ಬ್ರೇಕಿಂಗ್ ನ್ಯೂಸ್
15-10-20 02:43 pm Mangaluru Correspondent ಕರಾವಳಿ
ಪುತ್ತೂರು, ಅಕ್ಟೋಬರ್ 15: ಅಧಿಕೃತ ಏಜೆನ್ಸಿ ಹೆಸರಲ್ಲಿ ನಕಲಿ ವಾಹನ ವಿಮೆ ಮಾಡಿ ವಂಚಿಸುತ್ತಿರುವ ಪ್ರಕರಣ ಪುತ್ತೂರಿನಲ್ಲಿ ಕಂಡುಬಂದಿದೆ.
ಪುತ್ತೂರು ಆರ್ಟಿಒ ನಲ್ಲಿ ರಿಜಿಸ್ಟರ್ ಆಗಿದ್ದ ವಾಹನ ವಿಮೆಯನ್ನು ತನ್ನ ಹೆಸರಿಗೆ ವರ್ಗಾಯಿಸಲು ವ್ಯಕ್ತಿಯೊಬ್ಬ ಪುತ್ತೂರಿನ ವಿಮಾ ಕಚೇರಿಗೆ ಬಂದಿದ್ದಾಗ ನಕಲಿ ವಿಮೆಯ ಪ್ರಕರಣ ಬೆಳಕಿಗೆ ಬಂದಿದೆ.
ಹಳೆ ಕಾರು ಖರೀದಿಸಿದ್ದ ವ್ಯಕ್ತಿಯೊಬ್ಬ ತನ್ನ ಹೆಸರಿಗೆ ವಾಹನ ವಿಮೆ ಮಾಡಿಸಿಕೊಳ್ಳಲು ಕಚೇರಿಗೆ ಬಂದಿದ್ದ. ಪುತ್ತೂರಿನ ವಾಹನ ವಿಮೆಯ ಅಧಿಕೃತ ಏಜೆಂಟ್ ಜಯಾನಂದ ಅವರ ಏಜೆನ್ಸಿ ಸಂಖ್ಯೆ ಹೊಂದಿತ್ತು. ಅವಧಿ ಮುಗಿಯದ ವಿಮೆಯ ಬಗ್ಗೆ ಮಾಹಿತಿ ಕೆದಕಿದಾಗ, ಅದು ನಕಲಿಯಾಗಿರುವುದು ಕಂಡು ಬಂತು. ಬಳಿಕ ಅದರಲ್ಲಿ ನಮೂದಾಗಿದ್ದ ಏಜೆಂಟ್ ಕೋಡ್, ಜಯಾನಂದ ಅವರನ್ನು ಸಂಪರ್ಕಿಸಿದರು. ವಿಮೆ ನೋಂದಣಿಯಾದ ದಿನಾಂಕ ಏಜೆನ್ಸಿ ವತಿಯಿಂದ ಸದ್ರಿ ವಾಹನಕ್ಕೆ ವಿಮೆ ಮಾಡಿಲ್ಲ ಎಂದು ಕಂಪೆನಿಗೆ ತಿಳಿಸಿದ್ದರು. ಈ ವೇಳೆ ಇದು ನಕಲಿ ವಿಮೆ ಎಂಬ ಅನುಮಾನ ಖಾತರಿ ಆಗಿದೆ. ಇದೇ ವೇಳೆ, ಅದೇ ನಂಬರಿನ ಏಜೆನ್ಸಿ ಕೋಡ್ನಲ್ಲಿ ಇನ್ನೊಬ್ಬ ವ್ಯಕ್ತಿಗೂ ನಕಲಿ ವಿಮೆ ನೀಡಿರುವ ಮಾಹಿತಿ ಬಯಲಾಗಿದೆ.

ಪೊಲೀಸರು ತಪಾಸಣೆ ವೇಳೆ ವಿಮೆಯ ಅವಧಿ ದಿನಾಂಕ, ಹೆಸರು ಮಾತ್ರ ಗಮನಿಸುವ ಕಾರಣ ವಿಮೆಯ ಅಸಲಿ, ನಕಲಿ ಅಂಶ ಬಯಲಿಗೆ ಬರುವುದಿಲ್ಲ. ಜತೆಗೆ ಗ್ರಾಹಕರಿಗೂ ಈ ಬಗ್ಗೆ ಯಾವ ಸುಳಿವು ದೊರೆಯುವುದಿಲ್ಲ. ನಿಯಮಾನುಸಾರ ಆಯಾ ವಾಹನಗಳಿಗೆ ನಿರ್ದಿಷ್ಟ ಶುಲ್ಕ ಪಾವತಿಸಬೇಕಿದ್ದರೂ ನಕಲಿ ವಿಮೆಯಲ್ಲಿ ಕಡಿಮೆ ಹಣ ಪಡೆದು ಪಾಲಿಸಿ ನೀಡಿರುವುದು ಕಂಡುಬಂದಿದೆ. ಇದರಿಂದ ನಿಯಮ ಅನುಸಾರ ವಿಮೆ ನೀಡುವ ಏಜೆನ್ಸಿಗಳ ಕೋಡ್ ದುರ್ಬಳಕೆ ಮಾಡಿಕೊಳ್ಳುವ ಕಾರಣ ಅವರಿಗೂ ತೊಂದರೆ ಉಂಟಾಗಿದೆ.
ಈಗಾಗಲೇ ನೂರಾರು ವಾಹನಗಳಿಗೆ ಇಂತಹ ನಕಲಿ ವಿಮೆ ನೀಡಿ ವಂಚಿಸಿರುವ ಸಾಧ್ಯತೆ ಮೇಲ್ನೋಟಕ್ಕೆ ಕಂಡು ಬಂದಿದೆ. ಸಂಚಾರ ಪೊಲೀಸರು ತಪಾಸಣೆ ವೇಳೆ ವಿಮೆ ಪಾಲಿಸಿಗಳನ್ನು ಸೂಕ್ಷವಾಗಿ ಪರಿಶೀಲಿಸಬೇಕಾಗಿದೆ. ನಕಲಿ ಕಂಡುಬಂದರೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ವಾಹನ ಮಾಲಕರು ಹಾಗೂ ಅಧಿಕೃತ ಏಜೆನ್ಸಿದಾರರು ಆಗ್ರಹಿಸಿದ್ದಾರೆ.
Puttur fake insurance copies being issued in the name of insurance companies have come to light after one of the persons vehicle insurance was claimed fake when he visited the Insurance office in Puttur.
24-03-26 02:55 pm
HK News Staffer
ಬಿಜೆಪಿ ಜೊತೆಗಿನ ಮೈತ್ರಿ ತಳ್ಳಿಹಾಕಿದ ನಟ ವಿಜಯ್ ; ಜ...
23-03-26 12:48 pm
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
24-03-26 12:10 pm
HK News Staffer
ಇರಾನ್ - ಅಮೆರಿಕ ಸಂಘರ್ಷ ; ದಿಢೀರ್ ಐದು ದಿನಗಳ ಕದನ...
23-03-26 09:46 pm
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
24-03-26 11:55 am
HK News Staffer
ಹರ್ಮುಜ್ ಜಲಸಂಧಿ ಬಂದ್ ; ಭಾರತದ 22 ಹಡಗು ಲಂಗರು, 20...
24-03-26 09:24 am
ಕಾಸರಗೋಡು ಅಖಾಡ ರೆಡಿ ; ಎಲ್ ಡಿಎಫ್ ನಿಂದ ಶಾನವಾಸ್ ಪ...
23-03-26 05:36 pm
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
24-03-26 02:04 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm