ, ಶಾಸಕರು ಮೌನವಾಗಿದ್ದಾರೆ ಎಂದು ಹೇಳಿದರು.
ಪ್ರತಿ ಕ್ಷೇತ್ರದಲ್ಲಿ ಎಂಟತ್ತು ಜನ ಆಕಾಂಕ್ಷಿಗಳು ಶಾಸಕ ಸ್ಥಾನಕ್ಕೆ ಅರ್ಜಿ ಸಲ್ಲಿಸಿದ್ದಾರೆ, ಯಾವ ರೀತಿ ಆಯ್ಕೆ ಮಾಡುತ್ತೀರಿ ಎಂಬ ಪ್ರಶ್ನೆಗೆ, ಅದು ನಮ್ಮ ಚುನಾವಣೆಗೆ ಆಯ್ಕೆ ಪ್ರಕ್ರಿಯೆ. ಪಕ್ಷದ ನಾಯಕರು ಯಾರು ಅಭ್ಯರ್ಥಿಯಾಗಬೇಕೆಂದು ಆಯ್ಕೆ ಮಾಡುತ್ತಾರೆ. ಹೈಕಮಾಂಡ್ ಅದನ್ನು ನಿರ್ಧರಿಸುತ್ತದೆ. ಈ ಬಾರಿ ರಾಜ್ಯದಲ್ಲಿ 50 ಶೇಕಡಾ ಹೊಸಬರಿಗೆ ಟಿಕೆಟ್ ದೊರೆಯಲಿದೆ ಎಂದು ಹೇಳಿದ್ದಾರೆ.
District Congress MLA Harish Kumar said, “Election fear has started for BJP after results in Himachal Pradesh assembly polls, MCD polls in Delhi and bye-elections. The BJP claim that Karnataka will go the Gujarat way after the recent election results just because they have won in Gujarat. Karnataka will go the Himachal Pradesh way where Congress defeated the BJP.
01-07-25 04:19 pm
Bangalore Correspondent
Sri Rama Sene, Belagavi, SP: ಶ್ರೀರಾಮಸೇನೆ ಸೇನೆ...
30-06-25 10:30 pm
CM Siddaramaiah, Dk Shivakumar, CM Post: ಹೇಯ್...
30-06-25 02:55 pm
ಅಕ್ರಮ ಗೋಸಾಗಣೆ ತಡೆದ ಶ್ರೀರಾಮ ಸೇನೆ ಕಾರ್ಯಕರ್ತರನ್ನ...
30-06-25 01:44 pm
Spike in Heart Attack, Hassan: Dr. Manjunath...
30-06-25 12:05 pm
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
30-06-25 10:59 pm
Mangalore Correspondent
Mangalore KDP Meeting: ಕೆಡಿಪಿ ಸಭೆಯಲ್ಲಿ ಮರಳು,...
30-06-25 08:19 pm
Mangalore, Rain, School News: ತರಗತಿ ನಡೆಯುತ್ತಿ...
30-06-25 03:20 pm
Mangalore Bomb Threat, Airport: ಮಂಗಳೂರು ಸೇರಿ...
30-06-25 01:07 pm
Red Stone Quarry, Dakshina Kannada, Protest:...
27-06-25 10:17 pm
01-07-25 04:36 pm
Mangalore Correspondent
Bangalore crime, TALAQ, Politicians: ರಾಜಕಾರಣಿ...
01-07-25 02:22 pm
Mysuru Murder, Police suspended: ಪತ್ನಿ ಕೊಲೆಗೈ...
01-07-25 01:55 pm
Sirsi Job Fraud: ನೌಕರಿ ಕೊಡಿಸುವುದಾಗಿ 200 ರೂ. ಪ...
01-07-25 12:07 pm
Gold Loan Scam at Paduva Society, ShaktiNagar...
30-06-25 06:12 pm