ಬ್ರೇಕಿಂಗ್ ನ್ಯೂಸ್
14-12-22 02:18 pm Mangalore Correspondent ಕರಾವಳಿ
ಉಳ್ಳಾಲ, ಡಿ.14 : ಮುಂಜಾನೆ ಜಾಗಿಂಗ್ ತೆರಳಿದ್ದ ಯುವಕನೋರ್ವ ಮನೆಗೆ ಮರಳಿದ ಬಳಿಕ ಕೋಣೆಯಲ್ಲಿ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಕೊಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯ ಅಸೈಗೋಳಿ ಸೈಟ್ ಎಂಬಲ್ಲಿ ನಡೆದಿದೆ.
ಅಸೈಗೋಳಿ ಸೈಟ್ ಅಯ್ಯಪ್ಪ ಮಂದಿರದ ಬಳಿಯ ನಿವಾಸಿ ಅಭಿಲಾಷ್ ಶೆಟ್ಟಿ(36) ಆತ್ಮಹತ್ಯೆಗೈದ ಯುವಕ. ಅಭಿಲಾಷ್ ಈ ಹಿಂದೆ ಮೆಡಿಕಲ್ ರೆಫ್ ಆಗಿ ಕೆಲಸ ಮಾಡುತ್ತಿದ್ದು ಕೆಲ ತಿಂಗಳಿಂದ ಕೆಲಸಕ್ಕೆ ತೆರಳದೆ ಮನೆಯಲ್ಲೇ ಉಳಿದಿದ್ದರೆನ್ನಲಾಗಿದೆ. ಹೀಗಾಗಿ ಕೆಲವು ದಿನಗಳಿಂದ ಮಾನಸಿಕ ಖಿನ್ನತೆಗೊಳಗಾಗಿದ್ದರು ಎನ್ನಲಾಗಿದೆ.
ಇಂದು ಮುಂಜಾನೆ ಎಂದಿನಂತೆ ಜಾಗಿಂಗ್ ಗೆ ತೆರಳಿ ಮನೆಗೆ ಹಿಂದಿರುಗಿದ್ದಾರೆ. ಬೆಳಗ್ಗೆ 10 ಗಂಟೆಯ ವೇಳೆ ಅಭಿಲಾಷ್ ತಾಯಿ ಮತ್ತು ಮನೆ ಮಂದಿ ಮದುವೆ ಸಮಾರಂಭಕ್ಕೆ ತೆರಳಿದ್ದು ಈ ವೇಳೆ ಅಭಿಲಾಷ್ ತನ್ನ ಕೋಣೆಯ ಫ್ಯಾನಿಗೆ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾರೆ. ಮದುವೆಗೆ ತೆರಳದೆ ಮನೆಯಲ್ಲೇ ಉಳಿದಿದ್ದ ಅಭಿಲಾಷ್ ತಂದೆ, ಮಗ ಕೋಣೆಯಿಂದ ಹೊರ ಬಾರದೇ ಇದ್ದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದಿದೆ. ಕೊಣಾಜೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಅಭಿಲಾಷ್ ಮೊಬೈಲನ್ನ ವಶಕ್ಕೆ ಪಡೆದು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಮೃತ ಅಭಿಲಾಷ್ ತಂದೆ, ತಾಯಿ, ಸಹೋದರ, ಸಹೋದರಿಯನ್ನ ಅಗಲಿದ್ದಾರೆ.
36 year old man commits Suicide at Konaje in Mangalore.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm