ಬ್ರೇಕಿಂಗ್ ನ್ಯೂಸ್
17-12-22 11:40 am Mangalore Correspondent ಕರಾವಳಿ
ಮಂಗಳೂರು, ಡಿ.17 : ಕುಕ್ಕರ್ ಬ್ಲಾಸ್ಟ್ ಪ್ರಕರಣದಲ್ಲಿ ಗಾಯಗೊಂಡಿದ್ದ ಶಂಕಿತ ಉಗ್ರ ಮೊಹಮ್ಮದ್ ಶಾರೀಕ್ ನನ್ನು ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಇಂದು ಬೆಳಗ್ಗೆ ವಶಕ್ಕೆ ಪಡೆದು ಕಂಕನಾಡಿ ಆಸ್ಪತ್ರೆಯಿಂದಲೇ ಬೆಂಗಳೂರಿಗೆ ಕರೆದುಕೊಂಡು ಹೋಗಿದ್ದಾರೆ.
ಘಟನೆಯಲ್ಲಿ 40 ಶೇಕಡಾದಷ್ಟು ಸುಟ್ಟ ಗಾಯಗಳಾಗಿದ್ದ ಶಾರೀಕ್ ನನ್ನು ಮಂಗಳೂರಿನ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ವಾರದ ಹಿಂದೆ 75 ಶೇಕಡಾ ಚೇತರಿಕೆ ಆಗಿದ್ದಾನೆ ಎನ್ನುವ ಮಾಹಿತಿಗಳಿದ್ದವು. ಹೀಗಾಗಿ ಪ್ರಕರಣದ ಬಗ್ಗೆ ಎನ್ಐಎ ಅಧಿಕಾರಿಗಳು ಶಾರೀಕ್ ನನ್ನು ವಿಚಾರಣೆ ಆರಂಭಿಸಿದ್ದರು. ಆದರೆ ಅಧಿಕಾರಿಗಳ ಪ್ರಶ್ನೆಗೆ ಸರಿಯಾದ ಉತ್ತರ ನೀಡದೆ ಅಸಹಕಾರ ತೋರುತ್ತಿದ್ದ ಎನ್ನಲಾಗಿತ್ತು. ತನಗೇನೂ ತಿಳಿದಿಲ್ಲ ಎಂದೇ ಅಧಿಕಾರಿಗಳಿಗೆ ಮಾಹಿತಿ ನೀಡುತ್ತಿದ್ದ.
ಈ ಹಿನ್ನೆಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಶಾರೀಕ್ ನನ್ನು ವಶಕ್ಕೆ ಪಡೆದು ಅಧಿಕಾರಿಗಳು ನೇರವಾಗಿ ಬೆಂಗಳೂರು ಎನ್ಐಎ ಕಚೇರಿಗೆ ಒಯ್ದಿದ್ದಾರೆ. ಚಿಕಿತ್ಸೆ ಅಗತ್ಯ ಬಿದ್ದಲ್ಲಿ ಬೆಂಗಳೂರಿನಲ್ಲಿಯೇ ನೀಡುವ ಸಾಧ್ಯತೆಯಿದೆ.
