ಬ್ರೇಕಿಂಗ್ ನ್ಯೂಸ್
15-10-20 02:43 pm Mangaluru Correspondent ಕರಾವಳಿ
ಪುತ್ತೂರು, ಅಕ್ಟೋಬರ್ 15: ಅಧಿಕೃತ ಏಜೆನ್ಸಿ ಹೆಸರಲ್ಲಿ ನಕಲಿ ವಾಹನ ವಿಮೆ ಮಾಡಿ ವಂಚಿಸುತ್ತಿರುವ ಪ್ರಕರಣ ಪುತ್ತೂರಿನಲ್ಲಿ ಕಂಡುಬಂದಿದೆ.
ಪುತ್ತೂರು ಆರ್ಟಿಒ ನಲ್ಲಿ ರಿಜಿಸ್ಟರ್ ಆಗಿದ್ದ ವಾಹನ ವಿಮೆಯನ್ನು ತನ್ನ ಹೆಸರಿಗೆ ವರ್ಗಾಯಿಸಲು ವ್ಯಕ್ತಿಯೊಬ್ಬ ಪುತ್ತೂರಿನ ವಿಮಾ ಕಚೇರಿಗೆ ಬಂದಿದ್ದಾಗ ನಕಲಿ ವಿಮೆಯ ಪ್ರಕರಣ ಬೆಳಕಿಗೆ ಬಂದಿದೆ.
ಹಳೆ ಕಾರು ಖರೀದಿಸಿದ್ದ ವ್ಯಕ್ತಿಯೊಬ್ಬ ತನ್ನ ಹೆಸರಿಗೆ ವಾಹನ ವಿಮೆ ಮಾಡಿಸಿಕೊಳ್ಳಲು ಕಚೇರಿಗೆ ಬಂದಿದ್ದ. ಪುತ್ತೂರಿನ ವಾಹನ ವಿಮೆಯ ಅಧಿಕೃತ ಏಜೆಂಟ್ ಜಯಾನಂದ ಅವರ ಏಜೆನ್ಸಿ ಸಂಖ್ಯೆ ಹೊಂದಿತ್ತು. ಅವಧಿ ಮುಗಿಯದ ವಿಮೆಯ ಬಗ್ಗೆ ಮಾಹಿತಿ ಕೆದಕಿದಾಗ, ಅದು ನಕಲಿಯಾಗಿರುವುದು ಕಂಡು ಬಂತು. ಬಳಿಕ ಅದರಲ್ಲಿ ನಮೂದಾಗಿದ್ದ ಏಜೆಂಟ್ ಕೋಡ್, ಜಯಾನಂದ ಅವರನ್ನು ಸಂಪರ್ಕಿಸಿದರು. ವಿಮೆ ನೋಂದಣಿಯಾದ ದಿನಾಂಕ ಏಜೆನ್ಸಿ ವತಿಯಿಂದ ಸದ್ರಿ ವಾಹನಕ್ಕೆ ವಿಮೆ ಮಾಡಿಲ್ಲ ಎಂದು ಕಂಪೆನಿಗೆ ತಿಳಿಸಿದ್ದರು. ಈ ವೇಳೆ ಇದು ನಕಲಿ ವಿಮೆ ಎಂಬ ಅನುಮಾನ ಖಾತರಿ ಆಗಿದೆ. ಇದೇ ವೇಳೆ, ಅದೇ ನಂಬರಿನ ಏಜೆನ್ಸಿ ಕೋಡ್ನಲ್ಲಿ ಇನ್ನೊಬ್ಬ ವ್ಯಕ್ತಿಗೂ ನಕಲಿ ವಿಮೆ ನೀಡಿರುವ ಮಾಹಿತಿ ಬಯಲಾಗಿದೆ.

ಪೊಲೀಸರು ತಪಾಸಣೆ ವೇಳೆ ವಿಮೆಯ ಅವಧಿ ದಿನಾಂಕ, ಹೆಸರು ಮಾತ್ರ ಗಮನಿಸುವ ಕಾರಣ ವಿಮೆಯ ಅಸಲಿ, ನಕಲಿ ಅಂಶ ಬಯಲಿಗೆ ಬರುವುದಿಲ್ಲ. ಜತೆಗೆ ಗ್ರಾಹಕರಿಗೂ ಈ ಬಗ್ಗೆ ಯಾವ ಸುಳಿವು ದೊರೆಯುವುದಿಲ್ಲ. ನಿಯಮಾನುಸಾರ ಆಯಾ ವಾಹನಗಳಿಗೆ ನಿರ್ದಿಷ್ಟ ಶುಲ್ಕ ಪಾವತಿಸಬೇಕಿದ್ದರೂ ನಕಲಿ ವಿಮೆಯಲ್ಲಿ ಕಡಿಮೆ ಹಣ ಪಡೆದು ಪಾಲಿಸಿ ನೀಡಿರುವುದು ಕಂಡುಬಂದಿದೆ. ಇದರಿಂದ ನಿಯಮ ಅನುಸಾರ ವಿಮೆ ನೀಡುವ ಏಜೆನ್ಸಿಗಳ ಕೋಡ್ ದುರ್ಬಳಕೆ ಮಾಡಿಕೊಳ್ಳುವ ಕಾರಣ ಅವರಿಗೂ ತೊಂದರೆ ಉಂಟಾಗಿದೆ.
ಈಗಾಗಲೇ ನೂರಾರು ವಾಹನಗಳಿಗೆ ಇಂತಹ ನಕಲಿ ವಿಮೆ ನೀಡಿ ವಂಚಿಸಿರುವ ಸಾಧ್ಯತೆ ಮೇಲ್ನೋಟಕ್ಕೆ ಕಂಡು ಬಂದಿದೆ. ಸಂಚಾರ ಪೊಲೀಸರು ತಪಾಸಣೆ ವೇಳೆ ವಿಮೆ ಪಾಲಿಸಿಗಳನ್ನು ಸೂಕ್ಷವಾಗಿ ಪರಿಶೀಲಿಸಬೇಕಾಗಿದೆ. ನಕಲಿ ಕಂಡುಬಂದರೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ವಾಹನ ಮಾಲಕರು ಹಾಗೂ ಅಧಿಕೃತ ಏಜೆನ್ಸಿದಾರರು ಆಗ್ರಹಿಸಿದ್ದಾರೆ.
Puttur fake insurance copies being issued in the name of insurance companies have come to light after one of the persons vehicle insurance was claimed fake when he visited the Insurance office in Puttur.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 08:53 pm
HK News Staffer
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm
Suhas Shetty, Mangalore, NIA: ಸುಹಾಸ್ ಶೆಟ್ಟಿ ಹ...
23-06-26 02:15 pm