ಬ್ರೇಕಿಂಗ್ ನ್ಯೂಸ್
13-12-22 02:03 pm Mangalore Correspondent ಕರಾವಳಿ
ಮಂಗಳೂರು, ಡಿ.13: ಬೈಕಂಪಾಡಿಯ ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಎಸ್ಪಿ ಲಕ್ಷ್ಮೀ ಗಣೇಶ್ ಮತ್ತು ಡಿವೈಎಸ್ಪಿ ಚೆಲುವರಾಜು ನೇತೃತ್ವದಲ್ಲಿ ದಾಳಿ ನಡೆದಿದ್ದು ಕಚೇರಿಯಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.
ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಫೈಲ್ ಗಳನ್ನು ಕ್ಲೀಯರ್ ಮಾಡಲು ಹಣಕ್ಕೆ ಬೇಡಿಕೆ ಇಟ್ಟಿರುವ ಆರೋಪದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸಣ್ಣ ಪುಟ್ಟ ಕೈಗಾರಿಕೆಗಳ ಲೈಸನ್ಸ್ ನವೀಕರಣ ಮಾಡುವುದಕ್ಕೂ ಅಧಿಕಾರಿಗಳು ಡಿಮಾಂಡ್ ಇಟ್ಟಿರುವ ಬಗ್ಗೆ ದೂರು ಬಂದಿದ್ದರಿಂದ ಲೋಕಾಯುಕ್ತ ದಾಳಿ ನಡೆದಿದೆ.
ದೂರಿನ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಬೈಕಂಪಾಡಿಯಲ್ಲಿರುವ ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿ ಮೇಲೆ ದಾಳಿ ನಡೆಸಿ, ಕಡತಗಳ ಪರಿಶೀಲನೆ ನಡೆಸಿದ್ದಾರೆ. ಕೈಗಾರಿಕೆಗಳ ಸಂಬಂಧಪಟ್ಟ ಕಡತಗಳನ್ನು ವಿನಾಕಾರಣ ಬಾಕಿ ಇಡಲಾಗಿದೆಯೇ ಎಂದು ತಪಾಸಣೆ ನಡೆಸಿದ್ದಾರೆ. ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ತಮ್ಮ ಕರ್ತವ್ಯ ನಿರ್ವಹಿಸದೆ, ಸಣ್ಣ ಪುಟ್ಟ ಕೈಗಾರಿಕೆಗಳಿಂದಲೂ ಹಣಕ್ಕಾಗಿ ಡಿಮ್ಯಾಂಡ್ ಮಾಡುವುದು, ಹಣ ಪಡೆದು ಮಾಲಿನ್ಯವನ್ನು ಸಾರ್ವಜನಿಕ ಪ್ರದೇಶಕ್ಕೆ ಹರಿಸಲು ಅವಕಾಶ ಕೊಡುವುದು ಇತ್ಯಾದಿ ಆರೋಪಗಳಿದ್ದವು. ಮುಕ್ಕ, ಕುಳಾಯಿ ಪ್ರದೇಶದಲ್ಲಿ ಸಮುದ್ರ ತೀರದಲ್ಲಿ ಬಹಳಷ್ಟು ಫಿಶ್ ಮಿಲ್ ಕಂಪನಿಗಳು ಮಾಲಿನ್ಯವನ್ನು ನೇರವಾಗಿ ಸಮುದ್ರಕ್ಕೆ ಬಿಡುತ್ತಿದ್ದರೂ, ಕಚೇರಿಯ ಅಧಿಕಾರಿಗಳು ಗಿಂಬಳ ಪಡೆದು ಮೌನವಾಗಿ ಇರುತ್ತಿದ್ದರು.
ಎಂಆರ್ ಪಿಎಲ್, ಬಿಎಸ್ಎಫ್ ರೀತಿಯ ದೊಡ್ಡ ಕೈಗಾರಿಕೆಗಳ ಮಾಲಿನ್ಯದ ಬಗ್ಗೆ ಜೋಕಟ್ಟೆಯ ನಾಗರಿಕರು ಬಹಳಷ್ಟು ಬಾರಿ ಪ್ರತಿಭಟನೆ ನಡೆಸಿದರೂ, ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ತಮಗೂ ಅದಕ್ಕೂ ಸಂಬಂಧವೇ ಇಲ್ಲ ಎನ್ನುವ ರೀತಿ ವರ್ತಿಸುತ್ತಿದ್ದರು. ಇದೀಗ ಮೊದಲ ಬಾರಿಗೆ ಲೋಕಾಯುಕ್ತ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ.
Lokayukta raids the Environmental department in Baikampady Mangalore. Checks Emilas after receiving too many complaints over clearance.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
15-11-25 11:12 pm
HK News Desk
ದೆಹಲಿ ಕಾರು ಸ್ಫೋಟ ಪ್ರಕರಣ ; ಪಶ್ಚಿಮ ಬಂಗಾಳದಲ್ಲಿ ಮ...
15-11-25 07:09 pm
ಶ್ರೀನಗರ ಪೊಲೀಸ್ ಠಾಣೆಯಲ್ಲಿ ಭೀಕರ ಸ್ಫೋಟ ; 6 ಮಂದಿ...
15-11-25 12:06 pm
ಬಿಹಾರ ಫಲಿತಾಂಶ ; ‘ಛೋಟೇ ಸರ್ಕಾರ್’ ಖ್ಯಾತಿಯ ಅನಂತ್...
14-11-25 09:10 pm
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
15-11-25 10:47 pm
Mangalore Correspondent
ಬೀದಿ ನಾಯಿಗಳಿಗೆ ವ್ಯಕ್ತಿ ಬಲಿ ; ಕಡೆಗೂ ಎಚ್ಚತ್ತುಕೊ...
15-11-25 07:42 pm
Panambur Accident, Mangalore, Three dead: ಪಣಂ...
15-11-25 02:47 pm
ಬಿಹಾರದಲ್ಲಿ ಚುನಾವಣೆ ಮುನ್ನ ಹತ್ತು ಸಾವಿರ ಕೊಟ್ಟು ಮ...
15-11-25 01:51 pm
ಬಿ.ಸಿ. ರೋಡ್ ಬಳಿ ಭೀಕರ ಅಪಘಾತ ; ಉಡುಪಿ ಕೃಷ್ಣ ಮಠಕ್...
15-11-25 12:12 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm