ಬ್ರೇಕಿಂಗ್ ನ್ಯೂಸ್
30-07-20 02:47 pm Mangalore Reporter ಕರಾವಳಿ
ಮಂಗಳೂರು, ಜುಲೈ 30: ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಪುಣ್ಯಕ್ಷೇತ್ರ ಧರ್ಮಸ್ಥಳದಲ್ಲಿ ಹೊಸ ಉಪಾಯ ಕಂಡುಕೊಳ್ಳಲಾಗಿದೆ. ಸಾವಯವ ಸ್ಯಾನಿಟೈಸರ್ ಬಳಸಿ, ಸಾಮೂಹಿಕವಾಗಿ ಜನರ ಮೇಲೆ ಸಿಂಪಡಣೆಗೆ ಯೋಜನೆ ರೂಪಿಸಲಾಗಿದೆ.
ಸಾಮೂಹಿಕವಾಗಿ ಜನ ಸೇರುವ ಪ್ರದೇಶದಲ್ಲಿ ಸೋಂಕು ತಡೆಗಟ್ಟುವ ವಿಧಾನದ ಬಗ್ಗೆ ಗಂಭೀರ ಚರ್ಚೆಗಳು ನಡೆದಿರುವಾಗಲೇ ಈ ಸಮಸ್ಯೆಗೆ ಪರಿಹಾರ ಎಂಬಂತೆ ಚೆನ್ನೈ ಮೂಲದ ಸಂಸ್ಥೆಯೊಂದು ಧರ್ಮಸ್ಥಳದಲ್ಲಿ ಡ್ರೋನ್ ಮೂಲಕ ಸಾವಯವ ಸ್ಯಾನಿಟೈಸರ್ ಸಿಂಪಡಿಸುವ ವಿಧಾನದ ಪ್ರಾತ್ಯಕ್ಷಿಕೆ ನೀಡಿದೆ.
ಚೆನ್ನೈ ಮೂಲದ ಸುಗಾರಾಧನಾ ಎನ್ನುವ ತಂಡ ಸಾವಯವ ಸ್ಯಾನಿಟೈಸರ್ ಅನ್ನು ಡ್ರೋನ್ ಮೂಲಕ ಪರಿಸರದಲ್ಲಿ ಸಿಂಪಡಿಸುವ ಪ್ರಾತ್ಯಕ್ಷಿಕೆ ನೀಡಿದೆ. ಪ್ರತಿದಿನ ರಾಜ್ಯದ ವಿವಿಧ ಭಾಗಗಳಿಂದ ಧರ್ಮಸ್ಥಳಕ್ಕೆ ಸಾವಿರಾರು ಭಕ್ತರು ಬರುತ್ತಾರೆ. ಇಂಥ ಪ್ರದೇಶದಲ್ಲಿ ಕೊರೊನಾ ಸೋಂಕು ಹರಡುವ ಸಾಧ್ಯತೆ ಹೆಚ್ಚಿರುತ್ತದೆ. ಈ ನಿಟ್ಟಿನಲ್ಲಿ ಕ್ಷೇತ್ರದ ಸುತ್ತಮುತ್ತ ಡ್ರೋನ್ ಮೂಲಕ ಸಾವಯವ ಸ್ಯಾನಿಟೈಸರ್ ಸಿಂಪಡಿಸಲು ಯೋಜನೆ ರೂಪಿಸಲಾಗಿದೆ. ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗಡೆ ಸ್ಯಾನಿಟೈಸರ್ ಸಿಂಪಡಣೆ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ.
ಸಂಪೂರ್ಣ ಸಾವಯವ ವಸ್ತುಗಳನ್ನು ಬಳಸಿಕೊಂಡು ಈ ಸ್ಯಾನಿಟೈಸರ್ ತಯಾರಿಸಲಾಗಿದ್ದು, ಕೊರೊನಾ ಸೋಂಕು ತಡೆಯುವಲ್ಲಿ ಇದು ಅತ್ಯಂತ ಪರಿಣಾಮಕಾರಿ ಎಂದು ಹೇಳಲಾಗಿದೆ. ತಮಿಳುನಾಡಿನ ಕೊರೊನಾ ಪೀಡಿತ ಪ್ರದೇಶಗಳಲ್ಲಿ ಇದೇ ಮಾದರಿಯ ಡ್ರೋಣ್ ಮೂಲಕ ಸ್ಯಾನಿಟೈಸರ್ ಸಿಂಪಡಣೆ ಮಾಡಲಾಗಿದೆ. ಅಣ್ಣಾ ವಿಶ್ವವಿದ್ಯಾನಿಲಯದ ಎಂ.ಐ.ಟಿ ವಿದ್ಯಾರ್ಥಿಗಳು ಈ ಡ್ರೋನ್ ತಯಾರಿಸಿದ್ದಾರೆ. 16 ಲೀಟರ್ ಸ್ಯಾನಿಟೈಸರ್ ತುಂಬಿಸಿಕೊಂಡು ಹಾರಾಡುವ ಸಾಮರ್ಥ್ಯ ಈ ಡ್ರೋನ್ ಗಿದ್ದು, ದೊಡ್ಡ ಕಟ್ಟಡಗಳನ್ನು ಈ ಡ್ರೋನ್ ಮೂಲಕ ಸಂಪೂರ್ಣ ಸ್ಯಾನಿಟೈಸ್ ಮಾಡಬಹುದಾಗಿದೆ.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm