ಬ್ರೇಕಿಂಗ್ ನ್ಯೂಸ್
15-12-22 09:24 pm Mangalore Correspondent ಕರಾವಳಿ
ಮಂಗಳೂರು, ಡಿ.15: ಯಾವುದೋ ಕ್ಷುಲ್ಲಕ ಪ್ರಕರಣ ಮುಂದಿಟ್ಟು ಹಿಂದು ಮಹಾಸಭಾ ರಾಜ್ಯಾಧ್ಯಕ್ಷ ರಾಜೇಶ್ ಪವಿತ್ರನ್ ಅವರನ್ನು ಬಂಧಿಸಲಾಗಿದೆ. ಇದರ ಹಿಂದೆ ಬಿಜೆಪಿ ಆಡಳಿತದ ಹತಾಶ ಭಾವನೆ ಅಡಗಿದೆ. ಚುನಾವಣೆ ಸಂದರ್ಭದಲ್ಲಿ ಸೋಲಿನ ಭೀತಿಯಲ್ಲಿರುವ ಬಿಜೆಪಿ ನಾಯಕರು ಚುನಾವಣಾ ತಂತ್ರಗಾರಿಕೆಯ ಭಾಗವಾಗಿ ರಾಜೇಶ್ ಪವಿತ್ರನ್ ಅವರನ್ನು ಬಂಧಿಸಿದ್ದಾರೆ ಎಂದು ಹಿಂದು ಮಹಾಸಭಾ ರಾಜ್ಯ ಕಾರ್ಯದರ್ಶಿ ಧರ್ಮೇಂದ್ರ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ರಾಜೇಶ್ ಪವಿತ್ರನ್ ವಿರುದ್ಧ ಆರೋಪಿಸಿ ಪ್ರಕರಣ ದಾಖಲಿಸಿದ ಸುರೇಶ್ ಎನ್ನುವ ವ್ಯಕ್ತಿ ಮೂರ್ನಾಲ್ಕು ವರ್ಷಗಳ ಕಾಲ ರಾಜೇಶ್ ಪವಿತ್ರನ್ ಅವರ ಕಚೇರಿಯಲ್ಲಿ ಕೆಲಸಕ್ಕಿದ್ದವನು. ಆತ ಯಾವುದೇ ಕಂಪನಿ ಪಾಲುದಾರನಲ್ಲ. ಅಲ್ಲದೆ, ಯಾವುದೇ ರೀತಿಯ ಉದ್ಯಮಿಯೂ ಅಲ್ಲ. ಕೆಲಸ ಬಿಟ್ಟು ಹೋಗಿದ್ದಾಗ ಲ್ಯಾಪ್ಟಾಪ್ ಬಿಟ್ಟು ಹೋಗಿದ್ದ. ಅದನ್ನು ವಾಪಸ್ ಕೊಡುವಂತೆ ದೂರು ನೀಡಿದ್ದ. ತನ್ನ ವೈಯಕ್ತಿಕ ಹಣದಲ್ಲಿ ಇಡೀ ರಾಜ್ಯ ಘಟಕವನ್ನು ನಡೆಸುತ್ತಿರುವ ರಾಜೇಶ್ ಪವಿತ್ರನ್ ಅವರಿಗೆ ಜುಜುಬಿ 20 ಸಾವಿರ ಮೌಲ್ಯದ ಲ್ಯಾಪ್ ಟಾಪ್ ದೊಡ್ಡ ಸಂಗತಿಯೇ.. ಆದರೆ ಸುರತ್ಕಲ್ ಪೊಲೀಸರು ಇದೇ ನೆಪವನ್ನು ಮುಂದಿಟ್ಟು ರಾಜೇಶ್ ಪವಿತ್ರನ್ ವಿರುದ್ಧ ಇಲ್ಲಸಲ್ಲದ ಆರೋಪ ಹೊರಿಸಿ ಎಫ್ಐಆರ್ ದಾಖಲಿಸಿದ್ದಾರೆ.

