ಬ್ರೇಕಿಂಗ್ ನ್ಯೂಸ್
11-12-22 02:13 pm Mangalore Correspondent ಕರಾವಳಿ
ಮಂಗಳೂರು, ಡಿ.11 : ನಗರದ ಕಂಕನಾಡಿಯ ಸುಲ್ತಾನ್ ಗೋಲ್ಡ್ ಜುವೆಲ್ಲರಿಗೆ ನುಗ್ಗಿ ಯುವ ಜೋಡಿಗೆ ಹಲ್ಲೆಗೈದು ನೈತಿಕ ಪೊಲೀಸ್ ಗಿರಿ ನಡೆಸಿದ ಪ್ರಕರಣದಲ್ಲಿ ನಾಲ್ವರು ಬಜರಂಗದಳ ಕಾರ್ಯಕರ್ತರನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ.
ಚೇತನ್, ಪ್ರಕಾಶ್, ಗಣೇಶ್ ಮತ್ತು ಸಿಬಿಲ್ ಎಂಬವರು ಬಂಧಿತರು. ವಾರದ ಹಿಂದೆ ಕಂಕನಾಡಿಯ ಸುಲ್ತಾನ್ ಗೋಲ್ಡ್ ಜುವೆಲ್ಲರಿಗೆ ದಾಳಿ ನಡೆಸಿದ್ದ ಬಜರಂಗದಳ ಕಾರ್ಯಕರ್ತರು ಅಲ್ಲಿದ್ದ ಯುವ ಜೋಡಿಗೆ ಹಲ್ಲೆ ನಡೆಸಿದ್ದರು. ಅಲ್ಲಿ ಕೆಲಸಕ್ಕಿದ್ದ ಹಿಂದು ಯುವತಿ, ಅದೇ ಜುವೆಲ್ಲರಿಯಲ್ಲಿ ಸೇಲ್ಸ್ ಮನ್ ಆಗಿರುವ ಮುಸ್ಲಿಂ ಯುವಕನೊಂದಿಗೆ ತಿರುಗಾಡುತ್ತಿದ್ದಳು. ಈ ಬಗ್ಗೆ ಬಜರಂಗದಳ ಈ ಹಿಂದೆಯೂ ಎಚ್ಚರಿಕೆ ನೀಡಿತ್ತು ಎನ್ನಲಾಗಿದೆ. ಆದರೆ ಕಾರ್ಯಕರ್ತರ ಎಚ್ಚರಿಕೆ ಲೆಕ್ಕಿಸದೆ ಆಕೆ ತಿರುಗಾಟ ಮುಂದುವರಿಸಿದ್ದಳು.
ಯುವತಿ ತೀರ್ಥಹಳ್ಳಿ ಮೂಲದ ನಿವಾಸಿಯಾಗಿದ್ದು ಈ ಹಿಂದೆ ಬಟ್ಟೆ ಅಂಗಡಿಯಲ್ಲಿ ಕೆಲಸಕ್ಕಿದ್ದಳು. ಆನಂತರ ಜುವೆಲ್ಲರಿಗೆ ಕೆಲಸ ಬದಲಾಯಿಸಿದ್ದಳು. ಈ ವೇಳೆ, ಅಲ್ಲಿದ್ದ ಯುವಕನ ಪರಿಚಯವಾಗಿ ತಿರುಗಾಟ ಆರಂಭಿಸಿದ್ದಳು. ಈ ಬಗ್ಗೆ ಬಜರಂಗದಳ ಕಾರ್ಯಕರ್ತರು ಯುವತಿಯ ಹೆತ್ತವರಿಗೂ ಮಾಹಿತಿ ನೀಡಿದ್ದರು.
ಮೊನ್ನೆ ಹೆತ್ತವರನ್ನು ಜುವೆಲ್ಲರಿಗೆ ಕರೆಸಿ, ಅವರಿಂದಲೇ ಯುವತಿಗೆ ಎರಡೇಟು ಬಿಗಿಯುವಂತೆ ಮಾಡಿದ್ದಾರೆ. ಅಲ್ಲದೆ, ಮುಸ್ಲಿಂ ಯುವಕನಿಗೂ ಕಾರ್ಯಕರ್ತರು ಹಲ್ಲೆ ನಡೆಸಿದ್ದರು. ಘಟನೆ ಬಗ್ಗೆ ಕದ್ರಿ ಠಾಣೆಯಲ್ಲಿ ಪ್ರತ್ಯೇಕ ಮೂರು ದೂರು ದಾಖಲಾಗಿ ಎಫ್ಐಆರ್ ಆಗಿತ್ತು. ಹಲ್ಲೆಗೊಳಗಾದ ಯುವಕ ಹಲ್ಲೆ ಕೃತ್ಯದ ಬಗ್ಗೆ, ಸುಲ್ತಾನ್ ಗೋಲ್ಡ್ ಜುವೆಲ್ಲರಿಯವರು ಮಳಿಗೆ ಒಳಗೆ ಅಕ್ರಮವಾಗಿ ಪ್ರವೇಶಿಸಿ ದಾಂಧಲೆ ನಡೆಸಿರುವ ಬಗ್ಗೆ ದೂರು ನೀಡಿದ್ದರು. ಇದಲ್ಲದೆ, ಯುವತಿಯ ತಾಯಿಯೂ ದೂರು ನೀಡಿದ್ದರು. ಇದರಂತೆ, ಪ್ರತ್ಯೇಕ ಕೇಸು ದಾಖಲಾಗಿದ್ದು ತನಿಖೆ ಕೈಗೊಂಡಿದ್ದ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.
sulthan gold jewelry Moral police case four arrested bajrangdal activist in Mangalore.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am