ನ.19ರಂದು ಕಂಕನಾಡಿಯ ನಾಗುರಿಯಲ್ಲಿ ಆಟೋ ರಿಕ್ಷಾದಲ್ಲಿ ತೆರಳುತ್ತಿದ್ದಾಗಲೇ ಸ್ಫೋಟ ಘಟನೆ ಆಗಿತ್ತು. ಪರಿಶೀಲನೆ ವೇಳೆ, ಪ್ರೆಶರ್ ಕುಕ್ಕರ್ ಸ್ಫೋಟವಾಗಿದ್ದು ಕಂಡುಬಂದಿತ್ತು. ಘಟನೆಯಲ್ಲಿ ಕುಕ್ಕರ್ ಹಿಡಿದುಕೊಂಡಿದ್ದ ಶಾರೀಕ್ ಗಂಭೀರ ಗಾಯಗೊಂಡಿದ್ದ. ಮೊದಲಿಗೆ, ಅದು ಶಾರೀಕ್ ಎನ್ನುವುದು ತಿಳಿದುಬಂದಿರಲಿಲ್ಲ. ಯಾರೋ ವ್ಯಕ್ತಿ ಗಾಯಗೊಂಡಿದ್ದಾನೆ ಎನ್ನಲಾಗಿತ್ತು. ವ್ಯಕ್ತಿಯ ಜೊತೆಗಿದ್ದ ಐಡಿ ಕಾರ್ಡ್ ನಲ್ಲಿ ಪ್ರೇಮರಾಜ್ ಹುಟಗಿ ಎನ್ನುವ ಹೆಸರಿನ ಆಧಾರ್ ಕಾರ್ಡ್ ಸಿಕ್ಕಿತ್ತು. ಹೀಗಾಗಿ ಬಹಳಷ್ಟು ಅನುಮಾನಗಳು ಉಂಟಾಗಿದ್ದವು. ಎರಡು ದಿನಗಳ ಬಳಿಕ, ಗಾಯಗೊಂಡ ವ್ಯಕ್ತಿ ಮೊಹಮ್ಮದ್ ಶಾರೀಕ್, ಗೋಡೆ ಬರಹ ಪ್ರಕರಣದ ಆರೋಪಿ ಎನ್ನುವುದನ್ನು ಪೊಲೀಸರು ಪತ್ತೆ ಮಾಡಿದ್ದರು. ಆನಂತರ, ಬಿಗು ಭದ್ರತೆಯಲ್ಲಿ ಶಾರೀಕ್ ಗೆ ಚಿಕಿತ್ಸೆ ನೀಡಲಾಗಿತ್ತು.
Mangalore cooker blast case, Mohammad Shariq shifted to Bangalore from Mangalore for treatment. The accused, i Sharik, was admitted to the Father Muller Hospital in Karnataka's Mangaluru after he sustained 40-45 percent burn injuries due to a fire that broke out in an autorickshaw in the Kankanadi police station area.
30-06-25 10:30 pm
HK News Desk
CM Siddaramaiah, Dk Shivakumar, CM Post: ಹೇಯ್...
30-06-25 02:55 pm
ಅಕ್ರಮ ಗೋಸಾಗಣೆ ತಡೆದ ಶ್ರೀರಾಮ ಸೇನೆ ಕಾರ್ಯಕರ್ತರನ್ನ...
30-06-25 01:44 pm
Spike in Heart Attack, Hassan: Dr. Manjunath...
30-06-25 12:05 pm
Tumakuru accident, four killed: ಕ್ಯಾಂಟರ್ -...
30-06-25 11:04 am
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
30-06-25 10:59 pm
Mangalore Correspondent
Mangalore KDP Meeting: ಕೆಡಿಪಿ ಸಭೆಯಲ್ಲಿ ಮರಳು,...
30-06-25 08:19 pm
Mangalore, Rain, School News: ತರಗತಿ ನಡೆಯುತ್ತಿ...
30-06-25 03:20 pm
Mangalore Bomb Threat, Airport: ಮಂಗಳೂರು ಸೇರಿ...
30-06-25 01:07 pm
Red Stone Quarry, Dakshina Kannada, Protest:...
27-06-25 10:17 pm
30-06-25 06:12 pm
Giridhar Shetty, Mangaluru
Olx Fraud, Mangalore: ಓಎಲ್ ಎಕ್ಸ್ ನಲ್ಲಿ ಕಾರು ಮ...
29-06-25 11:23 pm
Udupi Crime, Kapu, Railway: ರೈಲಿನಲ್ಲಿ ಉಡುಪಿಗೆ...
29-06-25 11:15 pm
Davanagere ATM Robbery : ಪೆಟ್ರೋಲ್ ಸುರಿದು ಎಟಿಎ...
29-06-25 04:26 pm
Tumakuru Husband Murder, Wife arrest, Crime:...
29-06-25 02:26 pm