ಬ್ರೇಕಿಂಗ್ ನ್ಯೂಸ್
13-12-22 08:47 pm Mangalore Correspondent ಕರಾವಳಿ
ಮಂಗಳೂರು, ಡಿ.13 : ಕೆನರಾ ಹೈಸ್ಕೂಲ್ ಎಸೋಸಿಯೇಶನ್ ಪ್ರಾಯೋಜಿತ ಕೆನರಾ ಇಂಜಿನಿಯರಿಂಗ್ ಕಾಲೇಜು ಕ್ಯಾಂಪಸ್ ನಲ್ಲಿ ನಿರ್ಮಾಣವಾಗಲಿರುವ ಬಹುವಿಧ ಸೌಲಭ್ಯಗಳಿರುವ 5 ಕೋಟಿ ರೂ. ವೆಚ್ಚದ ಆಕ್ಟಿವಿಟಿ ಸೆಂಟರ್ ಗೆ ಕೆನರಾ ಶಿಕ್ಷಣ ಸಂಸ್ಥೆಯ ಹಳೆ ವಿದ್ಯಾರ್ಥಿಯೂ ಆಗಿರುವ ಉದ್ಯಮಿ ಸೆಂಚುರಿ ಬಿಲ್ಡರ್ಸ್ ಆಡಳಿತ ನಿರ್ದೇಶಕ ಡಾ.ಪಿ.ದಯಾನಂದ ಪೈ ಮೊದಲ ಹಂತದಲ್ಲಿ ತಮ್ಮ ಎರಡು ಕೋಟಿ ರೂಪಾಯಿಗಳ ಕೊಡುಗೆಯನ್ನು ಘೋಷಿಸಿದ್ದಾರೆ.
ಕಾಲೇಜಿನ ಆವರಣದಲ್ಲಿ ನವೀಕೃತ ಅಕಾಡೆಮಿಕ್ ಬ್ಲಾಕ್ ಉದ್ಘಾಟಿಸುವ ಸಂದರ್ಭದಲ್ಲಿ ಅವರು ಈ ಕೊಡುಗೆಯನ್ನು ಘೋಷಿಸಿದರು. ಶತಮಾನದ ಇತಿಹಾಸವಿರುವ ಕೆನರಾ ಶಿಕ್ಷಣ ಸಂಸ್ಥೆಗಳ ಸಾಧನೆ ದೊಡ್ಡದು ಎಂದ ಅವರು ತನ್ನ ವೃತ್ತಿ ಜೀವನ ರೂಪಿಸುವಲ್ಲಿ ಕೆನರಾ ಶಿಕ್ಷಣ ಸಂಸ್ಥೆಗಳ ಋಣ ತೀರಿಸಲಾಗದ್ದು. ಈ ಭಾವನಾತ್ಮಕ ಬಾಂಧವ್ಯ ತನ್ನ ಕುಟುಂಬದ ಜತೆ ನಿರಂತರವಾಗಿರಬೇಕು ಎಂದವರು ಆಶಯ ವ್ಯಕ್ತಪಡಿಸಿದರು.
ಸುಮಾರು 5 ಕೋಟಿ ರೂ. ವೆಚ್ಚದಲ್ಲಿ 20 ಸಾವಿರ ಚದರ ಅಡಿ ವಿಸ್ತಾರದಲ್ಲಿ ನಿರ್ಮಾಣ ಗೊಳ್ಳಲಿರುವ ಸ್ಟೂಡೆಂಟ್ಸ್ ಆಕ್ಟಿವಿಟಿ ಸೆಂಟರ್ 2 ಸಾವಿರ ಆಸನ ಸಾಮರ್ಥ್ಯ, ಪ್ರಸಕ್ತ ಯುವ ಪೀಳಿಗೆಯ ಸರ್ವಾಂಗೀಣ ವಿಕಾಸಕ್ಕೆ ಪೂರಕ ಸೌಲಭ್ಯಗಳು, ಪಠ್ಯೇತರ ಪೂರಕ ಚಟುವಟಿಕೆಗಳಿಗೆ ಈ ಸೆಂಟರ್ ವೇದಿಕೆಯಾಗಲಿದೆ. ಮಿನಿ ಥಿಯೇಟರ್ ಸೇರಿದಂತೆ ವಿದ್ಯಾರ್ಥಿಗಳ ಅಗತ್ಯಗಳಿಗೆ ಪೂರಕವಾಗಿ ಎಲ್ಲ ವೈವಿಧ್ಯತೆಯ ಸೌಲಭ್ಯಗಳನ್ನು ಒದಗಿಸುವ ಯೋಜನೆ ಇದಾಗಿದೆ.