ಪೊಲೀಸರು ಮೊದಲು ವಿಚಾರಣೆಗೆಂದು ಠಾಣೆಗೆ ಕರೆದೊಯ್ದು ಅಲ್ಲಿ ಅನಿರೀಕ್ಷಿತವಾಗಿ ಎಫ್ಐಆರ್ ದಾಖಲು ಮಾಡಿದ್ದಾರೆ. ದೂರುದಾರ ವ್ಯಕ್ತಿಯೇ ತನಗೆ ಲ್ಯಾಪ್ ಟಾಪ್ ದೊರತರೆ ಸಾಕು, ದೂರು ಹಿಂಪಡೆಯುತ್ತೇನೆ ಎಂದು ಹೇಳುತ್ತಿದ್ದರೂ, ಪೊಲೀಸರು ಆತನ ಮಾತು ಕೇಳದೆ ಎಫ್ಐಆರ್ ದಾಖಲು ಮಾಡಿದ್ದಾರೆ. ಇದರ ಹಿಂದೆ ಯಾವ ದುರುದ್ದೇಶ ಅಡಗಿದೆ, ಯಾರ ಷಡ್ಯಂತ್ರ ಇದೆ ಎನ್ನುವುದು ತಿಳಿದುಬರುತ್ತದೆ. ರಾಜೇಶ್ ಪವಿತ್ರನ್ ಸುರತ್ಕಲ್ ನಲ್ಲಿಯೇ ಉದ್ಯಮ ನಡೆಸುತ್ತಿದ್ದಾರೆ. ಸುರತ್ಕಲ್ ಪೊಲೀಸರಿಗೂ ಈ ಬಗ್ಗೆ ಗೊತ್ತಿದೆ. ಈ ಹಿಂದೆ ಅವರಿಗೆ ಸೇರಿದ್ದ ವೃದ್ಧಾಶ್ರಮವನ್ನು ಮುಚ್ಚಿಸಲು ಏನೆಲ್ಲ ಷಡ್ಯಂತ್ರ ನಡೆಸಿದ್ದರು. ಕಿರುಕುಳವನ್ನೂ ಕೊಟ್ಟಿದ್ದರು. ಅದು ಸಾಧ್ಯವಾಗದೇ ಇದ್ದಾಗ, ಕೆಲಸ ಬಿಟ್ಟು ಹೋಗಿದ್ದ ವ್ಯಕ್ತಿಯನ್ನು ಮುಂದಿಟ್ಟು ದೂರು ದಾಖಲಿಸಿದ್ದಾರೆ.

ಈ ರೀತಿಯ ಷಡ್ಯಂತ್ರಗಳಿಂದ ಹಿಂದು ಮಹಾಸಭಾವನ್ನು ಹಿಮ್ಮೆಟ್ಟಿಸಲು ಸಾಧ್ಯವಿಲ್ಲ. ಮುಂದಿನ ಚುನಾವಣೆಯಲ್ಲಿ ಹಿಂದು ಮಹಾಸಭಾ ಇಡೀ ರಾಜ್ಯದಲ್ಲಿ ಬಿಜೆಪಿಗೆ ತನ್ನ ಶಕ್ತಿಯನ್ನು ತೋರಿಸಲಿದೆ. ಅದನ್ನು ಸೋಲಿಸುವ ಶಕ್ತಿಯಾಗಲಿದ್ದು, ಜನರು ತಕ್ಕ ಉತ್ತರ ನೀಡಲಿದ್ದಾರೆ ಎಂದು ಧರ್ಮೇಂದ್ರ ಹೇಳಿದ್ದಾರೆ. ಅಲ್ಲದೆ, ಈ ಪ್ರಕರಣದ ಬಗ್ಗೆ ಕೋರ್ಟಿನಲ್ಲಿ ಸ್ವತಃ ನ್ಯಾಯಾಧೀಶರೇ ಇದರ ಹಿಂದೆ ಷಡ್ಯಂತ್ರ ಇದೆಯೇ ಎಂದು ಪೊಲೀಸರಿಗೆ ಪ್ರಶ್ನೆ ಮಾಡಿದ್ದಾರೆ. ಇಷ್ಟೆಲ್ಲ ಸೆಕ್ಷನ್ ವಿಧಿಸುವ ಅಗತ್ಯವಿತ್ತೇ ಎಂದು ಪೊಲೀಸರಿಗೆ ಕೇಳಿದರೆ ಅವರಲ್ಲಿ ಉತ್ತರ ಇರಲಿಲ್ಲ. ಹಾಗಾಗಿ ಎಫ್ಐಆರ್ ದಾಖಲಿಸಿದ ಒಂದೇ ದಿನದಲ್ಲಿ ಬುಧವಾರವೇ ರಾಜೇಶ್ ಪವಿತ್ರನ್ ಗೆ ನ್ಯಾಯಾಲಯ ಜಾಮೀನು ನೀಡಿ ಕಳುಹಿಸಿತ್ತು ಎಂದು ಹೇಳಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಹರ್ಷ ನಾಯ್ಕ್, ರಾಜೇಶ್ ಪೂಜಾರಿ ಉಪಸ್ಥಿತರಿದ್ದರು.
Mangalore Hindu Mahasaba Rajesh Pavitran arrested, its a game plan of BJP slams members. Rajesh Pavithran (42) of Karnataka state Hindu Mahasabha was arrested by Surathkal police on the accusation of extorting gold and cash from a businessman threatening to make his private information public.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 08:27 pm
Mangalore Correspondent
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am