ಈ ಸಂದರ್ಭದಲ್ಲಿ ಶ್ರೀಮತಿ ಮೋಹಿನಿ ಡಿ.ಪೈ ಮಣಿಪಾಲ್ ಗ್ಲೋಬಲ್ ಎಜುಕೇಶನ್ ಚೇರ್ಮನ್ ಪದ್ಮಶ್ರೀ ಟಿ.ವಿ.ಮೋಹನದಾಸ್ ಪೈ, ಹಾಂಗ್ಯೋ ಐಸ್ ಕ್ರೀಮ್ ಲಿಮಿಟೆಡ್ ಮ್ಯಾನೇಜಿಂಗ್ ಡೈರೆಕ್ಟರ್ ಪ್ರದೀಪ್ ಜಿ. ಪೈ, ಕೆನರಾ ಹೈಸ್ಕೂಲ್ ಎಸೋಸಿಯೇಶನ್ ಅಧ್ಯಕ್ಷ ಡಿ.ವಾಸುದೇವ ಕಾಮತ್, ಉಪಾಧ್ಯಕ್ಷ ಎಂ. ಪದ್ಮನಾಭ ಪೈ, ಕಾರ್ಯದರ್ಶಿ ಎಂ. ರಂಗನಾಥ ಭಟ್, ಕೆನರಾ ಸಂಸ್ಥೆಗಳ ನಿರ್ದೇಶಕ ಡಾ. ರಾಧಾಕೃಷ್ಣ ಐತಾಳ್, ಆಡಳಿತ ಮಂಡಳಿಯ ಸದಸ್ಯರು ಹಾಗೂ ಕೆನರಾ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಗಣೇಶ್ ಭಟ್ ಉಪಸ್ಥಿತರಿದ್ದರು.
Businessmen Dayananda Pai donates 2 crores to Mangalore Canara engineering college for the construction of the activity centre.
30-06-25 10:30 pm
HK News Desk
CM Siddaramaiah, Dk Shivakumar, CM Post: ಹೇಯ್...
30-06-25 02:55 pm
ಅಕ್ರಮ ಗೋಸಾಗಣೆ ತಡೆದ ಶ್ರೀರಾಮ ಸೇನೆ ಕಾರ್ಯಕರ್ತರನ್ನ...
30-06-25 01:44 pm
Spike in Heart Attack, Hassan: Dr. Manjunath...
30-06-25 12:05 pm
Tumakuru accident, four killed: ಕ್ಯಾಂಟರ್ -...
30-06-25 11:04 am
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
30-06-25 10:59 pm
Mangalore Correspondent
Mangalore KDP Meeting: ಕೆಡಿಪಿ ಸಭೆಯಲ್ಲಿ ಮರಳು,...
30-06-25 08:19 pm
Mangalore, Rain, School News: ತರಗತಿ ನಡೆಯುತ್ತಿ...
30-06-25 03:20 pm
Mangalore Bomb Threat, Airport: ಮಂಗಳೂರು ಸೇರಿ...
30-06-25 01:07 pm
Red Stone Quarry, Dakshina Kannada, Protest:...
27-06-25 10:17 pm
30-06-25 06:12 pm
Giridhar Shetty, Mangaluru
Olx Fraud, Mangalore: ಓಎಲ್ ಎಕ್ಸ್ ನಲ್ಲಿ ಕಾರು ಮ...
29-06-25 11:23 pm
Udupi Crime, Kapu, Railway: ರೈಲಿನಲ್ಲಿ ಉಡುಪಿಗೆ...
29-06-25 11:15 pm
Davanagere ATM Robbery : ಪೆಟ್ರೋಲ್ ಸುರಿದು ಎಟಿಎ...
29-06-25 04:26 pm
Tumakuru Husband Murder, Wife arrest, Crime:...
29-06-25 02:26 pm